AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ: ವರದಿ ಕೇಳಿದ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ

ಸಿಎಂ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಕಸರತ್ತು ನಡೆಸುತ್ತಿದೆ. ಎಸ್‌ಸಿಎಸ್‌ಪಿ-ಟಿಎಸ್‌ಪಿ ಮೀಸಲಿಟ್ಟಿದ್ದ 39,171 ಕೋಟಿ ರೂ. ಅನುದಾನದಲ್ಲಿ 14,282 ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ಈ ಕುರಿತಾಗಿ ಏಳು ದಿನಗಳೊಳಗೆ ಸಂಪೂರ್ಣ ವಿವರಣೆ ನೀಡುವಂತೆ ಸರ್ಕಾರಕ್ಕೆ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ವರದಿ ಕೇಳಿದೆ.

ಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ: ವರದಿ ಕೇಳಿದ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ
ಗ್ಯಾರಂಟಿ ಯೋಜನೆಗೆ CSP-TSP ಹಣ ಬಳಕೆ: ವರದಿ ಕೇಳಿದ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 10, 2024 | 4:46 PM

Share

ಬೆಂಗಳೂರು, ಜುಲೈ 10: ಸರ್ಕಾರದ ಗ್ಯಾರಂಟಿ ಯೋಜನೆಗೆ ಎಸ್​ಸಿಎಸ್​ಪಿ, ಟಿಎಸ್​​​ಪಿ (SCSP, TSP) ಹಣ ಬಳಕೆ ವಿಚಾರವಾಗಿ ಏಳು ದಿನಗಳ ಒಳಗೆ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ವರದಿ ಕೇಳಿದೆ. ಎಸ್​ಸಿಎಸ್​ಪಿ, ಟಿಎಸ್​ಪಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆಯಾಗಿದೆ. ಹೀಗಾಗಿ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ಜಂಟಿ ಕಾರ್ಯದರ್ಶಿ ರಾಜೀವ್ ಕುಮಾರ್ ತಿವಾರಿ ರಾಜ್ಯ ಸರ್ಕಾರದ ಸಿಎಸ್​​ಗೆ ಪತ್ರ ಬರೆದಿದ್ದಾರೆ.

ಸಿಎಂ ಸಿದ್ದರಾಮಯ್ಯ ಸರ್ಕಾರದ ಪಂಚ ಯೋಜನೆಗಳಿಗೆ ಹಣ ಹೊಂದಿಸಲು ಕಸರತ್ತು ನಡೆಸಿದೆ. ಹೀಗಾಗಿ 2024-25ನೇ ಹಣಕಾಸು ವರ್ಷಕ್ಕಾಗಿ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಪಂಗಡದ ಉಪ ಯೋಜನೆಗೆ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಮೀಸಲಿಟ್ಟಿದ್ದ 39,171 ಕೋಟಿ ರೂ. ಅನುದಾನದಲ್ಲಿ 14,282 ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗೆ ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCP,TSP ಅನುದಾನ ಬಳಕೆ

ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಪಂಗಡದ ಉಪ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವುದನ್ನು ಬಿಜೆಪಿ ಈ ಹಿಂದೆ ಆರೋಪಿಸುವುದರೊಂದಿಗೆ ಆಗಸ್ಟ್​ನಲ್ಲಿ ಪ್ರತಿಭಟನೆ ಕೂಡ ಮಾಡಲಾಗಿತ್ತು.

ಎಸ್​ಸಿಎಸ್​ಪಿ, ಟಿಎಸ್​​​ಪಿ ಅನುದಾನವನ್ನು ಯಾವ ಯಾವ ಗ್ಯಾರಂಟಿ ಯೋಜನೆಗೆ ಎಷ್ಟು ಹಣ ಬಳಸಲಾಗಿದೆ.

  • ಗೃಹಲಕ್ಷ್ಮೀ ಯೋಜನೆಗೆ 7,881.91 ಕೋಟಿ ರೂ.
  • ಭಾಗ್ಯಲಕ್ಷ್ಮೀ ಯೋಜನೆಗೆ 70.28 ಕೋಟಿ ರೂ.
  • ಗೃಹಜ್ಯೋತಿ ಯೋಜನೆಗೆ 2585.93 ಕೋಟಿ ರೂ.
  • ಅನ್ನಭಾಗ್ಯ ಯೋಜನೆಗೆ 448.15 ಕೋಟಿ ರೂ.
  • ಅನ್ನಭಾಗ್ಯ ಯೋಜನೆಯ 2,187 ಕೋಟಿ ರೂ.
  • ಶಕ್ತಿ ಯೋಜನೆಗೆ 1451.45 ಕೋಟಿ ರೂ.
  • ಯುವನಿಧಿ ಯೋಜನೆಗೆ 175.50 ಕೋಟಿ ರೂ.

ಇದನ್ನೂ ಓದಿ: ಎಸ್​ಸಿಪಿ, ಟಿಎಸ್​ಪಿ ಹಣದ ಮೇಲೆ ಕಾಂಗ್ರೆಸ್ ವಕ್ರದೃಷ್ಟಿ, ಸಿಎಂರಿಂದ ದಲಿತರ ಹಿತ ಕಡೆಗಣನೆ: ಮಾಜಿ ಸಿಎಂ ಬೊಮ್ಮಾಯಿ

ಬಾಬಾ ಸಾಹೇಬ್ ಅಂಬೇಡ್ಕರ್ ಅವರೇನಾದರೂ ಬಹುಶಃ ಇವತ್ತು ಬದುಕಿದ್ದರೆ, ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರಕ್ಕೆ ಛೀಮಾರಿ ಹಾಕಿ ತಕ್ಕ ಶಾಸ್ತಿ ಮಾಡುತ್ತಿದ್ದರು ಎಂದು ವಿಪಕ್ಷ ನಾಯಕ ಆರ್​ ಅಶೋಕ ಈ ಹಿಂದೆ ವಾಗ್ದಾಳಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ