AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET- PG: ಸೇವಾನಿರತ ವೈದ್ಯರ ಪಿಜಿ ಸೀಟು ಮೀಸಲಾತಿ ಇಳಿಕೆ ಆದೇಶ ರದ್ದು

ವೈದ್ಯಕೀಯ ಪ್ರವೇಶ ಪ್ರಕ್ರಿಯೆಯಲ್ಲಿ ಸೇವಾ ನಿರತ ವೈದ್ಯರಿಗೆ ನೀಡುವ ಮೀಸಲಾತಿಯನ್ನು ಕಡಿತಗೊಳಿಸಿರುವ ರಾಜ್ಯದ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್​ ರದ್ದುಪಡಿಸಿದೆ.

NEET- PG: ಸೇವಾನಿರತ ವೈದ್ಯರ ಪಿಜಿ ಸೀಟು ಮೀಸಲಾತಿ ಇಳಿಕೆ ಆದೇಶ ರದ್ದು
NEET-PG
TV9 Web
| Edited By: |

Updated on: Oct 25, 2022 | 9:59 AM

Share

ವೈದ್ಯಕೀಯ ಪ್ರವೇಶ ಪ್ರಕ್ರಿಯೆಯಲ್ಲಿ ಸೇವಾ ನಿರತ ವೈದ್ಯರಿಗೆ ನೀಡುವ ಮೀಸಲಾತಿಯನ್ನು ಕಡಿತಗೊಳಿಸಿರುವ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್​ ರದ್ದುಪಡಿಸಿದೆ. ಹೀಗಾಗಿ ಈ ಮೊದಲಿದ್ದ ಮೀಸಲಾತಿ ಮುಂದುವರೆಯಲಿದೆ.

ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 6, 2022 ರಂದು ಹೊರಡಿಸಲಾದ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿದೆ, ಅದರ ಮೂಲಕ 2022 ರ ಪಿಜಿ-ನೀಟ್ ಪರೀಕ್ಷೆಯಿಂದ ಸೇವಾನಿರತ ಅಭ್ಯರ್ಥಿಗಳಿಗೆ ಮೀಸಲಿಟ್ಟ ಸೀಟುಗಳನ್ನು ಶೇಕಡಾ 30 ರಿಂದ ಶೇಕಡಾ 15 ಕ್ಕೆ ಇಳಿಸಲಾಗಿದೆ.

ಈಗಾಗಲೇ ಕರ್ನಾಟಕದಾದ್ಯಂತ ಸರ್ಕಾರಿ ಸೇವೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು, ಸೇವಾನಿರತ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿ ಹೈಕೋರ್ಟ್ ಈ ಆದೇಶ ನೀಡಿದೆ. ಅಕ್ಟೋಬರ್ 14 ರಂದು ಸಂಬಂಧಿತ ಆದೇಶದಲ್ಲಿ ನ್ಯಾಯಾಲಯದ ಮತ್ತೊಂದು ವಿಭಾಗೀಯ ಪೀಠವು ಮಧ್ಯಂತರ ಆದೇಶವನ್ನು ನೀಡಿತ್ತು.

ಇದಲ್ಲದೆ ಅಕ್ಟೋಬರ್ 9 ರಂದು ವೈದ್ಯಕೀಯ ಶಿಕ್ಷಣ ಇಲಾಖೆ ಹೊರಡಿಸಿದ್ದ ಸೀಟ್ ಮ್ಯಾಟ್ರಿಕ್ಸ್​ನ್ನು ರದ್ದುಗೊಳಿಸಿ ಹೊಸ ಪಟ್ಟಿಯನ್ನು ಪ್ರಕಟಿಸಲು ಸೂಚಿಸಿದೆ.

ಹಾಗೆಯೇ ಕಾಲೇಜು ಲಭ್ಯತೆ ಬಗ್ಗೆಯೂ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರತಿ ಅಭ್ಯರ್ಥಿಯೂ 1:1 ಬದಲಾಗಿ 1:5 ಅನುಪಾತದಲ್ಲಿ ಸೀಟು ಆಯ್ಕೆಗೆ ಅವಕಾಶ ನೀಡಬೇಕು ಎಂದು ಹೈಕೋರ್ಟ್​ ವಿಭಾಗೀಯ ಪೀಠ ಸೂಚಿಸಿದೆ. ಹೈಕೋರ್ಟ್ ತನ್ನ ತೀರ್ಪಿನಲ್ಲಿ ಕೋಟಾಗೆ ಸಂಬಂಧಿಸಿದ ಮಾನದಂಡಗಳೇನು ಎಂಬುದನ್ನು ಉಲ್ಲೇಖಿಸಿದೆ.

ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಡಾ. ಕೆಎಸ್​ ಸ್ವಾತಿ, ಡಾ. ಭೀಮಣ್ಣ ಸಿನ್ನೂರ ಸಹಿತ 50ಕ್ಕೂ ಹೆಚ್ಚು ಸೇವಾನಿರತ ವೈದ್ಯರು ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆಲೋಕ್ ಆರಾಧೆ ಹಾಗೂ ನ್ಯಾ. ಎಸ್​ ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ