AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಬ್ಲಿಘಿ ವಿಚಾರದಲ್ಲಿ ದ್ವೇಷಪೂರಿತ ವರದಿ ಪ್ರಸಾರ: ಸುವರ್ಣ ನ್ಯೂಸ್, ನ್ಯೂಸ್ 18 ಕನ್ನಡ ವಿರುದ್ಧ ಕಠಿಣ ಕ್ರಮ

ನ್ಯೂಸ್ 18 ಕನ್ನಡದಲ್ಲಿ ಏಪ್ರಿಲ್ 1, 2020ರಂದು ಪ್ರಸಾರವಾಗಿದ್ದ ಕಾರ್ಯಕ್ರಮದ ವಿರುದ್ಧ ಹಾಗೂ ಸುವರ್ಣ ನ್ಯೂಸ್​ನಲ್ಲಿ ಮಾರ್ಚ್ 31, 2020 ರಿಂದ ಏಪ್ರಿಲ್ 4, 2020ರ ವರೆಗೆ ಪ್ರಸಾರವಾಗಿದ್ದ ಕೆಲವು ಕಾರ್ಯಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ತಬ್ಲಿಘಿ ವಿಚಾರದಲ್ಲಿ ದ್ವೇಷಪೂರಿತ ವರದಿ ಪ್ರಸಾರ: ಸುವರ್ಣ ನ್ಯೂಸ್, ನ್ಯೂಸ್ 18 ಕನ್ನಡ ವಿರುದ್ಧ ಕಠಿಣ ಕ್ರಮ
ವಾಹಿನಿಗಳ ವಿರುದ್ಧ ಕಠಿಣ ಕ್ರಮ
TV9 Web
| Edited By: |

Updated on:Jun 18, 2021 | 9:08 PM

Share

ದೆಹಲಿ: ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ತಬ್ಲಿಘಿ ಜಮಾತ್ ವಿಚಾರದಲ್ಲಿ ದ್ವೇಷಪೂರಿತ ವರದಿ ಪ್ರಸಾರ ಮಾಡಿರುವುದನ್ನು ಉಲ್ಲೇಖಿಸಿ ಕನ್ನಡದ ಎರಡು ಖಾಸಗಿ ವಾರ್ತಾ ವಾಹಿನಿಗಳು ಹಾಗೂ ಇಂಗ್ಲಿಷ್​ನ ಒಂದು ನ್ಯೂಸ್ ಚಾನಲ್ ವಿರುದ್ಧ ನೇಷನಲ್ ಬ್ರಾಡ್​ಕ್ಯಾಸ್ಟಿಂಗ್ ಸ್ಟಾಂಡರ್ಡ್ಸ್ ಅಥಾರಿಟಿ (NBSA) ಕ್ರಮ ಕೈಗೊಂಡಿದೆ. ದ್ವೇಷ ಹರಡುವಿಕೆ ವಿರುದ್ಧ 2020ರಲ್ಲಿ ನಡೆದ ಚಳುವಳಿ ಹಾಗೂ ದೂರಿನ ಆಧಾರದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೊರೊನಾ ಮೊದಲನೇ ಅಲೆ ಕಂಡುಬಂದ ಸಂದರ್ಭದಲ್ಲಿ ಈ ಖಾಸಗಿ ವಾರ್ತಾ ವಾಹಿನಿಗಳು ತಬ್ಲಿಘಿ ಜಮಾತ್ ಹಾಗೂ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ವರದಿ ಮಾಡಿದ್ದವು. ದ್ವೇಷ ಹರಡುವಿಕೆ ನೆಲೆಯಲ್ಲಿ ಸುದ್ದಿ ನೀಡಿದ್ದವು. ಆದ್ದರಿಂದ ಎನ್​ಬಿಎಸ್​ಎ ಈ ವಾಹಿನಿಗಳ ವಿರುದ್ಧ ಕ್ರಮ ಕೈಗೊಂಡಿದೆ.

ಕ್ಯಾಂಪೇನ್ ಅಗೈನ್ಸ್ಟ್ ಹೇಟ್ ಸ್ಪೀಚ್ (CAHS) ಫೆಬ್ರವರಿ 2020ರಲ್ಲಿ ನಿಯೋಜನೆಗೊಂಡಿದ್ದು, ಮಾಧ್ಯಮದಲ್ಲಿ ವರದಿಯಾಗುವ ಧ್ವೇಷಪೂರಿತ ಸುದ್ದಿಗಳನ್ನು ಗಮನಿಸಿ, ಕ್ರಮ ಕೈಗೊಳ್ಳುತ್ತದೆ. ಇದೀಗ ಸಿಎಎಚ್​ಎಸ್ ದೂರಿನ ಅನ್ವಯ ಒಟ್ಟು ಮೂರು ಸುದ್ದಿ ವಾಹಿನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಕನ್ನಡದ ನ್ಯೂಸ್ ಚಾನಲ್​ಗಳಾದ ಸುವರ್ಣ ನ್ಯೂಸ್ ಹಾಗೂ ನ್ಯೂಸ್ 18 ಕನ್ನಡ, ಇಂಗ್ಲಿಷ್​ನ ಟೈಮ್ಸ್ ನೌ ವಾಹಿನಿಯ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ನ್ಯೂಸ್ 18 ಕನ್ನಡ ಚಾನಲ್ ಮೇಲೆ 1 ಲಕ್ಷ ಹಾಗೂ ಸುವರ್ಣ ನ್ಯೂಸ್ ಮೇಲೆ 50,000 ದಂಡ ವಿಧಿಸಲಾಗಿದೆ. ಹಾಗೂ ಜೂನ್ 23ರಂದು 9 ಗಂಟೆಯ ನ್ಯೂಸ್​ಗೂ ಮುನ್ನ ಬಹಿರಂಗವಾಗಿ ಕ್ಷಮಾಪಣೆ ಕೋರಬೇಕು ಎಂದು ಕೇಳಲಾಗಿದೆ.

ಎರಡೂ ಚಾನಲ್​ಗಳು ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ವರದಿ ಅಥವಾ ವಿಡಿಯೋಗಳು ತಮ್ಮ ವೆಬ್​ಸೈಟ್ ಅಥವಾ ಯೂಟ್ಯೂಬ್​ನಲ್ಲಿ ಇದ್ದರೆ, ಅದನ್ನು ಕೂಡಲೇ ಡಿಲೀಟ್ ಮಾಡಬೇಕು ಹಾಗೂ 7 ದಿನಗಳ ಒಳಗಾಗಿ ಈ ಬಗ್ಗೆ ಲಿಖಿತ ದಾಖಲೆ ಸಲ್ಲಿಸಬೇಕು ಎಂದು ಕೇಳಲಾಗಿದೆ.

ನ್ಯೂಸ್ 18 ಕನ್ನಡದಲ್ಲಿ ಏಪ್ರಿಲ್ 1, 2020ರಂದು ಪ್ರಸಾರವಾಗಿದ್ದ ಕಾರ್ಯಕ್ರಮದ ವಿರುದ್ಧ ಹಾಗೂ ಸುವರ್ಣ ನ್ಯೂಸ್​ನಲ್ಲಿ ಮಾರ್ಚ್ 31, 2020 ರಿಂದ ಏಪ್ರಿಲ್ 4, 2020ರ ವರೆಗೆ ಪ್ರಸಾರವಾಗಿದ್ದ ಕೆಲವು ಕಾರ್ಯಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ತಬ್ಲಿಘಿ ಜಮಾತ್​​​ನಲ್ಲಿ ಪಾಲ್ಗೊಂಡಿದ್ದ ವಿದೇಶಿಯರು ತವರಿಗೆ ಮರಳಲು ನೆರವಾಗಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ತಬ್ಲಿಘಿ ಜಮಾತ್​ನಲ್ಲಿ ಪಾಲ್ಗೊಂಡಿದ್ದ 36 ವಿದೇಶಿಯರು ಆರೋಪ ಮುಕ್ತ

Published On - 5:59 pm, Fri, 18 June 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು