AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navanakshatra Sanman 2021: ಪ್ರಶಸ್ತಿ ನೀಡುವುದರಿಂದ ಸಾಧಕರಿಗೂ, ಸಾಧಿಸುವವರಿಗೂ ಪ್ರೋತ್ಸಾಹ ಸಿಗುತ್ತದೆ; ರಘು ದೀಕ್ಷಿತ್

Navanakshatra Sanman 2021: ಕಷ್ಟ, ಸವಾಲುಗಳನ್ನೆಲ್ಲ ದಾಟಿ ಸಾಧನೆ ಮಾಡಿದವರನ್ನು ನೋಡಿದ ಬೇರೆಯವರಿಗೂ ಪ್ರೋತ್ಸಾಹ ಸಿಕ್ಕಂತಾಗುತ್ತದೆ. ಹೆಚ್ಚು ಪ್ರಚಾರಕ್ಕೆ ಬಾರದ ಸಾಧಕರನ್ನು ಗುರುತಿಸುವುದರಿಂದ ಪ್ರಶಸ್ತಿ ಸಿಕ್ಕಿದವರಿಗೂ ಇನ್ನಷ್ಟು ಸ್ಫೂರ್ತಿ ಸಿಕ್ಕಿದಂತಾಗುತ್ತದೆ. ಇನ್ನಷ್ಟು ಸಾಧನೆ ಮಾಡಬೇಕೆಂಬ ಉತ್ಸಾಹ ಬರುತ್ತದೆ ಎಂದು ಗಾಯಕ ರಘು ದೀಕ್ಷಿತ್ ಹೇಳಿದ್ದಾರೆ.

Navanakshatra Sanman 2021: ಪ್ರಶಸ್ತಿ ನೀಡುವುದರಿಂದ ಸಾಧಕರಿಗೂ, ಸಾಧಿಸುವವರಿಗೂ ಪ್ರೋತ್ಸಾಹ ಸಿಗುತ್ತದೆ; ರಘು ದೀಕ್ಷಿತ್
ರಘು ದೀಕ್ಷಿತ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 04, 2022 | 7:25 PM

ಬೆಂಗಳೂರು: ಟಿವಿ-9 ಕನ್ನಡ ಸಂಸ್ಥೆ ಆರಂಭವಾಗಿ 15 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮದಲ್ಲಿ ಉದಯೋನ್ಮುಖ ಗಾಯಕ ಸಂಜಿತ್ ಹೆಗ್ಡೆ ಅವರಿಗೆ ಪ್ರಶಸ್ತಿ ನೀಡಿದ ಗಾಯಕ ರಘು ದೀಕ್ಷಿತ್ ಟಿವಿ-9 ಕನ್ನಡದ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ರೀತಿ ಹೆಚ್ಚು ಪ್ರಚಾರಕ್ಕೆ ಬಾರದ ಸಾಧಕರನ್ನು ಗುರುತಿಸುವುದರಿಂದ ಪ್ರಶಸ್ತಿ ಸಿಕ್ಕಿದವರಿಗೂ ಇನ್ನಷ್ಟು ಸ್ಫೂರ್ತಿ ಸಿಕ್ಕಿದಂತಾಗುತ್ತದೆ. ಇನ್ನಷ್ಟು ಸಾಧನೆ ಮಾಡಬೇಕೆಂಬ ಉತ್ಸಾಹ ಬರುತ್ತದೆ. ಅವರು ತಮ್ಮ ಸಾಧನೆಯ ಹಿಂದೆ ಸಾಕಷ್ಟು ಅಡೆತಡೆಗಳನ್ನು ನೋಡಿರುತ್ತಾರೆ. ಅದರ ಮಧ್ಯೆ ಯಾರಾದರೂ ಬಂದು ನೀವು ಮಾಡುತ್ತಿರುವ ಕೆಲಸ ಚೆನ್ನಾಗಿದೆ ಎಂದು ಹೇಳಿದರೆ ಅದು ಅವರಿಗೆ ಇನ್ನಷ್ಟು ಉತ್ತೇಜನ ಕೊಡುತ್ತದೆ ಎಂದಿದ್ದಾರೆ.

ಹಾಗೇ, ಕಷ್ಟ, ಸವಾಲುಗಳನ್ನೆಲ್ಲ ದಾಟಿ ಸಾಧನೆ ಮಾಡಿದವರನ್ನು ನೋಡಿದ ಬೇರೆಯವರಿಗೂ ಪ್ರೋತ್ಸಾಹ ಸಿಕ್ಕಂತಾಗುತ್ತದೆ. ಅವರನ್ನು ನೋಡಿ ಯುವಜನಾಂಗದವರು ಸ್ಫೂರ್ತಿಯಾಗಿ ತೆಗೆದುಕೊಳ್ಳಬಹುದು. ಹಾಗಾಗಿ, ಸಾಧನೆ ಮಾಡಿದವರಿಗೂ, ಸಾಧನೆ ಮಾಡುವವರಿಗೂ ಈ ರೀತಿಯ ಪ್ರಶಸ್ತಿಗಳಿಂದ ಉತ್ತೇಜನ ಸಿಕ್ಕಂತಾಗುತ್ತದೆ. ಅವರೇ ಸಾಧಿಸಿದ್ದಾರೆ, ನಾವು ಮಾಡಲು ಆಗುವುದಿಲ್ಲವೇ ಎಂದು ಯುವಪೀಳಿಗೆಯವರು ಸಾಧಕರನ್ನು ಆದರ್ಶವಾಗಿ ತೆಗೆದುಕೊಳ್ಳುತ್ತಾರೆ. ಹೀಗಾಗಿ ಟಿವಿ-9 ಮಾಡುತ್ತಿರುವ ನವನಕ್ಷತ್ರ ಕಾರ್ಯಕ್ರಮ ಎಲ್ಲರಿಗೂ ಮಾದರಿಯಾದುದು. ಪ್ರತಿವರ್ಷವೂ ಈ ರೀತಿಯ ತೆರೆಮರೆಯ ಸಾಧಕರನ್ನು ಗುರುತಿಸಿ ಸನ್ಮಾನ ಮಾಡುವಂತಾಗಲಿ. ಇನ್ನಷ್ಟು ಹೊಸ ಸಾಧಕರಿಗೆ ಈ ಕಾರ್ಯಕ್ರಮ ವೇದಿಕೆಯಾಗಲಿ ಎಂದು ರಘು ದೀಕ್ಷಿತ್ ಹಾರೈಸಿದ್ದಾರೆ.

ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್ ನವ ನಕ್ಷತ್ರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ತಮ್ಮದೇ ಆದ ಭತ್ತದ ತಳಿಯನ್ನು ಕಂಡುಹಿಡಿದವರು, ಪ್ಯಾರಾ ಒಲಂಪಿಕ್ಸ್​ನಲ್ಲಿ ಪದಕ ಗೆದ್ದವರು ಸೇರಿದಂತೆ 9 ಸಾಧಕರಿಗೆ ಟಿವಿ-9 ವಾಹಿನಿಯಿಂದ ಸನ್ಮಾನ ಮಾಡಿ, ಪ್ರಶಸ್ತಿ ನೀಡಲಾಗುತ್ತಿದೆ.

ಟಿವಿ-9 ಕನ್ನಡ ಸುದ್ದಿ ವಾಹಿನಿ ಪ್ರಾರಂಭವಾಗಿ 15 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ  ನವನಕ್ಷತ್ರ ಸನ್ಮಾನ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ವಲಯದ 9 ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ, ಅವರ ಸಾಧನೆಗೆ ಮನ್ನಣೆ ನೀಡುವ ಕಾರ್ಯಕ್ರಮ ಇದಾಗಿದ್ದು, ಎಲೆಮರೆಯ ಸಾಧಕರು, ಯುವಪೀಳಿಗೆಯ ಸಾಧಕರನ್ನು ಗೌರವಿಸಲಾಯಿತು.

ಇದನ್ನೂ ಓದಿ: ಪುನೀತ್​ ಒಂದು ಹೃದಯ, ಆತ ಎಲ್ಲರ ಹೃದಯದಲ್ಲೂ ಬೆರೆತು ಹೋಗಿದ್ದಾನೆ; ತಮ್ಮನನ್ನು ನೆನೆದು ಭಾವುಕರಾದ ನಟ ಶಿವರಾಜ್​ಕುಮಾರ್

ಸಾಧಕರನ್ನು ಗುರುತಿಸಿ ಸನ್ಮಾನ ಮಾಡುತ್ತಿರುವ ಟಿವಿ 9 ಎಲ್ಲರಿಗೂ ಮಾದರಿ: ಸಂಗೀತ ನಿರ್ದೇಶಕ ಚರಣ್ ರಾಜ್

ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್