Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಬ್ಲಿಘಿ ವಿಚಾರದಲ್ಲಿ ದ್ವೇಷಪೂರಿತ ವರದಿ ಪ್ರಸಾರ: ಸುವರ್ಣ ನ್ಯೂಸ್, ನ್ಯೂಸ್ 18 ಕನ್ನಡ ವಿರುದ್ಧ ಕಠಿಣ ಕ್ರಮ

ನ್ಯೂಸ್ 18 ಕನ್ನಡದಲ್ಲಿ ಏಪ್ರಿಲ್ 1, 2020ರಂದು ಪ್ರಸಾರವಾಗಿದ್ದ ಕಾರ್ಯಕ್ರಮದ ವಿರುದ್ಧ ಹಾಗೂ ಸುವರ್ಣ ನ್ಯೂಸ್​ನಲ್ಲಿ ಮಾರ್ಚ್ 31, 2020 ರಿಂದ ಏಪ್ರಿಲ್ 4, 2020ರ ವರೆಗೆ ಪ್ರಸಾರವಾಗಿದ್ದ ಕೆಲವು ಕಾರ್ಯಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ತಬ್ಲಿಘಿ ವಿಚಾರದಲ್ಲಿ ದ್ವೇಷಪೂರಿತ ವರದಿ ಪ್ರಸಾರ: ಸುವರ್ಣ ನ್ಯೂಸ್, ನ್ಯೂಸ್ 18 ಕನ್ನಡ ವಿರುದ್ಧ ಕಠಿಣ ಕ್ರಮ
ವಾಹಿನಿಗಳ ವಿರುದ್ಧ ಕಠಿಣ ಕ್ರಮ
Follow us
TV9 Web
| Updated By: ganapathi bhat

Updated on:Jun 18, 2021 | 9:08 PM

ದೆಹಲಿ: ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ತಬ್ಲಿಘಿ ಜಮಾತ್ ವಿಚಾರದಲ್ಲಿ ದ್ವೇಷಪೂರಿತ ವರದಿ ಪ್ರಸಾರ ಮಾಡಿರುವುದನ್ನು ಉಲ್ಲೇಖಿಸಿ ಕನ್ನಡದ ಎರಡು ಖಾಸಗಿ ವಾರ್ತಾ ವಾಹಿನಿಗಳು ಹಾಗೂ ಇಂಗ್ಲಿಷ್​ನ ಒಂದು ನ್ಯೂಸ್ ಚಾನಲ್ ವಿರುದ್ಧ ನೇಷನಲ್ ಬ್ರಾಡ್​ಕ್ಯಾಸ್ಟಿಂಗ್ ಸ್ಟಾಂಡರ್ಡ್ಸ್ ಅಥಾರಿಟಿ (NBSA) ಕ್ರಮ ಕೈಗೊಂಡಿದೆ. ದ್ವೇಷ ಹರಡುವಿಕೆ ವಿರುದ್ಧ 2020ರಲ್ಲಿ ನಡೆದ ಚಳುವಳಿ ಹಾಗೂ ದೂರಿನ ಆಧಾರದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೊರೊನಾ ಮೊದಲನೇ ಅಲೆ ಕಂಡುಬಂದ ಸಂದರ್ಭದಲ್ಲಿ ಈ ಖಾಸಗಿ ವಾರ್ತಾ ವಾಹಿನಿಗಳು ತಬ್ಲಿಘಿ ಜಮಾತ್ ಹಾಗೂ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ವರದಿ ಮಾಡಿದ್ದವು. ದ್ವೇಷ ಹರಡುವಿಕೆ ನೆಲೆಯಲ್ಲಿ ಸುದ್ದಿ ನೀಡಿದ್ದವು. ಆದ್ದರಿಂದ ಎನ್​ಬಿಎಸ್​ಎ ಈ ವಾಹಿನಿಗಳ ವಿರುದ್ಧ ಕ್ರಮ ಕೈಗೊಂಡಿದೆ.

ಕ್ಯಾಂಪೇನ್ ಅಗೈನ್ಸ್ಟ್ ಹೇಟ್ ಸ್ಪೀಚ್ (CAHS) ಫೆಬ್ರವರಿ 2020ರಲ್ಲಿ ನಿಯೋಜನೆಗೊಂಡಿದ್ದು, ಮಾಧ್ಯಮದಲ್ಲಿ ವರದಿಯಾಗುವ ಧ್ವೇಷಪೂರಿತ ಸುದ್ದಿಗಳನ್ನು ಗಮನಿಸಿ, ಕ್ರಮ ಕೈಗೊಳ್ಳುತ್ತದೆ. ಇದೀಗ ಸಿಎಎಚ್​ಎಸ್ ದೂರಿನ ಅನ್ವಯ ಒಟ್ಟು ಮೂರು ಸುದ್ದಿ ವಾಹಿನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಕನ್ನಡದ ನ್ಯೂಸ್ ಚಾನಲ್​ಗಳಾದ ಸುವರ್ಣ ನ್ಯೂಸ್ ಹಾಗೂ ನ್ಯೂಸ್ 18 ಕನ್ನಡ, ಇಂಗ್ಲಿಷ್​ನ ಟೈಮ್ಸ್ ನೌ ವಾಹಿನಿಯ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ನ್ಯೂಸ್ 18 ಕನ್ನಡ ಚಾನಲ್ ಮೇಲೆ 1 ಲಕ್ಷ ಹಾಗೂ ಸುವರ್ಣ ನ್ಯೂಸ್ ಮೇಲೆ 50,000 ದಂಡ ವಿಧಿಸಲಾಗಿದೆ. ಹಾಗೂ ಜೂನ್ 23ರಂದು 9 ಗಂಟೆಯ ನ್ಯೂಸ್​ಗೂ ಮುನ್ನ ಬಹಿರಂಗವಾಗಿ ಕ್ಷಮಾಪಣೆ ಕೋರಬೇಕು ಎಂದು ಕೇಳಲಾಗಿದೆ.

ಎರಡೂ ಚಾನಲ್​ಗಳು ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ವರದಿ ಅಥವಾ ವಿಡಿಯೋಗಳು ತಮ್ಮ ವೆಬ್​ಸೈಟ್ ಅಥವಾ ಯೂಟ್ಯೂಬ್​ನಲ್ಲಿ ಇದ್ದರೆ, ಅದನ್ನು ಕೂಡಲೇ ಡಿಲೀಟ್ ಮಾಡಬೇಕು ಹಾಗೂ 7 ದಿನಗಳ ಒಳಗಾಗಿ ಈ ಬಗ್ಗೆ ಲಿಖಿತ ದಾಖಲೆ ಸಲ್ಲಿಸಬೇಕು ಎಂದು ಕೇಳಲಾಗಿದೆ.

ನ್ಯೂಸ್ 18 ಕನ್ನಡದಲ್ಲಿ ಏಪ್ರಿಲ್ 1, 2020ರಂದು ಪ್ರಸಾರವಾಗಿದ್ದ ಕಾರ್ಯಕ್ರಮದ ವಿರುದ್ಧ ಹಾಗೂ ಸುವರ್ಣ ನ್ಯೂಸ್​ನಲ್ಲಿ ಮಾರ್ಚ್ 31, 2020 ರಿಂದ ಏಪ್ರಿಲ್ 4, 2020ರ ವರೆಗೆ ಪ್ರಸಾರವಾಗಿದ್ದ ಕೆಲವು ಕಾರ್ಯಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ತಬ್ಲಿಘಿ ಜಮಾತ್​​​ನಲ್ಲಿ ಪಾಲ್ಗೊಂಡಿದ್ದ ವಿದೇಶಿಯರು ತವರಿಗೆ ಮರಳಲು ನೆರವಾಗಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ತಬ್ಲಿಘಿ ಜಮಾತ್​ನಲ್ಲಿ ಪಾಲ್ಗೊಂಡಿದ್ದ 36 ವಿದೇಶಿಯರು ಆರೋಪ ಮುಕ್ತ

Published On - 5:59 pm, Fri, 18 June 21

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​