AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1ನೇ ತರಗತಿ ಸೇರಲು ಹೊಸ ರೂಲ್ಸ್​: ಲಕ್ಷಾಂತರ ಮಕ್ಕಳು ಮನೆಯಲ್ಲೇ ಕೂರುವ ಭೀತಿ

ಇನ್ನೇನು ಹೊಸ ಶೈಕ್ಷಣಿಕ ವರ್ಷ ಆರಂಭಕ್ಕೆ ದಿನಗಳು ಹತ್ತಿರವಾಗುತ್ತಿದೆ. ಮಕ್ಕಳನ್ನು ಒಳ್ಳೆ ಶಾಲೆಗಳಿಗೆ ಸೇರಿಸಬೇಕೆಂದು ಪ್ಲಾನ್ ಮಾಡಿಕೊಂಡಿರುವ ಯುಕೆಜಿ ಮಕ್ಕಳ ಪೋಷಕರಿಗೆ ಆತಂಕ ಎದುರಾಗಿದೆ. ಮಕ್ಕಳ ಶಾಲಾ ದಾಖಲಾತಿ ಸಂಬಂಧ ಸರ್ಕಾರ ಹೊರಡಿಸಿರುವ ಹೊಸ ಸುತ್ತೋಲೆ ಈಗ ಪೋಷಕರ ಮಕ್ಕಳಿಗೆ ನುಂಗಲಾರದ ತುತ್ತಾಗಿದ್ದು, ಶಾಲೆ ಸೇರಬೇಕಾದ ಲಕ್ಷಾಂತರ ಮಕ್ಕಳು ಮನೆಯಲ್ಲೇ ಕೂರುವ ಆತಂಕ ಎದುರಾಗಿದೆ.

1ನೇ ತರಗತಿ ಸೇರಲು ಹೊಸ ರೂಲ್ಸ್​: ಲಕ್ಷಾಂತರ ಮಕ್ಕಳು ಮನೆಯಲ್ಲೇ ಕೂರುವ ಭೀತಿ
ಪ್ರಾತಿನಿಧಿಕ ಚಿತ್ರ
Vinay Kashappanavar
| Edited By: |

Updated on:Mar 02, 2025 | 11:44 AM

Share

ಬೆಂಗಳೂರು, (ಮಾರ್ಚ್ 02): ಒಂದನೇ ತರಗತಿಗೆ ಶಾಲೆಗೆ ದಾಖಲಾತಿ ಪಡೆಯಲು ಜೂನ್ 1 ಕ್ಕೆ 6 ವರ್ಷ ತುಂಬಿರಬೇಕು ಎಂಬ ಶಾಲಾ ಶಿಕ್ಷಣ ಇಲಾಖೆಯ ಸುತ್ತೋಲೆ ಈಗ ಪೋಷಕರ ನಿದ್ದೆಗೆಡಿಸಿದ್ದು, ಯುಕೆಜಿ ತೇರ್ಗಡೆ ಹೊಂದಲಿರುವ ಲಕ್ಷಾಂತರ ಮಂದಿ ಮಕ್ಕಳು ದಾಖಲಾತಿ ಪಡೆಯಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಭಾರೀ ಅಸಮಾಧಾನ ಹೊರಹಾಕಿರುವ ಪೋಷಕರು, ಸರ್ಕಾರ ಈ ನಿಯಮ ಸಡಿಲಿಕೆ ಮಾಡಬೇಕು ಅಂತ ಆಗ್ರಹ ಮಾಡಿದ್ದಾರೆ.

ಇನ್ನು ಈ ವಿಚಾರವಾಗಿ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಪೋಷಕರ ಸಮೂಹ, ಈಗಾಗಲೇ ಲಕ್ಷಾಂತರ ಮಂದಿ ಮಕ್ಕಳು ಯುಕೆಜಿ ತೇರ್ಗಡೆ ಹೊಂದುತ್ತಿದ್ದು, 6 ವರ್ಷ ತುಂಬಲು 5,10 ದಿನಗಳಷ್ಟೇ ಬಾಕಿ ಇದೆ. ಸರ್ಕಾರದ ಈ ಸುತ್ತೋಲೆಗೆ ಪರಿಣಾಮ ಇವರೆಲ್ಲ ಒಂದನೇ ತರಗತಿಗೆ ಪ್ರವೇಶ ಸಿಗದೇ ಶೈಕ್ಷಣಿಕ ಸಮಯ ವ್ಯರ್ಥ ಮಾಡಿಕೊಳ್ಳುವ ಭೀತಿಯಲ್ಲಿ ಇದ್ದಾರೆ, ಹೀಗಾಗಿ ಸರ್ಕಾರ ಈ ನಿಯಮ ಇದೊಂದು ಬಾರಿ ಸಡಿಲಿಕೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಓದಿಗೆ ಟೈಮ್ ಕಮ್ಮಿ; ನಗರದವರಿಗಿಂತ ಗ್ರಾಮೀಣದವರಿಂದಲೇ ಓದಿಗೆ ಹೆಚ್ಚು ಸಮಯ ಮೀಸಲು

ಇನ್ನು ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರಕರಣ ನ್ಯಾಯಾಲಯ ಹಂತದಲ್ಲಿದೆ. ಪೋಷಕರು ಹಾಗೂ ಮಕ್ಕಳ ಮನವಿ ಬಗ್ಗೆ ನನಗೂ ಸಹಾನುಭೂತಿ ಇದೆ. ಮುಂದಿನ ದಿನಗಳಲ್ಲಿ ಕೋರ್ಟ್ ನಿರ್ದೇಶನದ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆ ಒಂದನೇ ತರಗತಿಗೆ ಪ್ರವೇಶ ಪಡೆದುಕೊಳ್ಳುವ ವಿಚಾರ ಪೋಷಕರು ಹಾಗೂ ಸರ್ಕಾರದ ನಡುವೆ ಹಗ್ಗಜಗ್ಗಾಟ ಮುಂದುವರೆಯಲಿದೆ. ಇದು ಯಾವ ಹಂತಕ್ಕೆ ಹೋಗಿ ಮುಟ್ಟುತ್ತೆ ಎನ್ನುವುದನ್ನು ಕಾದು ನೋಡಬೇಕಿದೆ.

Published On - 11:23 am, Sun, 2 March 25

Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ