AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishi Sunak: ಹೆಮ್ಮೆಯಾಗುತ್ತಿದೆ; ಅಳಿಯ ರಿಷಿ ಸುನಕ್​ರನ್ನು ಅಭಿನಂದಿಸಿದ ನಾರಾಯಣ ಮೂರ್ತಿ

ಬ್ರಿಟನ್​ನ ನೂತನ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ರಿಷಿ ಸುನಕ್​ರನ್ನು ಅವರ ಮಾವ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅಭಿನಂದಿಸಿದ್ದಾರೆ.

Rishi Sunak: ಹೆಮ್ಮೆಯಾಗುತ್ತಿದೆ; ಅಳಿಯ ರಿಷಿ ಸುನಕ್​ರನ್ನು ಅಭಿನಂದಿಸಿದ ನಾರಾಯಣ ಮೂರ್ತಿ
ಇನ್ಫೋಸಿಸ್‌ನ ಸಹ ಸಂಸ್ಥಾಪಕ ಎನ್‌ಆರ್ ನಾರಾಯಣ ಮೂರ್ತಿ
TV9 Web
| Updated By: Ganapathi Sharma|

Updated on: Oct 25, 2022 | 11:40 AM

Share

ಬೆಂಗಳೂರು: ಬ್ರಿಟನ್​ನ ನೂತನ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ರಿಷಿ ಸುನಕ್​ರನ್ನು (Rishi Sunak) ಅವರ ಮಾವ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ (Narayana Murthy) ಅಭಿನಂದಿಸಿದ್ದಾರೆ. ತಮ್ಮ ಅಳಿಯ ಉನ್ನತ ಹುದ್ದೆಗೇರಿರುವುದು ಹೆಮ್ಮೆ ತಂದಿದೆ ಎಂದು ಅವರು ಹೇಳಿದ್ದಾರೆ.

‘ಅಭಿನಂದನೆಗಳು ರಿಷಿ. ಆತನ ಬಗ್ಗೆ ನಮಗೆ ಹೆಮ್ಮೆ ಇದೆ. ಆತನಿಗೆ ಯಶಸ್ಸನ್ನು ಹಾರೈಸುತ್ತೇವೆ. ಆತ ಬ್ರಿಟನ್​ನ ಜನತೆಗೆ ಅತ್ಯುತ್ತಮವಾದ ಸೇವೆ ನೀಡುವ ಬಗ್ಗೆ ನಮಗೆ ವಿಶ್ವಾಸವಿದೆ’ ಎಂದು ನಾರಾಯಣ ಮೂರ್ತಿ ಹೇಳಿದ್ದಾರೆ. ರಿಷಿ ಸುನಕ್ ಪ್ರಧಾನಿ ಹುದ್ದೆಗೆ ಆಯ್ಕೆಯಾದ ಬಳಿಕ ನಾರಾಯಣ ಮೂರ್ತಿ ನೀಡಿದ ಮೊದಲ ಪ್ರತಿಕ್ರಿಯೆ ಇದಾಗಿತ್ತು ಎಂದು ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: ಬ್ರಿಟನ್ ಪ್ರಧಾನಿಯಾಗಿ ಅಳಿಯ ರಿಷಿ ಸುನಕ್ ಆಯ್ಕೆ: ಬೆಂಗಳೂರಿನ ಸುಧಾಮೂರ್ತಿ ನಿವಾಸದಲ್ಲಿ ಸಂಭ್ರಮಾಚರಣೆ

ಬ್ರಿಟನ್ ಅರ್ಥವ್ಯವಸ್ಥೆ ಅಧಃಪತನ ಹಿನ್ನೆಲೆಯಲ್ಲಿ ಕನ್ಸರ್ವೇಟಿವ್ ಪಕ್ಷದ ಬೋರಿಸ್ ಜಾನ್ಸನ್ ಪ್ರಧಾನಿ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದರು. ಬಳಿಕ ಪಕ್ಷದಿಂದ ರಿಷಿ ಸುನಕ್ ಮೊದಲ ಬಾರಿಗೆ ಪ್ರಧಾನಿ ಹುದ್ದೆಗೆ ಸ್ಪರ್ಧಿಸಿದ್ದರು. ಆದರೆ, ತಮ್ಮದೇ ಪಕ್ಷದ ಲಿಜ್ ಟ್ರಸ್ ಎದುರು ಸೋಲನುಭವಿಸಿದ್ದರು. ಬಳಿಕ ದೇಶದ ಅರ್ಥವ್ಯವಸ್ಥೆ ಸುಧಾರಣೆಗೆ ಬೇಕಾದ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲರಾದ ಕಾರಣಕ್ಕೆ ನೈತಿಕ ಹೊಣೆ ಹೊತ್ತು ಲಿಜ್ ಟ್ರಸ್ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ರಿಷಿ ಸುನಕ್ ಅವರನ್ನು ಪ್ರಧಾನಿ ಹುದ್ದೆಗೆ ಪಕ್ಷ ಆಯ್ಕೆ ಮಾಡಿದೆ.

1980ರ ಮೇ 12ರಂದು ಬ್ರಿಟನ್​ನಲ್ಲಿ ರಿಷಿ ಸುನಕ್ ಜನಿಸಿದ್ದರು. ಯಶ್ವೀರ್-ಉಷಾ ದಂಪತಿ ಪುತ್ರನಾಗಿರೋ ರಿಷಿ ಸುನಕ್ ಅಜ್ಜ-ಅಜ್ಜಿ ಇಬ್ಬರೂ ಪಂಜಾಬ್ ಮೂಲದವರಾಗಿದ್ದಾರೆ. 2009ರಲ್ಲಿ ನಾರಾಯಣಮೂರ್ತಿ-ಸುಧಾಮೂರ್ತಿ ದಂಪತಿ ಪುತ್ರಿ ಅಕ್ಷತಾ ಮೂರ್ತಿ ಜೊತೆಗೆ ರಿಷಿ ಸುನಕ್ ವಿವಾಹವಾಗಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!