AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

17 ಚಾಕ್​ಪೀಸ್​ಗಳ ಮೇಲೆ ರಾಷ್ಟ್ರಗೀತೆಯ ಕೆತ್ತನೆ.. ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಯುವಕನ ಸಾಧನೆ

ಕೊರೊನಾದಿಂದ ಕಾಲೇಜ್ಗಳು ಬಂದ್ ಆಗಿದ್ರಿಂದ ಆತನಿಗೆ ಮನೆಯಲ್ಲಿ ಇದ್ದೂ ಇದ್ದೂ ಬೋರ್‌ ಆಗಿತ್ತು. ಹೊಸದೆನೋ ಕಲಿಯುವ ಹಂಬಲ ಮೂಡಿತ್ತು. ಏನಾದ್ರೂ ಸಾಧನೆ ಮಾಡ್ಬೇಕು ಎಂಬ ಸಂಕಲ್ಪ ಮಾಡಿದ್ದ. ಆತನ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದ್ದು, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಹೆಸರನ್ನ ದಾಖಲಿಸಿದ್ದಾನೆ.

17 ಚಾಕ್​ಪೀಸ್​ಗಳ ಮೇಲೆ ರಾಷ್ಟ್ರಗೀತೆಯ ಕೆತ್ತನೆ.. ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಯುವಕನ ಸಾಧನೆ
ಚಾಕ್ಪೀಸ್ಗಳ ಮೇಲೆ ರಾಷ್ಟ್ರಗೀತೆಯ ಕೆತ್ತನೆ
TV9 Web
| Edited By: ಆಯೇಷಾ ಬಾನು|

Updated on:Jul 04, 2021 | 8:19 AM

Share

ಕಾರವಾರ: ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದ ಬಸಾಕುಳಿ ಗ್ರಾಮದ ಯುವಕ ಪ್ರದೀಪ ನಾಯ್ಕ್ ಚಾಕ್ಪೀಸ್‌ನಲ್ಲಿ ತನ್ನ ಕಲೆಯನ್ನ ಪ್ರದರ್ಶಿಸಿ ಕಲೆಯ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತಮ್ಮ ಹೆಸರು ದಾಖಲಾಗುವಂತೆ ಮಾಡಿದ್ದಾರೆ.

ಸತತ 2 ವರ್ಷಗಳಿಂದ ಚಾಕ್ಪೀಸ್‌ನಲ್ಲಿ ಕೆತ್ತನೆಯನ್ನು ಹವ್ಯಾಸವಾಗಿಸಿಕೊಂಡ ಪ್ರದೀಪ್ ಮೊದ ಮೊದಲು ಇಂಗ್ಲಿಷ್ ಅಕ್ಷರಗಳನ್ನು ಕೆತ್ತುವ ಅಭ್ಯಾಸ ಮಾಡುತ್ತಿದ್ದರು. ಬಳಿಕ ತನ್ನ ಗೆಳೆಯರ ಹೆಸರು ಹಾಗೇ ಭಗತ್ ಸಿಂಗ್, ಬುದ್ಧ, ಗಾಂಧೀಜಿ ಸೇರಿ ಹಲವು ಮಹಾನ್ ವ್ಯಕ್ತಿಗಳ ಹೆಸರುಗಳನ್ನ ಕೆತ್ತಿ ಗಮನ ಸೆಳೆದಿದ್ರು. ಈಗ 17 ಚಾಕ್ಪೀಸ್ಗಳ ಮೇಲೆ 18 ಗಂಟೆಯಲ್ಲಿ ರಾಷ್ಟ್ರಗೀತೆಯನ್ನ ಕೆತ್ತುವ ಮೂಲಕ, ತಮ್ಮ ಹೆಸರನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ದಾಖಲಾಗುವಂತೆ ಮಾಡಿದ್ದಾರೆ.

india book of records

ಚಾಕ್ಪೀಸ್ಗಳ ಮೇಲೆ ರಾಷ್ಟ್ರಗೀತೆಯ ಕೆತ್ತನೆ

ಇನ್ನು ಪ್ರದೀಪ್‌ ಸಂಗೀತ, ತಬಲಾ, ಚಿತ್ರಕಲೆಯಲ್ಲಿಯೂ ಆಸಕ್ತಿ ಹೊಂದಿದ್ದಾರೆ. ಈಗ ಚಾಕ್ಪೀಸ್ ಆರ್ಟ್ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತಮ್ಮ ಹೆಸರು ಸೇರುವಂತೆ ಮಾಡಿದ್ದಾರೆ. ಈ ಸಾಧನೆಗೆ ತಂದೆ ಮಂಜುನಾಥ ನಾಯ್ಕ್, ತಾಯಿ ಚಂದ್ರಕಲಾ, ಗುರುಗಳು, ಸ್ನೆಹಿತರ ಬಳಗದಿಂದ ಅಭಿನಂದನೆಯ ಮಹಾಪೂರವೇ ಹರಿದುಬರುತ್ತಿದೆ.

ಒಟ್ಟಾರೇ ಮನಸ್ಸಿದ್ದರೆ ಯಾವುದೂ ಅಸಾಧ್ಯವಲ್ಲ ಅನ್ನೋದನ್ನ ಯುವಕ ಪ್ರದೀಪ ತೋರಿಸಿಕೊಟ್ಟಿದ್ದಾರೆ. ಇವರ ಈ ಸಾಧನೆ ಯುವಸಮುದಾಯಕ್ಕೆ ಪ್ರೇರಣೆಯಾಗಿದ್ದು, ಪ್ರದೀಪ್ ಮತ್ತಷ್ಟು ಸಾಧನೆ ಮಾಡಲಿ ಅಂತಾ ಹಾರೈಸೋಣ.

india book of records

ಚಾಕ್ಪೀಸ್ಗಳ ಮೇಲೆ ರಾಷ್ಟ್ರಗೀತೆಯ ಕೆತ್ತನೆ

india book of records

ಪ್ರದೀಪ ನಾಯ್ಕ್

ಇದನ್ನೂ ಓದಿ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ಹಾವೇರಿಯ ಬಾಲಕಿ ಹೆಸರು ಸೇರ್ಪಡೆ

Published On - 8:17 am, Sun, 4 July 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ