AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ದಂಧೆ: ಕಳಚಿಕೊಳ್ಳಲಾರಂಭಿಸಿದ ಮುಖವಾಡಗಳು!

ಮಾದಕ ಪದಾರ್ಥ ಜಾಲದ ವಿರುದ್ಧ ತನಿಖೆಯನ್ನು ಚುರುಕುಗೊಳಿಸಿರುವ ಎನ್​ಸಿಬಿ ಅಧಿಕಾರಿಗಳು ಮಲಯಾಳಂ ನಟನೊಬ್ಬನ ಜೊತೆ ಸಂಪರ್ಕವಿಟ್ಟುಕೊಂಡಿರುವ ಮೊಹಮ್ಮದ್ ಅನೂಪ್ ಹೆಸರಿನ 38 ವರ್ಷದ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.  ತನಿಖೆ ವೇಳೆ ಮಲಯಾಳಂ ನಟ ಬಿನೀಶ್​ ಕೊಡಿಯೇರಿಯ ಹೆಸರನ್ನು ಅನೂಪ್ ಬಹಿರಂಗಗೊಳಿಸಿದ್ದಾನೆ. ಅವನ ಹೇಳಿಕೆ ಮತ್ತು ಎನ್​ಸಿಬಿ ಮೂಲಗಳ ಪ್ರಕಾರ ಬಿನೀಶ್, ಅನೂಪ್​ ಒಡೆತನದ ರೆಸ್ಟೋರಂಟ್ ಒಂದಕ್ಕೆ ಧನಸಹಾಯ ಮಾಡಿದ್ದನಂತೆ. 2013 ರಿಂದ ಬೆಂಗಳೂರಿನಲ್ಲಿ ನೆಲೆಸಿರುವುದಾಗಿ ಹೇಳಿರುವ ಆನೂಪ್ 2015ರಲ್ಲಿ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ರೆಸ್ಟೋರೆಂಟ್​​ ಆರಂಭಿಸಿದೆನೆಂದು ಎನ್​ಸಿಬಿ […]

ಡ್ರಗ್ಸ್ ದಂಧೆ: ಕಳಚಿಕೊಳ್ಳಲಾರಂಭಿಸಿದ ಮುಖವಾಡಗಳು!
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 02, 2020 | 9:12 PM

Share

ಮಾದಕ ಪದಾರ್ಥ ಜಾಲದ ವಿರುದ್ಧ ತನಿಖೆಯನ್ನು ಚುರುಕುಗೊಳಿಸಿರುವ ಎನ್​ಸಿಬಿ ಅಧಿಕಾರಿಗಳು ಮಲಯಾಳಂ ನಟನೊಬ್ಬನ ಜೊತೆ ಸಂಪರ್ಕವಿಟ್ಟುಕೊಂಡಿರುವ ಮೊಹಮ್ಮದ್ ಅನೂಪ್ ಹೆಸರಿನ 38 ವರ್ಷದ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 

ತನಿಖೆ ವೇಳೆ ಮಲಯಾಳಂ ನಟ ಬಿನೀಶ್​ ಕೊಡಿಯೇರಿಯ ಹೆಸರನ್ನು ಅನೂಪ್ ಬಹಿರಂಗಗೊಳಿಸಿದ್ದಾನೆ. ಅವನ ಹೇಳಿಕೆ ಮತ್ತು ಎನ್​ಸಿಬಿ ಮೂಲಗಳ ಪ್ರಕಾರ ಬಿನೀಶ್, ಅನೂಪ್​ ಒಡೆತನದ ರೆಸ್ಟೋರಂಟ್ ಒಂದಕ್ಕೆ ಧನಸಹಾಯ ಮಾಡಿದ್ದನಂತೆ.

2013 ರಿಂದ ಬೆಂಗಳೂರಿನಲ್ಲಿ ನೆಲೆಸಿರುವುದಾಗಿ ಹೇಳಿರುವ ಆನೂಪ್ 2015ರಲ್ಲಿ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ರೆಸ್ಟೋರೆಂಟ್​​ ಆರಂಭಿಸಿದೆನೆಂದು ಎನ್​ಸಿಬಿ ಅಧಿಕಾರಿಗಳಿಗೆ ತಿಳಿಸಿದ್ದಾನೆ. ಸದರಿ ಹೋಟೆಲನ್ನು ಪ್ರಾರಂಭಿಸಲು ಅವನಿಗೆ ಬಿನೀಶ್ ಹಣ ನೀಡಿದ್ದ.

ಅನೂಪ್ ಆಫ್ರಿಕನ್ ಪ್ರಜೆಗಳಿಂದ MDMA ಮಾತ್ರೆಗಳನ್ನು ಖರೀದಿಸಿ ಬೇರೆಯವರಿಗೆ ಮಾರುತ್ತಿದ್ದನೆಂದು ವಿಚಾರಣೆ ವೇಳೆ ಗೊತ್ತಾಗಿದೆ.

ಏತನ್ಮಧ್ಯೆ, ಸಿಸಿಬಿ ಆಧಿಕಾರಿಗಳು ಖ್ಯಾತ ಬಹುಭಾಷೆ ತಾರೆಯೊಬ್ಬಳ ಸ್ನೇಹಿತನನ್ನು ಬಂಧಿಸಿದ್ದು ಅವನ ವಿಚಾರಣೆ ನಡೆಸಿದ್ದಾರೆ. ಅವನ ಹೆಸರು ರವಿಶಂಕರ್ ಎಂದು ತಿಳಿದುಬಂದಿದ್ದು ಅವನು ನೀಡಿದ ಮಾಹಿತಿ ಮೇರೆಗೆ ಆ ನಟಿಗೂ ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆಯೆಂದು ಸಿಸಿಬಿ ಮೂಲಗಳು ತಿಳಿಸಿವೆ.

  

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ