AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗತ್ಯಕ್ಕೆ ತಕ್ಕಂತೆ ವೈದ್ಯಕೀಯ ಸೌಲಭ್ಯ ಹೆಚ್ಚಳ, ಖಾಸಗಿ ಆಸ್ಪತ್ರೆಗಳಿಂದ ರೆಮ್​ಡೆಸಿವರ್​ಗೆ ಅನಗತ್ಯ ಬೇಡಿಕೆ: ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮಾಹಿತಿ

ಮಾರ್ಚ್​ 11ರ ನಂತರ ರಾಜ್ಯದ ಆಸ್ಪತ್ರೆಗಳಲ್ಲಿ 22,001ಆಕ್ಸಿಜನ್ ಬೆಡ್, 1248 ಹೆಚ್ಎಫ್ಎನ್​ಸಿ ಬೆಡ್, 701 ಐಸಿಯು, 1548 ವೆಂಟಿಲೇಟರ್ ಬೆಡ್​ಗಳನ್ನು ಹೆಚ್ಚಿಸಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಆಸ್ಪತ್ರೆಗಳಲ್ಲೂ ಬೆಡ್ ಹೆಚ್ಚಳ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಅಗತ್ಯಕ್ಕೆ ತಕ್ಕಂತೆ ವೈದ್ಯಕೀಯ ಸೌಲಭ್ಯ ಹೆಚ್ಚಳ, ಖಾಸಗಿ ಆಸ್ಪತ್ರೆಗಳಿಂದ ರೆಮ್​ಡೆಸಿವರ್​ಗೆ ಅನಗತ್ಯ ಬೇಡಿಕೆ: ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮಾಹಿತಿ
ಕರ್ನಾಟಕ ಹೈಕೋರ್ಟ್
Skanda
| Edited By: |

Updated on: Apr 29, 2021 | 1:39 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಉಲ್ಬಣಿಸಿದ ಕಾರಣ ಸೋಂಕಿತರ ಸಂಖ್ಯೆ ಲೆಕ್ಕಾಚಾರಕ್ಕೂ ಮೀರಿ ಹೆಚ್ಚಳವಾಗಿದೆ. ವೈದ್ಯಕೀಯ ಸೌಲಭ್ಯಗಳಲ್ಲಿ ಉಂಟಾಗಿರುವ ಏರುಪೇರು ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದಿದೆ. ಈ ಸಂಬಂಧ ಉಚ್ಛ ನ್ಯಾಯಾಲಯಕ್ಕೆ ಉತ್ತರ ಒದಗಿಸಿರುವ ರಾಜ್ಯ ಸರ್ಕಾರ ರಾಜ್ಯದ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯಗಳ ಪ್ರಮಾಣವನ್ನು ಹೆಚ್ಚಿಸಿರುವುದಾಗಿ ತಿಳಿಸಿದೆ. ಮಾರ್ಚ್​ 11ರ ನಂತರ ರಾಜ್ಯದ ಆಸ್ಪತ್ರೆಗಳಲ್ಲಿ 22,001ಆಕ್ಸಿಜನ್ ಬೆಡ್, 1248 ಹೆಚ್ಎಫ್ಎನ್​ಸಿ ಬೆಡ್, 701 ಐಸಿಯು, 1548 ವೆಂಟಿಲೇಟರ್ ಬೆಡ್​ಗಳನ್ನು ಹೆಚ್ಚಿಸಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಆಸ್ಪತ್ರೆಗಳಲ್ಲೂ ಬೆಡ್ ಹೆಚ್ಚಳ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

ಜತೆಗೆ, ವೈದ್ಯಕೀಯ ಶಿಕ್ಷಣ ಇಲಾಖೆ ಆಸ್ಪತ್ರೆಗಳಲ್ಲೂ ಬೆಡ್ ಹೆಚ್ಚಳ ಮಾಡಲಾಗಿದೆ. 9405 ಆಕ್ಸಿಜನ್ ಬೆಡ್, 646 ವೆಂಟಿಲೇಟರ್, 570ರಷ್ಟು ಹೆಚ್​ಎಫ್​ಎನ್ ಬೆಡ್ ಹೆಚ್ಚಿಸಲಾಗಿದೆ. ಕಮಾಂಡ್ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಬೆಡ್​ಗಾಗಿ‌ ಮನವಿ ಮಾಡಲಾಗಿದ್ದು ಹಜ್ ಭವನ್, ಪಶುವೈದ್ಯ ಕಾಲೇಜಿನಲ್ಲಿ ತಲಾ 100 ಬೆಡ್ ವ್ಯವಸ್ಥೆ ಮಾಡಲಾಗಿದೆ. ಇನ್ನೂ 1500 ಬೆಡ್ ಸೃಷ್ಟಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೈಕೋರ್ಟ್​ಗೆ ರಾಜ್ಯ ಸರ್ಕಾರ ತಿಳಿಸಿದೆ. ಗಂಭೀರ ಸೋಂಕಿತರಿಗಷ್ಟೇ ಆಕ್ಸಿಜನ್ ಬೆಡ್, ರೆಮ್​ಡಿಸಿವರ್ ಪೂರೈಕೆ ಮಾಡುತ್ತಿರುವುದಾಗಿಯೂ ಈ ಸಂದರ್ಭದಲ್ಲಿ ಹೇಳಿಕೆ ನೀಡಿದೆ.

ಅಲ್ಲದೇ, ರಾಜ್ಯದಲ್ಲಿ ರೆಮ್‌ಡಿಸಿವಿರ್ ಪೂರೈಕೆ ಹೆಚ್ಚಳಕ್ಕೆ ಕ್ರಮ ಕೈಗೊಂಡಿದ್ದು, ಕೇಂದ್ರದಿಂದ ರಾಜ್ಯಕ್ಕೆ 1,22,000 ರೆಮ್​ಡಿಸಿವಿರ್ ಹಂಚಿಕೆ‌ ಆಗಿದೆ. ಇಲ್ಲಿಯವರೆಗೆ ಇಷ್ಟು ರೆಮ್​ಡಿಸಿವಿರ್ ರಾಜ್ಯಕ್ಕೆ ಹಂಚಲಾಗಿದೆ. ನಿತ್ಯ 20 ಸಾವಿರಕ್ಕೂ ಹೆಚ್ಚು ರೆಮ್​ಡಿಸಿವಿರ್​ಗೆ ಬೇಡಿಕೆಯಿದ್ದು, ವೆಬ್​ಸೈಟ್​ನಲ್ಲಿ ರೆಮ್​ಡಿಸಿವಿರ್ ಮಾಹಿತಿ‌ಯನ್ನು ಹಂಚಿಕೊಳ್ಳಲಾಗಿದೆ. ವಾರ್ ರೂಮ್​ನಲ್ಲಿ ರೆಮ್​ಡಿಸಿವಿರ್​ಗಾಗಿ ಅಧಿಕಾರಿ ನೇಮಕ ಮಾಡಲಾಗಿದ್ದು, 38,420 ರೆಮ್​ಡಿಸಿವಿರ್ ಈಗಾಗಲೇ ಸ್ಟಾಕ್ ಇದೆ ಎಂದು ಸರ್ಕಾರಿ ವಕೀಲ ವಿಕ್ರಮ್ ಹುಯಿಲಗೋಳ್ ಹೈಕೋರ್ಟ್​ಗೆ ಮಾಹಿತಿ ಒದಗಿಸಿದ್ದಾರೆ.

ಇದೇ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಿಂದ ಅನಗತ್ಯವಾಗಿ ರೆಮ್​ಡಿಸಿವಿರ್​ಗೆ ಬೇಡಿಕೆ ಬರುತ್ತಿದೆ ಎಂಬ ಆರೋಪವೂ ಕೇಳಿಬಂದಿದ್ದು, ಅಗತ್ಯವಿಲ್ಲದಿದ್ದರೂ ಸೋಂಕಿತರಿಗೆ ರೆಮ್​ಡಿಸಿವಿರ್ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಿಂದ ಅನಗತ್ಯವಾಗಿ ವಾಟ್ಸಾಪ್,‌ ಎಸ್ಎಂಎಸ್, ಇ-ಮೇಲ್ ಮೂಲಕ ಬೇಡಿಕೆ ಬರುತ್ತಿದೆ. ಖಾಸಗಿ ‌ಆಸ್ಪತ್ರೆಗಳೇ ಸೋಂಕಿತರಿಗೆ ರೆಮ್​ಡಿಸಿವಿರ್ ಪೂರೈಸಲಿ ಎಂದು ಸರ್ಕಾರಿ ವಕೀಲ ವಿಕ್ರಮ್ ಹುಯಿಲಗೋಳ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ಸಕ್ರಿಯ ಪ್ರಕರಣಗಳನ್ನು ಹೊಂದಿದ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 2ನೇ ಸ್ಥಾನ; ಮರಣ ಪ್ರಮಾಣದಲ್ಲಿ 3ನೇ ಸ್ಥಾನ 

ಸುಮ್​ಸುಮ್ನೆ ರೆಮ್​ಡಿಸಿವಿರ್ ಬರೆದರೆ ವೈದ್ಯರ ವಿರುದ್ಧ ಕ್ರಮ; ಕರ್ನಾಟಕದಲ್ಲಿ ರೆಮ್​ಡಿಸಿವಿರ್ ಸಮಸ್ಯೆ ಒಪ್ಪಿಕೊಂಡ ಆರೋಗ್ಯ ಸಚಿವ ಕೆ.ಸುಧಾಕರ್

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು