AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಸಾಧ್ಯತೆ ಕಡಿಮೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಬಹುತೇಕ ಖಚಿತ: ಕೊರೊನಾ ನಿಯಂತ್ರಣ ಬಗ್ಗೆ ಇಂದು ಮೋದಿ ಸಭೆ

ಕೊರೊನಾ ಸೋಂಕು ಏಕಾಏಕಿ ಏರುಗತಿಯಲ್ಲಿ ಸಾಗಲಾರಂಭಿಸಿದರೆ ಹೇಗೆ ನಿಯಂತ್ರಿಸಬೇಕು? ಲಾಕ್ಡೌನ್ ಮಾಡಬೇಕಾ, ಬೇಡವಾ? ಎರಡನೇ ಅಲೆ ತಡೆಗಟ್ಟಲು ತೆಗೆದುಕೊಂಡಿರುವ ನಿರ್ಣಯಗಳೇನು? ಎಂಬಿತ್ಯಾದಿ ವಿಚಾರಗಳು ಸಭೆಯಲ್ಲಿ ಪ್ರಸ್ತಾಪವಾಗಲಿವೆ.

ಲಾಕ್​ಡೌನ್​ ಸಾಧ್ಯತೆ ಕಡಿಮೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಬಹುತೇಕ ಖಚಿತ: ಕೊರೊನಾ ನಿಯಂತ್ರಣ ಬಗ್ಗೆ ಇಂದು ಮೋದಿ ಸಭೆ
ಸಿಎಂ ಬಿ.ಎಸ್​.ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ
Skanda
|

Updated on:Mar 17, 2021 | 11:05 AM

Share

ಬೆಂಗಳೂರು: ದೇಶಾದ್ಯಂತ ಕೊರೊನಾ ಆತಂಕ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿ, ನಿರ್ಧಾರ ಕೈಗೊಳ್ಳುವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು (ಮಾರ್ಚ್​ 17) ಮಧ್ಯಾಹ್ನ 12.30ರ ಸುಮಾರಿಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಲಿದ್ದಾರೆ. ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ವಿಧಾನಸೌಧದ ಕಚೇರಿಯಿಂದ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗಿತ್ತುರುವ ಬಗ್ಗೆ ಹಾಗೂ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಕುರಿತಾಗಿ ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಕೊರೊನಾ ಸೋಂಕು ಏಕಾಏಕಿ ಏರುಗತಿಯಲ್ಲಿ ಸಾಗಲಾರಂಭಿಸಿದರೆ ಹೇಗೆ ನಿಯಂತ್ರಿಸಬೇಕು? ಲಾಕ್ ಡೌನ್ ಮಾಡಬೇಕಾ, ಬೇಡವಾ? ಎರಡನೇ ಅಲೆ ತಡೆಗಟ್ಟಲು ತೆಗೆದುಕೊಂಡಿರುವ ನಿರ್ಣಯಗಳೇನು? ಎಂಬಿತ್ಯಾದಿ ವಿಚಾರಗಳು ಸಭೆಯಲ್ಲಿ ಪ್ರಸ್ತಾಪವಾಗಲಿವೆ. ಪ್ರಧಾನ ಮಂತ್ರಿ ಸೂಚನೆ ಮೇರೆಗೆ ಲಾಕ್‌ಡೌನ್ ಅಥವಾ ನೈಟ್ ಕರ್ಫ್ಯೂ ಭವಿಷ್ಯ ನಿರ್ಧಾರವಾಗಲಿದೆಯಾದರೂ ತಜ್ಞರು ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಮಾಡದಂತೆ ಸಲಹೆ ನೀಡಿದ್ದಾರೆ. ಹೀಗಾಗಿ ಇಂದು ನಡೆಯಲಿರುವ ಸಭೆ ಭಾರೀ ಕುತೂಹಲ ಮೂಡಿಸಿದೆ.

ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಈಗಾಗಲೇ ತಿಳಿಸಿದ್ದು, ನಿಯಮ ಪಾಲನೆ ಮಾಡದವರ ವಿರುದ್ಧ ದಂಡ ಪ್ರಯೋಗ ಮಾಡುವುದಾಗಿಯೂ ಎಚ್ಚರಿಕೆ ನೀಡಿದೆ. ಸಾರ್ವಜನಿಕ ವಾಹನಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಮಂದಿಯನ್ನ ಕರೆದೊಯ್ಯಬಾರದು, ಮದುವೆ, ಸಭೆ-ಸಮಾರಂಭ, ಧಾರ್ಮಿಕ ಹಾಗೂ ರಾಜಕೀಯ ಕಾರ್ಯಕ್ರಮಗಳಲ್ಲಿ 500 ಜನಕ್ಕಿಂತ ಹೆಚ್ಚು ಸೇರಬಾರದು ಎಂದು ಈಗಾಗಲೇ ಸೂಚಿಸಲಾಗಿದ್ದು, ಸಿನಿಮಾ, ಪ್ರತಿಭಟನೆಗಳಿಗೂ ನಿಯಂತ್ರಣ ತರಲು ಕೆಲ ಕಠಿಣ ನಿಯಮ ತರುವ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆ ಇದೆ.

ಇದೆಲ್ಲದರೊಟ್ಟಿಗೆ ಪ್ರತಿನಿತ್ಯ ಸುಮಾರು ಮೂರೂವರೆ ಲಕ್ಷ ಮಂದಿಗೆ ಕೊರೊನಾ ಲಸಿಕೆ ನೀಡುವುದು, ಕೊವಿಡ್ ಪರೀಕ್ಷೆ ಸಂಖ್ಯೆ ಹೆಚ್ಚಳ ಮಾಡುವುದು, ಹೊರರಾಜ್ಯಗಳಿಂದ ಆಗಮಿಸುವವರಿಗೆ ನೆಗೆಟಿವ್​ ವರದಿ ಇದ್ದರೆ ಮಾತ್ರ ಪ್ರವೇಶ ನೀಡುವುದು ಸೇರಿದಂತೆ ಹಲವು ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸುವ ಯೋಚನೆಯಲ್ಲಿ ಸರ್ಕಾರ ಇದೆ. ಏಪ್ರಿಲ್​ ಅಂತ್ಯದ ತನಕವೂ ಕಟ್ಟೆಚ್ಚರ ವಹಿಸಲು ಕ್ರಮ ಕೈಗೊಳ್ಳುವುದಾಗಿ ಪ್ರಧಾನಿಯೊಂದಿಗಿನ ಸಭೆಯಲ್ಲಿ ಬಿ.ಎಸ್​.ಯಡಿಯೂರಪ್ಪ ಪ್ರಸ್ತಾಪಿಸಲಿದ್ದು, ಪ್ರಧಾನಿ ನೀಡುವ ಸಲಹೆ ಮೇರೆಗೆ ಕೆಲವೊಂದು ನಿಯಮಗಳನ್ನ ಜಾರಿಗೆ ತರುಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಇಂದಿನಿಂದ ಮಾಸ್ಕ್​ ಕಡ್ಡಾಯ, ಯಾವುದೇ ಲಾಕ್​ಡೌನ್​ ಇಲ್ಲ: ಸಿಎಂ ಯಡಿಯೂರಪ್ಪ ಘೋಷಣೆ 

ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಆತಂಕ.. ಹೀಗೆಯೇ ಮುಂದುವರಿದ್ರೆ ಮುಂದೆ ಐತೆ ಮಾರಿಹಬ್ಬ, ತಜ್ಞರು ಹೇಳಿದ್ದೇನು?

Published On - 10:56 am, Wed, 17 March 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ