AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದಲ್ಲಿ ಕೊಚ್ಚಿಹೋದ ಸಹೋದರರಿಗಾಗಿ NDRF ಶೋಧ

ಗದಗ: ಮಳೆಯಿಂದ ಮತ್ತೆ ಅಬ್ಬರಿಸಿ ಬೊಬ್ಬಿರಿದ ಬೆಣ್ಣೆಹಳ್ಳ ಪ್ರವಾಹಕ್ಕೆ ಇಬ್ಬರು ಸಹೋದರರು ಕೊಚ್ಚಿಹೋಗಿರುವ ಘಟನೆ ರೋಣ ತಾಲೂಕಿನ ಮಾಳವಾಡ ಬಳಿ ನಡೆದಿದೆ. ನಿನ್ನೆ ಸಾಯಂಕಾಲ ಬೆಣ್ಣೆಹಳ್ಳ ದಾಟುವಾಗ ಹದ್ಲಿ ಗ್ರಾಮದ ನಾಲ್ಕು ಜನ ಯುವಕರು ನೀರುಪಾಲಾಗಿದ್ದರು. ಅದರಲ್ಲಿ ಇಬ್ಬರನ್ನು ರಕ್ಷಣೆ ಮಾಡಿದ್ದು, ಇನ್ನಿಬ್ಬರು ನಾಪತ್ತೆಯಾಗಿದ್ದಾರೆ. ನರಗುಂದ ತಾಲೂಕಿನ ಹದ್ಲಿಗ್ರಾಮದ ಈರಪ್ಪ ಹಾಗೂ ಅಮೃತ್ ಇಬ್ಬರು ಈಜಿ ದಡಸೇರಿದ್ದಾರೆ. ಆದ್ರೆ 30 ವರ್ಷದ ಕಳಸಪ್ಪ ಹಾಗೂ 15 ವರ್ಷದ ಬಾಲಕ ಈರಣ್ಣ ನೀರು ಪಾಲಾಗಿದ್ದಾರೆ. ಅಮಾವಾಸ್ಯೆಗೆ ದೇವರ ಪೂಜೆಗೆ […]

ಪ್ರವಾಹದಲ್ಲಿ ಕೊಚ್ಚಿಹೋದ ಸಹೋದರರಿಗಾಗಿ NDRF ಶೋಧ
ಸಾಧು ಶ್ರೀನಾಥ್​
|

Updated on:Oct 28, 2019 | 6:52 AM

Share

ಗದಗ: ಮಳೆಯಿಂದ ಮತ್ತೆ ಅಬ್ಬರಿಸಿ ಬೊಬ್ಬಿರಿದ ಬೆಣ್ಣೆಹಳ್ಳ ಪ್ರವಾಹಕ್ಕೆ ಇಬ್ಬರು ಸಹೋದರರು ಕೊಚ್ಚಿಹೋಗಿರುವ ಘಟನೆ ರೋಣ ತಾಲೂಕಿನ ಮಾಳವಾಡ ಬಳಿ ನಡೆದಿದೆ. ನಿನ್ನೆ ಸಾಯಂಕಾಲ ಬೆಣ್ಣೆಹಳ್ಳ ದಾಟುವಾಗ ಹದ್ಲಿ ಗ್ರಾಮದ ನಾಲ್ಕು ಜನ ಯುವಕರು ನೀರುಪಾಲಾಗಿದ್ದರು. ಅದರಲ್ಲಿ ಇಬ್ಬರನ್ನು ರಕ್ಷಣೆ ಮಾಡಿದ್ದು, ಇನ್ನಿಬ್ಬರು ನಾಪತ್ತೆಯಾಗಿದ್ದಾರೆ.

ನರಗುಂದ ತಾಲೂಕಿನ ಹದ್ಲಿಗ್ರಾಮದ ಈರಪ್ಪ ಹಾಗೂ ಅಮೃತ್ ಇಬ್ಬರು ಈಜಿ ದಡಸೇರಿದ್ದಾರೆ. ಆದ್ರೆ 30 ವರ್ಷದ ಕಳಸಪ್ಪ ಹಾಗೂ 15 ವರ್ಷದ ಬಾಲಕ ಈರಣ್ಣ ನೀರು ಪಾಲಾಗಿದ್ದಾರೆ. ಅಮಾವಾಸ್ಯೆಗೆ ದೇವರ ಪೂಜೆಗೆ ನದಿ ನೀರು ತರಲು ಹೋದ ವೇಳೆ ಈ ದುರ್ಘಟನೆ ನಡೆದಿದೆ. ಸದ್ಯ ನೀರುಪಾಲಾದ ಯುವಕರಿಗಾಗಿ ರೋಣ ತಾಲೂಕಿನ ಮೆಣಸಗಿ ಬಳಿಯ ಬೆಣ್ಣೆಹಳ್ಳದಲ್ಲಿ ಎನ್​ಡಿಆರ್​ಎಫ್​, ಅಗ್ನಿಶಾಮಕದಳ, ಪೊಲೀಸರು ಹಾಗೂ ಸ್ಥಳೀಯರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದ್ರೆ ಬೆಣ್ಣೆಹಳ್ಳ ಪ್ರವಾಹ ಕ್ಷಣ ಕ್ಷಣವೂ ಏರುತ್ತಿದ್ದು, ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.

ಕಾರ್ಯಾಚರಣೆ: ನಿನ್ನೆ ಕೊಚ್ಚಿ ಹೋದ ಸ್ಥಳದಲ್ಲಿ ಪೊಲೀಸರಿಂದ ಶೋಧ ಕಾರ್ಯ ನಡೆದಿತ್ತು. ಇಂದು NDRF ತಂಡದಿಂದ ಕಾರ್ಯಚರಣೆ ನಡೆಯುತ್ತಿದೆ. ಎರಡು ಬೋಟ್​ಗಳಲ್ಲಿ 12 NDRF ಸದಸ್ಯರು ತೆರಳಿ, ನೀರಿಗಿಳಿದು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾಹಿತಿ ನೀಡಿದ್ದಾರೆ.

Published On - 6:13 pm, Sun, 27 October 19

Follow Us
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ
ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!