AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ದಂಧೆ: ಕಳಚಿಕೊಳ್ಳಲಾರಂಭಿಸಿದ ಮುಖವಾಡಗಳು!

ಮಾದಕ ಪದಾರ್ಥ ಜಾಲದ ವಿರುದ್ಧ ತನಿಖೆಯನ್ನು ಚುರುಕುಗೊಳಿಸಿರುವ ಎನ್​ಸಿಬಿ ಅಧಿಕಾರಿಗಳು ಮಲಯಾಳಂ ನಟನೊಬ್ಬನ ಜೊತೆ ಸಂಪರ್ಕವಿಟ್ಟುಕೊಂಡಿರುವ ಮೊಹಮ್ಮದ್ ಅನೂಪ್ ಹೆಸರಿನ 38 ವರ್ಷದ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.  ತನಿಖೆ ವೇಳೆ ಮಲಯಾಳಂ ನಟ ಬಿನೀಶ್​ ಕೊಡಿಯೇರಿಯ ಹೆಸರನ್ನು ಅನೂಪ್ ಬಹಿರಂಗಗೊಳಿಸಿದ್ದಾನೆ. ಅವನ ಹೇಳಿಕೆ ಮತ್ತು ಎನ್​ಸಿಬಿ ಮೂಲಗಳ ಪ್ರಕಾರ ಬಿನೀಶ್, ಅನೂಪ್​ ಒಡೆತನದ ರೆಸ್ಟೋರಂಟ್ ಒಂದಕ್ಕೆ ಧನಸಹಾಯ ಮಾಡಿದ್ದನಂತೆ. 2013 ರಿಂದ ಬೆಂಗಳೂರಿನಲ್ಲಿ ನೆಲೆಸಿರುವುದಾಗಿ ಹೇಳಿರುವ ಆನೂಪ್ 2015ರಲ್ಲಿ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ರೆಸ್ಟೋರೆಂಟ್​​ ಆರಂಭಿಸಿದೆನೆಂದು ಎನ್​ಸಿಬಿ […]

ಡ್ರಗ್ಸ್ ದಂಧೆ: ಕಳಚಿಕೊಳ್ಳಲಾರಂಭಿಸಿದ ಮುಖವಾಡಗಳು!
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Sep 02, 2020 | 9:12 PM

Share

ಮಾದಕ ಪದಾರ್ಥ ಜಾಲದ ವಿರುದ್ಧ ತನಿಖೆಯನ್ನು ಚುರುಕುಗೊಳಿಸಿರುವ ಎನ್​ಸಿಬಿ ಅಧಿಕಾರಿಗಳು ಮಲಯಾಳಂ ನಟನೊಬ್ಬನ ಜೊತೆ ಸಂಪರ್ಕವಿಟ್ಟುಕೊಂಡಿರುವ ಮೊಹಮ್ಮದ್ ಅನೂಪ್ ಹೆಸರಿನ 38 ವರ್ಷದ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 

ತನಿಖೆ ವೇಳೆ ಮಲಯಾಳಂ ನಟ ಬಿನೀಶ್​ ಕೊಡಿಯೇರಿಯ ಹೆಸರನ್ನು ಅನೂಪ್ ಬಹಿರಂಗಗೊಳಿಸಿದ್ದಾನೆ. ಅವನ ಹೇಳಿಕೆ ಮತ್ತು ಎನ್​ಸಿಬಿ ಮೂಲಗಳ ಪ್ರಕಾರ ಬಿನೀಶ್, ಅನೂಪ್​ ಒಡೆತನದ ರೆಸ್ಟೋರಂಟ್ ಒಂದಕ್ಕೆ ಧನಸಹಾಯ ಮಾಡಿದ್ದನಂತೆ.

2013 ರಿಂದ ಬೆಂಗಳೂರಿನಲ್ಲಿ ನೆಲೆಸಿರುವುದಾಗಿ ಹೇಳಿರುವ ಆನೂಪ್ 2015ರಲ್ಲಿ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ರೆಸ್ಟೋರೆಂಟ್​​ ಆರಂಭಿಸಿದೆನೆಂದು ಎನ್​ಸಿಬಿ ಅಧಿಕಾರಿಗಳಿಗೆ ತಿಳಿಸಿದ್ದಾನೆ. ಸದರಿ ಹೋಟೆಲನ್ನು ಪ್ರಾರಂಭಿಸಲು ಅವನಿಗೆ ಬಿನೀಶ್ ಹಣ ನೀಡಿದ್ದ.

ಅನೂಪ್ ಆಫ್ರಿಕನ್ ಪ್ರಜೆಗಳಿಂದ MDMA ಮಾತ್ರೆಗಳನ್ನು ಖರೀದಿಸಿ ಬೇರೆಯವರಿಗೆ ಮಾರುತ್ತಿದ್ದನೆಂದು ವಿಚಾರಣೆ ವೇಳೆ ಗೊತ್ತಾಗಿದೆ.

ಏತನ್ಮಧ್ಯೆ, ಸಿಸಿಬಿ ಆಧಿಕಾರಿಗಳು ಖ್ಯಾತ ಬಹುಭಾಷೆ ತಾರೆಯೊಬ್ಬಳ ಸ್ನೇಹಿತನನ್ನು ಬಂಧಿಸಿದ್ದು ಅವನ ವಿಚಾರಣೆ ನಡೆಸಿದ್ದಾರೆ. ಅವನ ಹೆಸರು ರವಿಶಂಕರ್ ಎಂದು ತಿಳಿದುಬಂದಿದ್ದು ಅವನು ನೀಡಿದ ಮಾಹಿತಿ ಮೇರೆಗೆ ಆ ನಟಿಗೂ ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆಯೆಂದು ಸಿಸಿಬಿ ಮೂಲಗಳು ತಿಳಿಸಿವೆ.

  

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ