AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಸಾರಿಗೆ ಬಸ್ ಮಾತ್ರವಲ್ಲ, ಔಷಧಗಳು ಸಿಗೋದೂ ಡೌಟ್! ಕರ್ನಾಟಕದಲ್ಲೂ ಮೆಡಿಕಲ್ ಶಾಪ್ ಬಂದ್

ಆನ್‌ಲೈನ್ ಮೆಡಿಸಿನ್ ಮಾರಾಟ ಹಾಗೂ ಭಾರಿ ರಿಯಾಯಿತಿ ನೀಡುವುದನ್ನು ವಿರೋಧಿಸಿ ಮೇ 20ರಂದು ದೇಶಾದ್ಯಂತ ಖಾಸಗಿ ಮೆಡಿಕಲ್ ಶಾಪ್ ಬಂದ್‌ಗೆ ಕರೆ ನೀಡಲಾಗಿದೆ. ಕರ್ನಾಟಕದಲ್ಲೂ ಔಷಧ ವ್ಯಾಪಾರಿಗಳ ಸಂಘಟನೆಗಳು ಇದಕ್ಕೆ ಬೆಂಬಲ ನೀಡಿದ್ದು, ನಾಳೆ ಔಷಧಗಳ ಲಭ್ಯತೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ನಾಳೆ ಸಾರಿಗೆ ಬಸ್ ಮಾತ್ರವಲ್ಲ, ಔಷಧಗಳು ಸಿಗೋದೂ ಡೌಟ್! ಕರ್ನಾಟಕದಲ್ಲೂ ಮೆಡಿಕಲ್ ಶಾಪ್ ಬಂದ್
ಸಾಂದರ್ಭಿಕ ಚಿತ್ರImage Credit source: TV9 Network
ವಿನಯ್​ ಕಾಶಪ್ಪನವರ್​
| Edited By: |

Updated on: May 19, 2026 | 10:36 AM

Share

ಬೆಂಗಳೂರು, ಮೇ 19: ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯಾದ್ಯಂತ ನಾಳೆ (ಮೇ 20) ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿರುವ ಬೆನ್ನಲ್ಲೇ, ಜನಸಾಮಾನ್ಯರಿಗೆ ಮತ್ತೊಂದು ದೊಡ್ಡ ಆಘಾತ ಕಾದಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಖಾಸಗಿ ಔಷಧ ಮಳಿಗೆಗಳ (Medical Shop Bandh) ಬಂದ್‌ಗೆ ಕರೆ ನೀಡಲಾಗಿದ್ದು, ಕರ್ನಾಟಕದಲ್ಲೂ ಇದಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದೆ. ಇದರಿಂದಾಗಿ ನಾಳೆ ಬಸ್ ಸೌಲಭ್ಯ ಮಾತ್ರವಲ್ಲದೆ, ತುರ್ತು ಸಂದರ್ಭಗಳಲ್ಲಿ ಔಷಧಗಳು ಸಿಗುವುದೂ ಸಹ ದುಸ್ತರವಾಗುವ ಲಕ್ಷಣಗಳು ಕಾಣುತ್ತಿವೆ.

ಮುಖ್ಯಾಂಶಗಳು

  • ಇ-ಫಾರ್ಮಸಿ, ಭಾರಿ ರಿಯಾಯಿತಿ ವಿರೋಧಿಸಿ ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್‌.
  • ರಾಜ್ಯದಲ್ಲಿ ಕೆಸಿಡಿಎ ಸಂಘಟನೆ ಬಂದ್‌ಗೆ ನೇರ ಬೆಂಬಲ ಘೋಷಿಸಿದೆ.
  • ಕರ್ನಾಟಕ ಫಾರ್ಮಾ ರಿಟೇಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಷನ್ (KPRDO) ಸೇರಿದಂತೆ ಹಲವು ಒಕ್ಕೂಟಗಳು ಹೋರಾಟಕ್ಕೆ ನೈತಿಕ ಬೆಂಬಲ ಸೂಚಿಸಿವೆ.

ಆನ್‌ಲೈನ್ ಔಷಧ ಮಾರಾಟಕ್ಕೆ ತೀವ್ರ ವಿರೋಧ

ಖಾಸಗಿ ಮೆಡಿಕಲ್ ಶಾಪ್ ಮಾಲೀಕರು ಹಾಗೂ ವಿತರಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರಮುಖವಾಗಿ, ಯಾವುದೇ ಸೂಕ್ತ ಲಿಖಿತ ಪ್ರಿಸ್ಕ್ರಿಪ್ಷನ್ ಇಲ್ಲದೆ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ರಾಜಾರೋಷವಾಗಿ ನಿಯಮಬಾಹಿರವಾಗಿ ಔಷಧಗಳನ್ನು ಮಾರಾಟ ಮಾಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಹಾಗೂ ಸಣ್ಣ ವ್ಯಾಪಾರಿಗಳ ಬದುಕು ಬೀದಿಗೆ ಬರುತ್ತಿದೆ ಎಂದು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಬುಧವಾರದಿಂದ ಸಿಗಲ್ಲ ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್! ಸಾರಿಗೆ ಮುಷ್ಕರ ಬಹುತೇಕ ಫಿಕ್ಸ್

ದೊಡ್ಡ ಕಾರ್ಪೊರೇಟ್ ಕಂಪನಿಗಳು ಭಾರಿ ರಿಯಾಯಿತಿ (ಡೀಪ್ ಡಿಸ್ಕೌಂಟ್) ನೀಡಿ ಗ್ರಾಹಕರನ್ನು ಸೆಳೆಯುತ್ತಿರುವುದರಿಂದ ಸಾಂಪ್ರದಾಯಿಕ ಮೆಡಿಕಲ್ ಶಾಪ್‌ಗಳು ನಷ್ಟ ಅನುಭವಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಇಡೀ ದಿನ ಖಾಸಗಿ ಮೆಡಿಕಲ್ ಶಾಪ್‌ಗಳನ್ನು ಮುಚ್ಚಿ ಪ್ರತಿಭಟಿಸಲು ನಿರ್ಧರಿಸಲಾಗಿದೆ. ಆಸ್ಪತ್ರೆ ಆವರಣದೊಳಗಿನ ಫಾರ್ಮಸಿಗಳು ಎಂದಿನಂತೆ ಕಾರ್ಯನಿರ್ವಹಿಸಲಿದ್ದರೂ, ಜನಸಾಮಾನ್ಯರು ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಇಂದೇ ಅಗತ್ಯ ಔಷಧಗಳನ್ನು ಖರೀದಿಸಿಟ್ಟುಕೊಳ್ಳುವುದು ಉತ್ತಮ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ