AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ: ವರದಿ ಕೇಳಿದ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ

ಸಿಎಂ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಕಸರತ್ತು ನಡೆಸುತ್ತಿದೆ. ಎಸ್‌ಸಿಎಸ್‌ಪಿ-ಟಿಎಸ್‌ಪಿ ಮೀಸಲಿಟ್ಟಿದ್ದ 39,171 ಕೋಟಿ ರೂ. ಅನುದಾನದಲ್ಲಿ 14,282 ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ಈ ಕುರಿತಾಗಿ ಏಳು ದಿನಗಳೊಳಗೆ ಸಂಪೂರ್ಣ ವಿವರಣೆ ನೀಡುವಂತೆ ಸರ್ಕಾರಕ್ಕೆ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ವರದಿ ಕೇಳಿದೆ.

ಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ: ವರದಿ ಕೇಳಿದ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ
ಗ್ಯಾರಂಟಿ ಯೋಜನೆಗೆ CSP-TSP ಹಣ ಬಳಕೆ: ವರದಿ ಕೇಳಿದ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ
ಪ್ರಸನ್ನ ಗಾಂವ್ಕರ್​
| Edited By: |

Updated on: Jul 10, 2024 | 4:46 PM

Share

ಬೆಂಗಳೂರು, ಜುಲೈ 10: ಸರ್ಕಾರದ ಗ್ಯಾರಂಟಿ ಯೋಜನೆಗೆ ಎಸ್​ಸಿಎಸ್​ಪಿ, ಟಿಎಸ್​​​ಪಿ (SCSP, TSP) ಹಣ ಬಳಕೆ ವಿಚಾರವಾಗಿ ಏಳು ದಿನಗಳ ಒಳಗೆ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ವರದಿ ಕೇಳಿದೆ. ಎಸ್​ಸಿಎಸ್​ಪಿ, ಟಿಎಸ್​ಪಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆಯಾಗಿದೆ. ಹೀಗಾಗಿ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ಜಂಟಿ ಕಾರ್ಯದರ್ಶಿ ರಾಜೀವ್ ಕುಮಾರ್ ತಿವಾರಿ ರಾಜ್ಯ ಸರ್ಕಾರದ ಸಿಎಸ್​​ಗೆ ಪತ್ರ ಬರೆದಿದ್ದಾರೆ.

ಸಿಎಂ ಸಿದ್ದರಾಮಯ್ಯ ಸರ್ಕಾರದ ಪಂಚ ಯೋಜನೆಗಳಿಗೆ ಹಣ ಹೊಂದಿಸಲು ಕಸರತ್ತು ನಡೆಸಿದೆ. ಹೀಗಾಗಿ 2024-25ನೇ ಹಣಕಾಸು ವರ್ಷಕ್ಕಾಗಿ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಪಂಗಡದ ಉಪ ಯೋಜನೆಗೆ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಮೀಸಲಿಟ್ಟಿದ್ದ 39,171 ಕೋಟಿ ರೂ. ಅನುದಾನದಲ್ಲಿ 14,282 ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗೆ ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCP,TSP ಅನುದಾನ ಬಳಕೆ

ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಪಂಗಡದ ಉಪ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವುದನ್ನು ಬಿಜೆಪಿ ಈ ಹಿಂದೆ ಆರೋಪಿಸುವುದರೊಂದಿಗೆ ಆಗಸ್ಟ್​ನಲ್ಲಿ ಪ್ರತಿಭಟನೆ ಕೂಡ ಮಾಡಲಾಗಿತ್ತು.

ಎಸ್​ಸಿಎಸ್​ಪಿ, ಟಿಎಸ್​​​ಪಿ ಅನುದಾನವನ್ನು ಯಾವ ಯಾವ ಗ್ಯಾರಂಟಿ ಯೋಜನೆಗೆ ಎಷ್ಟು ಹಣ ಬಳಸಲಾಗಿದೆ.

  • ಗೃಹಲಕ್ಷ್ಮೀ ಯೋಜನೆಗೆ 7,881.91 ಕೋಟಿ ರೂ.
  • ಭಾಗ್ಯಲಕ್ಷ್ಮೀ ಯೋಜನೆಗೆ 70.28 ಕೋಟಿ ರೂ.
  • ಗೃಹಜ್ಯೋತಿ ಯೋಜನೆಗೆ 2585.93 ಕೋಟಿ ರೂ.
  • ಅನ್ನಭಾಗ್ಯ ಯೋಜನೆಗೆ 448.15 ಕೋಟಿ ರೂ.
  • ಅನ್ನಭಾಗ್ಯ ಯೋಜನೆಯ 2,187 ಕೋಟಿ ರೂ.
  • ಶಕ್ತಿ ಯೋಜನೆಗೆ 1451.45 ಕೋಟಿ ರೂ.
  • ಯುವನಿಧಿ ಯೋಜನೆಗೆ 175.50 ಕೋಟಿ ರೂ.

ಇದನ್ನೂ ಓದಿ: ಎಸ್​ಸಿಪಿ, ಟಿಎಸ್​ಪಿ ಹಣದ ಮೇಲೆ ಕಾಂಗ್ರೆಸ್ ವಕ್ರದೃಷ್ಟಿ, ಸಿಎಂರಿಂದ ದಲಿತರ ಹಿತ ಕಡೆಗಣನೆ: ಮಾಜಿ ಸಿಎಂ ಬೊಮ್ಮಾಯಿ

ಬಾಬಾ ಸಾಹೇಬ್ ಅಂಬೇಡ್ಕರ್ ಅವರೇನಾದರೂ ಬಹುಶಃ ಇವತ್ತು ಬದುಕಿದ್ದರೆ, ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರಕ್ಕೆ ಛೀಮಾರಿ ಹಾಕಿ ತಕ್ಕ ಶಾಸ್ತಿ ಮಾಡುತ್ತಿದ್ದರು ಎಂದು ವಿಪಕ್ಷ ನಾಯಕ ಆರ್​ ಅಶೋಕ ಈ ಹಿಂದೆ ವಾಗ್ದಾಳಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ