AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದಲ್ಲಿ ಸಚಿವ ಸ್ಥಾನ: ಡಾ. ಮಂಜುನಾಥ್, ಕುಮಾರಸ್ವಾಮಿ ಹೇಳಿದ್ದಿಷ್ಟು

ಸರ್ಕಾರ ರಚನೆ ಪ್ರಕ್ರಿಯೆ ಅಂತಿಮಗೊಳಿಸುವುದಕ್ಕಾಗಿ ಇಂದು ದೆಹಲಿಯಲ್ಲಿ ಎನ್​ಡಿಎ ಸಭೆ ನಡೆಯುತ್ತಿದೆ. ಅದಕ್ಕೂ ಮುನ್ನ ಮಾತನಾಡಿದ ಬೆಂಗಳೂರು ಗ್ರಾಮಾಂತರ ನೂತನ ಸಂಸದ ಡಾ. ಮಂಜುನಾಥ್ ಹಾಗೂ ಮಂಡ್ಯ ಜೆಡಿಎಸ್ ಸಂಸದ ಹೆಚ್​ಡಿ ಕುಮಾರಸ್ವಾಮಿ ಸಚಿವ ಸ್ಥಾನ ನಿರೀಕ್ಷೆಯ ಬಗ್ಗೆ ಹೇಳಿದ್ದೇನು? ಇಲ್ಲಿದೆ ವಿವರ.

ಕೇಂದ್ರದಲ್ಲಿ ಸಚಿವ ಸ್ಥಾನ: ಡಾ. ಮಂಜುನಾಥ್, ಕುಮಾರಸ್ವಾಮಿ ಹೇಳಿದ್ದಿಷ್ಟು
ಡಾ. ಮಂಜುನಾಥ್, ಕುಮಾರಸ್ವಾಮಿ
ಹರೀಶ್ ಜಿ.ಆರ್​.
| Edited By: |

Updated on: Jun 07, 2024 | 11:05 AM

Share

ನವದೆಹಲಿ, ಜೂನ್ 7: ಕೇಂದ್ರದಲ್ಲಿ ಎನ್​ಡಿಎ ಸರ್ಕಾರ (NDA Government) ರಚನೆಗೆ ಸಿದ್ಧತೆ ಬಿರುಸಿನಿಂದ ಸಾಗುತ್ತಿದ್ದು, ಇಂದು ಮೈತ್ರಿಕೂಟದ ಸಭೆ ದೆಹಲಿಯಲ್ಲಿ ನಡೆಯುತ್ತಿದೆ. ಸಭೆಗೆ ತೆರಳುವುದಕ್ಕೂ ಮುನ್ನ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ನೂತನ ಸಂಸದ ಡಾ. ಮಂಜುನಾಥ್ (Dr CN Manjunath), ನರೇಂದ್ರ ಮೋದಿ 3ನೇ ಬಾರಿ ಪ್ರಧಾನಿ ಆಗುತ್ತಿರುವುದು ಸಂತೋಷದ ವಿಷಯ ಎಂದರು.

ಜವಾಹರ್ ಲಾಲ್ ನೆಹರು ಬಳಿಕ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿದ್ದಾರೆ. ನಾನು ಸಚಿವ ಆಗಬೇಕೆಂದು ಜನರ ನಿರೀಕ್ಷೆ ಇದೆ. ಹೆಚ್​ಡಿ ಕುಮಾರಸ್ವಾಮಿ ನನ್ನ ಹೆಸರು ಹೇಳಿರುವ ಬಗ್ಗೆ ಮಾಹಿತಿ ಇಲ್ಲ. ಮೊದಲು ಎನ್​ಡಿಎ ಸರ್ಕಾರ ರಚನೆ ಆಗಬೇಕು ಅಷ್ಟೆ. ಮೈತ್ರಿ ಸರ್ಕಾರ ಆಗಿರುವುದರಿಂದ ಅದರದ್ದೇ ಆದ ಸಮಸ್ಯೆಗಳು ಇರುತ್ತವೆ. ಸಚಿವ ಸ್ಥಾನದ ಬಗ್ಗೆ ಈಗಲೇ ಏನೂ ಹೇಳಲು ಸಾಧ್ಯವಿಲ್ಲ. ಹಾಗೆಂದು, ನಾನು ಆರೋಗ್ಯ ಸಚಿವ ಆಗಬೇಕು ಎಂಬುದು ಜನರ ಅನಿಸಿಕೆಯಷ್ಟೆ ಎಂದು ಮಂಜುನಾಥ್ ಹೇಳಿದರು.

ಈ ಮಧ್ಯೆ, ಕೇಂದ್ರ ಸಚಿವ ಸ್ಥಾನದ ಬಗ್ಗೆ ನನಗೆ ಅಧಿಕೃತ ಮಾಹಿತಿ ಬಂದಿಲ್ಲ ಎಂದು ದೆಹಲಿಯಲ್ಲಿ ಜೆಡಿಎಸ್ ಸಂಸದ ಹೆಚ್​​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇವತ್ತಿನ ಎನ್​ಡಿಎ ಸಭೆಯಲ್ಲಿ ಭಾಗವಹಿಸಲು ಬಂದಿದ್ದೇನೆ. ಮೋದಿ ನಾಯಕತ್ವದಲ್ಲಿ ಮತ್ತೆ ಸರ್ಕಾರ ಎಂಬ ಮಾಹಿತಿ ಇದೆ. ನಮಗೂ ಸಹ ಸಚಿವ ಸ್ಥಾನ ನೀಡ್ತಾರೆ ಎಂಬ ಮಾಹಿತಿ ಇದೆ. ನಮ್ಮಿಂದ ಒಳ್ಳೆ ಕೆಲಸ ಮಾಡಿಸಲು ಸಾಧ್ಯ ಎಂಬದು ವರಿಷ್ಠರಿಗೆ ಗೊತ್ತಿದೆ. ರಾಜ್ಯದ ಜನರಿಗೂ ಸಹ ಒಂದು ವಿಶ್ವಾಸ ಇದೆ ಎಂದರು.

ನಾಡಿನ ಜನತೆಗೆ ಒಳ್ಳೆಯದಾಗುವ ಖಾತೆ ಸಿಕ್ಕಿದರೆ ಉತ್ತಮ ಕೆಲಸ ಮಾಡುವೆ. ಮಂಜುನಾಥ್​ಗೆ ಖಾತೆ ನೀಡುವ ಬಗ್ಗೆ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ನನಗೆ ಮಂತ್ರಿ ಗಿರಿ ಕೊಡಬೇಕು ಎಂದು ಒತ್ತಡ ಹಾಕುತ್ತಿಲ್ಲ. ಬಿಜೆಪಿ ವರಿಷ್ಠರು ನೀಡಿದರೆ ಜವಾಬ್ದಾರಿ ನಿರ್ವಹಿಸುತ್ತೇನೆ ಅಷ್ಟೇ ಎಂದು ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಮಿತ್ರಪಕ್ಷಗಳ ಬೇಡಿಕೆಯೇನು, ಮಂತ್ರಿಗಿರಿ ನೀಡಲು ಬಿಜೆಪಿ ಸೂತ್ರವೇನು? ಇಲ್ಲಿದೆ ವಿವರ

ಇಂದು ನಡೆಯುವ ಎನ್​ಡಿಎ ಸಭೆಯಲ್ಲಿ ಸರ್ಕಾರ ರಚನೆ ತೀರ್ಮಾನ ಅಂತಿಮಗೊಳ್ಳುವ ನಿರೀಕ್ಷೆ ಇದೆ. ಮೋದಿ ಅವರು ಪ್ರಧಾನಿಯಾಗಿ ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ