AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಸೇನೆಯವರು ಕನ್ನಡಿಗರಿಗೆ ಚಿರಋಣಿ ಆಗಿರಬೇಕು: ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ

ಶಿವಸೇನೆಯವರು ಸದಾ ಕನ್ನಡಿಗರಿಗೆ ಚಿರ ಋಣಿಗಳಾಗಿರಬೇಕು. ಅವರ ಆರಾಧ್ಯ ದೊರೆ ಛತ್ರಪತಿ ಶಿವಾಜಿಯವರ ಎರಡನೇ ಮಗನಿಗೆ ಆಶ್ರಯ ನೀಡಿ‌ ಔರಂಗಜೇಬನ ಸೈನ್ಯದಿಂದ ಕಾಪಾಡಿದ್ದು ಕನ್ನಡದ ವೀರ‌ರಾಣಿ‌ ಕೆಳದಿ ಚೆನ್ನಮ್ಮ.

ಶಿವಸೇನೆಯವರು ಕನ್ನಡಿಗರಿಗೆ ಚಿರಋಣಿ ಆಗಿರಬೇಕು: ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ
ಕರವೇ ರಾಜ್ಯಾಧ್ಯಕ್ಷ ಟಿ. ಎ ನಾರಾಯಣಗೌಡ
ಪೃಥ್ವಿಶಂಕರ
| Edited By: |

Updated on:Jan 18, 2021 | 12:39 PM

Share

ಬೆಂಗಳೂರು: ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿಯ ಬಗ್ಗೆ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ದ ಸರಣಿ ಟ್ವೀಟ್‌ ಮಾಡುವ ಮೂಲಕ ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಹಿಂದಕ್ಕೆ ಪಡೆಯುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಇದು ಕುಚೇಷ್ಟೆ. ಶಿವಸೇನೆಯವರಿಗೆ ಮೂರು ತಿಂಗಳಿಗೊಮ್ಮೆ ಗಡಿ ತಂಟೆ ಕೆದಕದಿದ್ದರೆ ತಿಂದಿದ್ದು ಅರಗುವುದಿಲ್ಲ. ಹೀಗೆ ಮಾತಾಡುವುದರಿಂದ ಉದ್ಧವ್ ಠಾಕ್ರೆ ಪದೇಪದೇ ಅಪಹಾಸ್ಯಕ್ಕೆ ಗುರಿಯಾಗುತ್ತಿದ್ದಾರೆ.

ವಾಸ್ತವಾಂಶ ಏನು ಎಂಬುದನ್ನು ಉದ್ಧವ್ ಠಾಕ್ರೆ ಮರಾಠಿ ಇತಿಹಾಸಕಾರರಿಂದ ತಿಳಿದುಕೊಳ್ಳಲಿ. ಇಡೀ‌ ಮಹಾರಾಷ್ಟ್ರದ ಮುಕ್ಕಾಲು ಭಾಗ ಹಿಂದೆ ಕರ್ನಾಟಕವೇ ಆಗಿತ್ತು. ಮಹಾರಾಷ್ಟ್ರದ ಮೂಲೆಮೂಲೆಗಳಲ್ಲಿ ಸಿಕ್ಕಿರುವ ಶಾಸನಗಳು ಕನ್ನಡದಲ್ಲಿ ಬರೆಯಲ್ಪಟ್ಟಿವೆ. ಯಾರ ಪ್ರದೇಶವನ್ನು ಯಾರು ಆಕ್ರಮಿಸಿಕೊಂಡಿದ್ದಾರೆಂದು ಅವರು ಅರಿತು ಮಾತನಾಡಲಿ.

ಶಿವಸೇನೆಯವರು ಸದಾ ಕನ್ನಡಿಗರಿಗೆ ಚಿರ ಋಣಿಗಳಾಗಿರಬೇಕು.. ಹಾಗೆ ನೋಡಿದರೆ, ಶಿವಸೇನೆಯವರು ಸದಾ ಕನ್ನಡಿಗರಿಗೆ ಚಿರ ಋಣಿಗಳಾಗಿರಬೇಕು. ಅವರ ಆರಾಧ್ಯ ದೊರೆ ಛತ್ರಪತಿ ಶಿವಾಜಿಯವರ ಎರಡನೇ ಮಗನಿಗೆ ಆಶ್ರಯ ನೀಡಿ‌ ಔರಂಗಜೇಬನ ಸೈನ್ಯದಿಂದ ಕಾಪಾಡಿದ್ದು ಕನ್ನಡದ ವೀರ‌ರಾಣಿ‌ ಕೆಳದಿ ಚೆನ್ನಮ್ಮ. ಕನ್ನಡಿಗರು ಆಶ್ರಯದಾತರು, ಆಕ್ರಮಣಕಾರಿಗಳಲ್ಲ ಎಂಬುದನ್ನು ಠಾಕ್ರೆ ಅರಿತುಕೊಳ್ಳಲಿ.

ಮೆಹರ್ ಚಂದ್ ಮಹಾಜನ್ ಆಯೋಗ ರಚನೆಯಾಗಿದ್ದೇ ಮಹಾರಾಷ್ಟ್ರದ ಒತ್ತಡದ ಮೇರೆಗೆ. ಆಯೋಗದ‌ ವರದಿಯನ್ನು ಒಪ್ಪಿಕೊಳ್ಳಲೇಬೇಕು ಎಂದು ಮಹಾರಾಷ್ಟ್ರ ರಾಜಕಾರಣಿಗಳು ಕರ್ನಾಟಕಕ್ಕೆ ತಾಕೀತು ಮಾಡಿದ್ದರು. ಆದರೆ ಆಯೋಗದ ವರದಿ ಬಂದನಂತರ ಮಹಾರಾಷ್ಟ್ರ ಸರ್ಕಾರ ಮಾತಿಗೆ ತಪ್ಪಿತು. ವರದಿಯನ್ನು ಒಪ್ಪುವುದಿಲ್ಲ ಎಂದು ತಗಾದೆ ತೆಗೆಯಿತು.

ಮಹಾರಾಷ್ಟ್ರ ಸುಪ್ರೀಂ ಕೋರ್ಟ್​ಗೆ ಹೋಗಿದೆ.. ಗಡಿವಿವಾದ ಪರಿಹಾರಕ್ಕೆ ಮಹಾಜನ್ ಆಯೋಗದ ವರದಿಯೇ ಅಂತಿಮ ಎಂಬುದು ಕರ್ನಾಟಕ ಪ್ರತಿಪಾದಿಸಿಕೊಂಡು ಬಂದಿರುವ ನಿಲುವು. ಆದರೆ ಬೆಳಗಾವಿ ತಮಗೆ ಸೇರಬೇಕೆಂಬ ಕಾರಣಕ್ಕೆ ಮಹಾರಾಷ್ಟ್ರ ಸುಪ್ರೀಂ ಕೋರ್ಟ್​ಗೆ ಹೋಗಿದೆ. ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ನೀಡಿರುವ ಪ್ರಮಾಣಪತ್ರದಲ್ಲೂ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ದೆಂದು ಹೇಳಿದೆ.

ವಾಸ್ತವ ಹೀಗಿರುವಾಗ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮನಸಿಗೆ ಬಂದಂತೆ ಹೇಳಿಕೆ ನೀಡುವುದು ಅವರ ಅಪ್ರಬುದ್ಧತೆಯನ್ನು ತೋರಿಸುತ್ತದೆ. ಇಂಥ ಬಾಯಿಮಾತಿನ ಹೇಳಿಕೆಗಳಿಂದ ಏನೂ ಬದಲಾಗುವುದಿಲ್ಲ. ಕೀಳು ರಾಜಕೀಯಕ್ಕಾಗಿ ಭಾಷಾ ಸಮುದಾಯಗಳ ನಡುವೆ ಬೆಂಕಿ ಹಚ್ಚುವುದು ದುಷ್ಟತನ.

ಉದ್ಧವ್ ಠಾಕ್ರೆಗೆ ಈ ಸಾಮಾನ್ಯ ಜ್ಞಾನ ಇಲ್ಲ.. ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಕೇರಳ ರಾಜ್ಯಗಳು ಪ್ರಗತಿಪರ ರಾಜ್ಯಗಳಾಗಿದ್ದು, ಅತಿಹೆಚ್ಚು ತೆರಿಗೆ ಸಂಗ್ರಹಿಸಿಕೊಡುತ್ತವೆ. ಆದರೂ ಈ ರಾಜ್ಯಗಳ ಮೇಲೆ ಹಿಂದಿ ಸಾಮ್ರಾಜ್ಯಶಾಹಿ ದಬ್ಬಾಳಿಕೆ ನಡೆಸುತ್ತಿದೆ. ಇಂಥ ಸಂದರ್ಭದಲ್ಲಿ ನಾವೆಲ್ಲರೂ ಒಂದಾಗಿ ಹೋರಾಟ ನಡೆಸಬೇಕಿತ್ತು. ಉದ್ಧವ್ ಠಾಕ್ರೆಗೆ ಈ ಸಾಮಾನ್ಯ ಜ್ಞಾನ ಇಲ್ಲದಿರುವುದು ವಿಷಾಧನೀಯ.

ಶಿವಸೇನೆ, ಎಂಇಎಸ್ ಕುತಂತ್ರಗಳಿಗೆ, ಕಿತಾಪತಿಗಳಿಗೆ ಬಗ್ಗುವ ಪ್ರಶ್ನೆಯೇ ಇಲ್ಲ. ಕರ್ನಾಟಕದ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ.‌ ಕಿತ್ತೂರು ರಾಣಿ ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ನೆಲೆವೀಡು ಬೆಳಗಾವಿಯನ್ನು ದಕ್ಕಿಸಿಕೊಳ್ಳುವ ಹಗಲುಗನಸು ಕಾಣುವುದನ್ನು ಬಿಟ್ಟು ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಒಳಿತಿಗಾಗಿ ಕೆಲಸ ಮಾಡಲಿ ಎಂದು .

ಸೊಲ್ಲಾಪುರ, ಮುಂಬೈನ ಅರ್ಧ ಭಾಗ ಕರ್ನಾಟಕ ರಾಜ್ಯಕ್ಕೆ ಸೇರಬೇಕು: ವಾಟಾಳ್ ನಾಗರಾಜ್

Published On - 9:41 am, Mon, 18 January 21

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು