AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದಲ್ಲಿ ಕೊಚ್ಚಿಹೋದ ಸಹೋದರರಿಗಾಗಿ NDRF ಶೋಧ

ಗದಗ: ಮಳೆಯಿಂದ ಮತ್ತೆ ಅಬ್ಬರಿಸಿ ಬೊಬ್ಬಿರಿದ ಬೆಣ್ಣೆಹಳ್ಳ ಪ್ರವಾಹಕ್ಕೆ ಇಬ್ಬರು ಸಹೋದರರು ಕೊಚ್ಚಿಹೋಗಿರುವ ಘಟನೆ ರೋಣ ತಾಲೂಕಿನ ಮಾಳವಾಡ ಬಳಿ ನಡೆದಿದೆ. ನಿನ್ನೆ ಸಾಯಂಕಾಲ ಬೆಣ್ಣೆಹಳ್ಳ ದಾಟುವಾಗ ಹದ್ಲಿ ಗ್ರಾಮದ ನಾಲ್ಕು ಜನ ಯುವಕರು ನೀರುಪಾಲಾಗಿದ್ದರು. ಅದರಲ್ಲಿ ಇಬ್ಬರನ್ನು ರಕ್ಷಣೆ ಮಾಡಿದ್ದು, ಇನ್ನಿಬ್ಬರು ನಾಪತ್ತೆಯಾಗಿದ್ದಾರೆ. ನರಗುಂದ ತಾಲೂಕಿನ ಹದ್ಲಿಗ್ರಾಮದ ಈರಪ್ಪ ಹಾಗೂ ಅಮೃತ್ ಇಬ್ಬರು ಈಜಿ ದಡಸೇರಿದ್ದಾರೆ. ಆದ್ರೆ 30 ವರ್ಷದ ಕಳಸಪ್ಪ ಹಾಗೂ 15 ವರ್ಷದ ಬಾಲಕ ಈರಣ್ಣ ನೀರು ಪಾಲಾಗಿದ್ದಾರೆ. ಅಮಾವಾಸ್ಯೆಗೆ ದೇವರ ಪೂಜೆಗೆ […]

ಪ್ರವಾಹದಲ್ಲಿ ಕೊಚ್ಚಿಹೋದ ಸಹೋದರರಿಗಾಗಿ NDRF ಶೋಧ
ಸಾಧು ಶ್ರೀನಾಥ್​
|

Updated on:Oct 28, 2019 | 6:52 AM

Share

ಗದಗ: ಮಳೆಯಿಂದ ಮತ್ತೆ ಅಬ್ಬರಿಸಿ ಬೊಬ್ಬಿರಿದ ಬೆಣ್ಣೆಹಳ್ಳ ಪ್ರವಾಹಕ್ಕೆ ಇಬ್ಬರು ಸಹೋದರರು ಕೊಚ್ಚಿಹೋಗಿರುವ ಘಟನೆ ರೋಣ ತಾಲೂಕಿನ ಮಾಳವಾಡ ಬಳಿ ನಡೆದಿದೆ. ನಿನ್ನೆ ಸಾಯಂಕಾಲ ಬೆಣ್ಣೆಹಳ್ಳ ದಾಟುವಾಗ ಹದ್ಲಿ ಗ್ರಾಮದ ನಾಲ್ಕು ಜನ ಯುವಕರು ನೀರುಪಾಲಾಗಿದ್ದರು. ಅದರಲ್ಲಿ ಇಬ್ಬರನ್ನು ರಕ್ಷಣೆ ಮಾಡಿದ್ದು, ಇನ್ನಿಬ್ಬರು ನಾಪತ್ತೆಯಾಗಿದ್ದಾರೆ.

ನರಗುಂದ ತಾಲೂಕಿನ ಹದ್ಲಿಗ್ರಾಮದ ಈರಪ್ಪ ಹಾಗೂ ಅಮೃತ್ ಇಬ್ಬರು ಈಜಿ ದಡಸೇರಿದ್ದಾರೆ. ಆದ್ರೆ 30 ವರ್ಷದ ಕಳಸಪ್ಪ ಹಾಗೂ 15 ವರ್ಷದ ಬಾಲಕ ಈರಣ್ಣ ನೀರು ಪಾಲಾಗಿದ್ದಾರೆ. ಅಮಾವಾಸ್ಯೆಗೆ ದೇವರ ಪೂಜೆಗೆ ನದಿ ನೀರು ತರಲು ಹೋದ ವೇಳೆ ಈ ದುರ್ಘಟನೆ ನಡೆದಿದೆ. ಸದ್ಯ ನೀರುಪಾಲಾದ ಯುವಕರಿಗಾಗಿ ರೋಣ ತಾಲೂಕಿನ ಮೆಣಸಗಿ ಬಳಿಯ ಬೆಣ್ಣೆಹಳ್ಳದಲ್ಲಿ ಎನ್​ಡಿಆರ್​ಎಫ್​, ಅಗ್ನಿಶಾಮಕದಳ, ಪೊಲೀಸರು ಹಾಗೂ ಸ್ಥಳೀಯರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದ್ರೆ ಬೆಣ್ಣೆಹಳ್ಳ ಪ್ರವಾಹ ಕ್ಷಣ ಕ್ಷಣವೂ ಏರುತ್ತಿದ್ದು, ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.

ಕಾರ್ಯಾಚರಣೆ: ನಿನ್ನೆ ಕೊಚ್ಚಿ ಹೋದ ಸ್ಥಳದಲ್ಲಿ ಪೊಲೀಸರಿಂದ ಶೋಧ ಕಾರ್ಯ ನಡೆದಿತ್ತು. ಇಂದು NDRF ತಂಡದಿಂದ ಕಾರ್ಯಚರಣೆ ನಡೆಯುತ್ತಿದೆ. ಎರಡು ಬೋಟ್​ಗಳಲ್ಲಿ 12 NDRF ಸದಸ್ಯರು ತೆರಳಿ, ನೀರಿಗಿಳಿದು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾಹಿತಿ ನೀಡಿದ್ದಾರೆ.

Published On - 6:13 pm, Sun, 27 October 19

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್