ಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ: ವರದಿ ಕೇಳಿದ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ

ಸಿಎಂ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಕಸರತ್ತು ನಡೆಸುತ್ತಿದೆ. ಎಸ್‌ಸಿಎಸ್‌ಪಿ-ಟಿಎಸ್‌ಪಿ ಮೀಸಲಿಟ್ಟಿದ್ದ 39,171 ಕೋಟಿ ರೂ. ಅನುದಾನದಲ್ಲಿ 14,282 ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ಈ ಕುರಿತಾಗಿ ಏಳು ದಿನಗಳೊಳಗೆ ಸಂಪೂರ್ಣ ವಿವರಣೆ ನೀಡುವಂತೆ ಸರ್ಕಾರಕ್ಕೆ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ವರದಿ ಕೇಳಿದೆ.

ಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ: ವರದಿ ಕೇಳಿದ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ
ಗ್ಯಾರಂಟಿ ಯೋಜನೆಗೆ CSP-TSP ಹಣ ಬಳಕೆ: ವರದಿ ಕೇಳಿದ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 10, 2024 | 4:46 PM

ಬೆಂಗಳೂರು, ಜುಲೈ 10: ಸರ್ಕಾರದ ಗ್ಯಾರಂಟಿ ಯೋಜನೆಗೆ ಎಸ್​ಸಿಎಸ್​ಪಿ, ಟಿಎಸ್​​​ಪಿ (SCSP, TSP) ಹಣ ಬಳಕೆ ವಿಚಾರವಾಗಿ ಏಳು ದಿನಗಳ ಒಳಗೆ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ವರದಿ ಕೇಳಿದೆ. ಎಸ್​ಸಿಎಸ್​ಪಿ, ಟಿಎಸ್​ಪಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆಯಾಗಿದೆ. ಹೀಗಾಗಿ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ಜಂಟಿ ಕಾರ್ಯದರ್ಶಿ ರಾಜೀವ್ ಕುಮಾರ್ ತಿವಾರಿ ರಾಜ್ಯ ಸರ್ಕಾರದ ಸಿಎಸ್​​ಗೆ ಪತ್ರ ಬರೆದಿದ್ದಾರೆ.

ಸಿಎಂ ಸಿದ್ದರಾಮಯ್ಯ ಸರ್ಕಾರದ ಪಂಚ ಯೋಜನೆಗಳಿಗೆ ಹಣ ಹೊಂದಿಸಲು ಕಸರತ್ತು ನಡೆಸಿದೆ. ಹೀಗಾಗಿ 2024-25ನೇ ಹಣಕಾಸು ವರ್ಷಕ್ಕಾಗಿ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಪಂಗಡದ ಉಪ ಯೋಜನೆಗೆ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಮೀಸಲಿಟ್ಟಿದ್ದ 39,171 ಕೋಟಿ ರೂ. ಅನುದಾನದಲ್ಲಿ 14,282 ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗೆ ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCP,TSP ಅನುದಾನ ಬಳಕೆ

ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಪಂಗಡದ ಉಪ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವುದನ್ನು ಬಿಜೆಪಿ ಈ ಹಿಂದೆ ಆರೋಪಿಸುವುದರೊಂದಿಗೆ ಆಗಸ್ಟ್​ನಲ್ಲಿ ಪ್ರತಿಭಟನೆ ಕೂಡ ಮಾಡಲಾಗಿತ್ತು.

ಎಸ್​ಸಿಎಸ್​ಪಿ, ಟಿಎಸ್​​​ಪಿ ಅನುದಾನವನ್ನು ಯಾವ ಯಾವ ಗ್ಯಾರಂಟಿ ಯೋಜನೆಗೆ ಎಷ್ಟು ಹಣ ಬಳಸಲಾಗಿದೆ.

  • ಗೃಹಲಕ್ಷ್ಮೀ ಯೋಜನೆಗೆ 7,881.91 ಕೋಟಿ ರೂ.
  • ಭಾಗ್ಯಲಕ್ಷ್ಮೀ ಯೋಜನೆಗೆ 70.28 ಕೋಟಿ ರೂ.
  • ಗೃಹಜ್ಯೋತಿ ಯೋಜನೆಗೆ 2585.93 ಕೋಟಿ ರೂ.
  • ಅನ್ನಭಾಗ್ಯ ಯೋಜನೆಗೆ 448.15 ಕೋಟಿ ರೂ.
  • ಅನ್ನಭಾಗ್ಯ ಯೋಜನೆಯ 2,187 ಕೋಟಿ ರೂ.
  • ಶಕ್ತಿ ಯೋಜನೆಗೆ 1451.45 ಕೋಟಿ ರೂ.
  • ಯುವನಿಧಿ ಯೋಜನೆಗೆ 175.50 ಕೋಟಿ ರೂ.

ಇದನ್ನೂ ಓದಿ: ಎಸ್​ಸಿಪಿ, ಟಿಎಸ್​ಪಿ ಹಣದ ಮೇಲೆ ಕಾಂಗ್ರೆಸ್ ವಕ್ರದೃಷ್ಟಿ, ಸಿಎಂರಿಂದ ದಲಿತರ ಹಿತ ಕಡೆಗಣನೆ: ಮಾಜಿ ಸಿಎಂ ಬೊಮ್ಮಾಯಿ

ಬಾಬಾ ಸಾಹೇಬ್ ಅಂಬೇಡ್ಕರ್ ಅವರೇನಾದರೂ ಬಹುಶಃ ಇವತ್ತು ಬದುಕಿದ್ದರೆ, ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರಕ್ಕೆ ಛೀಮಾರಿ ಹಾಕಿ ತಕ್ಕ ಶಾಸ್ತಿ ಮಾಡುತ್ತಿದ್ದರು ಎಂದು ವಿಪಕ್ಷ ನಾಯಕ ಆರ್​ ಅಶೋಕ ಈ ಹಿಂದೆ ವಾಗ್ದಾಳಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ