AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navanakshatra Sanman 2021: ಪ್ರಶಸ್ತಿ ನೀಡುವುದರಿಂದ ಸಾಧಕರಿಗೂ, ಸಾಧಿಸುವವರಿಗೂ ಪ್ರೋತ್ಸಾಹ ಸಿಗುತ್ತದೆ; ರಘು ದೀಕ್ಷಿತ್

Navanakshatra Sanman 2021: ಕಷ್ಟ, ಸವಾಲುಗಳನ್ನೆಲ್ಲ ದಾಟಿ ಸಾಧನೆ ಮಾಡಿದವರನ್ನು ನೋಡಿದ ಬೇರೆಯವರಿಗೂ ಪ್ರೋತ್ಸಾಹ ಸಿಕ್ಕಂತಾಗುತ್ತದೆ. ಹೆಚ್ಚು ಪ್ರಚಾರಕ್ಕೆ ಬಾರದ ಸಾಧಕರನ್ನು ಗುರುತಿಸುವುದರಿಂದ ಪ್ರಶಸ್ತಿ ಸಿಕ್ಕಿದವರಿಗೂ ಇನ್ನಷ್ಟು ಸ್ಫೂರ್ತಿ ಸಿಕ್ಕಿದಂತಾಗುತ್ತದೆ. ಇನ್ನಷ್ಟು ಸಾಧನೆ ಮಾಡಬೇಕೆಂಬ ಉತ್ಸಾಹ ಬರುತ್ತದೆ ಎಂದು ಗಾಯಕ ರಘು ದೀಕ್ಷಿತ್ ಹೇಳಿದ್ದಾರೆ.

Navanakshatra Sanman 2021: ಪ್ರಶಸ್ತಿ ನೀಡುವುದರಿಂದ ಸಾಧಕರಿಗೂ, ಸಾಧಿಸುವವರಿಗೂ ಪ್ರೋತ್ಸಾಹ ಸಿಗುತ್ತದೆ; ರಘು ದೀಕ್ಷಿತ್
ರಘು ದೀಕ್ಷಿತ್
TV9 Web
| Edited By: |

Updated on: Jan 04, 2022 | 7:25 PM

Share

ಬೆಂಗಳೂರು: ಟಿವಿ-9 ಕನ್ನಡ ಸಂಸ್ಥೆ ಆರಂಭವಾಗಿ 15 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮದಲ್ಲಿ ಉದಯೋನ್ಮುಖ ಗಾಯಕ ಸಂಜಿತ್ ಹೆಗ್ಡೆ ಅವರಿಗೆ ಪ್ರಶಸ್ತಿ ನೀಡಿದ ಗಾಯಕ ರಘು ದೀಕ್ಷಿತ್ ಟಿವಿ-9 ಕನ್ನಡದ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ರೀತಿ ಹೆಚ್ಚು ಪ್ರಚಾರಕ್ಕೆ ಬಾರದ ಸಾಧಕರನ್ನು ಗುರುತಿಸುವುದರಿಂದ ಪ್ರಶಸ್ತಿ ಸಿಕ್ಕಿದವರಿಗೂ ಇನ್ನಷ್ಟು ಸ್ಫೂರ್ತಿ ಸಿಕ್ಕಿದಂತಾಗುತ್ತದೆ. ಇನ್ನಷ್ಟು ಸಾಧನೆ ಮಾಡಬೇಕೆಂಬ ಉತ್ಸಾಹ ಬರುತ್ತದೆ. ಅವರು ತಮ್ಮ ಸಾಧನೆಯ ಹಿಂದೆ ಸಾಕಷ್ಟು ಅಡೆತಡೆಗಳನ್ನು ನೋಡಿರುತ್ತಾರೆ. ಅದರ ಮಧ್ಯೆ ಯಾರಾದರೂ ಬಂದು ನೀವು ಮಾಡುತ್ತಿರುವ ಕೆಲಸ ಚೆನ್ನಾಗಿದೆ ಎಂದು ಹೇಳಿದರೆ ಅದು ಅವರಿಗೆ ಇನ್ನಷ್ಟು ಉತ್ತೇಜನ ಕೊಡುತ್ತದೆ ಎಂದಿದ್ದಾರೆ.

ಹಾಗೇ, ಕಷ್ಟ, ಸವಾಲುಗಳನ್ನೆಲ್ಲ ದಾಟಿ ಸಾಧನೆ ಮಾಡಿದವರನ್ನು ನೋಡಿದ ಬೇರೆಯವರಿಗೂ ಪ್ರೋತ್ಸಾಹ ಸಿಕ್ಕಂತಾಗುತ್ತದೆ. ಅವರನ್ನು ನೋಡಿ ಯುವಜನಾಂಗದವರು ಸ್ಫೂರ್ತಿಯಾಗಿ ತೆಗೆದುಕೊಳ್ಳಬಹುದು. ಹಾಗಾಗಿ, ಸಾಧನೆ ಮಾಡಿದವರಿಗೂ, ಸಾಧನೆ ಮಾಡುವವರಿಗೂ ಈ ರೀತಿಯ ಪ್ರಶಸ್ತಿಗಳಿಂದ ಉತ್ತೇಜನ ಸಿಕ್ಕಂತಾಗುತ್ತದೆ. ಅವರೇ ಸಾಧಿಸಿದ್ದಾರೆ, ನಾವು ಮಾಡಲು ಆಗುವುದಿಲ್ಲವೇ ಎಂದು ಯುವಪೀಳಿಗೆಯವರು ಸಾಧಕರನ್ನು ಆದರ್ಶವಾಗಿ ತೆಗೆದುಕೊಳ್ಳುತ್ತಾರೆ. ಹೀಗಾಗಿ ಟಿವಿ-9 ಮಾಡುತ್ತಿರುವ ನವನಕ್ಷತ್ರ ಕಾರ್ಯಕ್ರಮ ಎಲ್ಲರಿಗೂ ಮಾದರಿಯಾದುದು. ಪ್ರತಿವರ್ಷವೂ ಈ ರೀತಿಯ ತೆರೆಮರೆಯ ಸಾಧಕರನ್ನು ಗುರುತಿಸಿ ಸನ್ಮಾನ ಮಾಡುವಂತಾಗಲಿ. ಇನ್ನಷ್ಟು ಹೊಸ ಸಾಧಕರಿಗೆ ಈ ಕಾರ್ಯಕ್ರಮ ವೇದಿಕೆಯಾಗಲಿ ಎಂದು ರಘು ದೀಕ್ಷಿತ್ ಹಾರೈಸಿದ್ದಾರೆ.

ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್ ನವ ನಕ್ಷತ್ರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ತಮ್ಮದೇ ಆದ ಭತ್ತದ ತಳಿಯನ್ನು ಕಂಡುಹಿಡಿದವರು, ಪ್ಯಾರಾ ಒಲಂಪಿಕ್ಸ್​ನಲ್ಲಿ ಪದಕ ಗೆದ್ದವರು ಸೇರಿದಂತೆ 9 ಸಾಧಕರಿಗೆ ಟಿವಿ-9 ವಾಹಿನಿಯಿಂದ ಸನ್ಮಾನ ಮಾಡಿ, ಪ್ರಶಸ್ತಿ ನೀಡಲಾಗುತ್ತಿದೆ.

ಟಿವಿ-9 ಕನ್ನಡ ಸುದ್ದಿ ವಾಹಿನಿ ಪ್ರಾರಂಭವಾಗಿ 15 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ  ನವನಕ್ಷತ್ರ ಸನ್ಮಾನ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ವಲಯದ 9 ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ, ಅವರ ಸಾಧನೆಗೆ ಮನ್ನಣೆ ನೀಡುವ ಕಾರ್ಯಕ್ರಮ ಇದಾಗಿದ್ದು, ಎಲೆಮರೆಯ ಸಾಧಕರು, ಯುವಪೀಳಿಗೆಯ ಸಾಧಕರನ್ನು ಗೌರವಿಸಲಾಯಿತು.

ಇದನ್ನೂ ಓದಿ: ಪುನೀತ್​ ಒಂದು ಹೃದಯ, ಆತ ಎಲ್ಲರ ಹೃದಯದಲ್ಲೂ ಬೆರೆತು ಹೋಗಿದ್ದಾನೆ; ತಮ್ಮನನ್ನು ನೆನೆದು ಭಾವುಕರಾದ ನಟ ಶಿವರಾಜ್​ಕುಮಾರ್

ಸಾಧಕರನ್ನು ಗುರುತಿಸಿ ಸನ್ಮಾನ ಮಾಡುತ್ತಿರುವ ಟಿವಿ 9 ಎಲ್ಲರಿಗೂ ಮಾದರಿ: ಸಂಗೀತ ನಿರ್ದೇಶಕ ಚರಣ್ ರಾಜ್

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?