AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಕ್ ಪೋಸ್ಟ್ ಸ್ಥಾಪಿಸದೇ ರೈಲ್ವೆ ಪೊಲೀಸರ ನಿರ್ಲಕ್ಷ್ಯ: ತರಾಟೆ ತೆಗೆದುಕೊಂಡ ಬಾಗಲಕೋಟೆ ಡಿಸಿ, ಎಸ್ಪಿ

ರಾಜ್ಯದಲ್ಲಿ ಲೋಕಸಭೆ ಹಿನ್ನೆಲೆ ನೀತಿ ಸಂಹಿತೆ ಜಾರಿ ಮಾಡಲಾಗಿದೆ. ಆದರೆ ಚೆಕ್ ಪೋಸ್ಟ್ ಸ್ಥಾಪಿಸದೇ ರೈಲ್ವೆ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ ಚುನಾವಣಾ ಅಧಿಕಾರಿಗಳು ರೈಲ್ವೆ ನಿಲ್ದಾಣಕ್ಕೆ ಧಿಡೀರ್ ಭೇಟಿ ನೀಡಿದ್ದು, ಚೆಕ್ ಪೋಸ್ಟ್ ಪರಿಶೀಲನೆ ಮಾಡಿದ್ದಾರೆ. ಸಬ್ ಇನ್ಸ್‌ಪೆಕ್ಟರ್ ಸಿದ್ಧಪ ಬಾರ್ಕಿ ಮೇಲೆ ಅಧಿಕಾರಿಗಳು ಗರಂ ಆಗಿದ್ದಾರೆ.

ಚೆಕ್ ಪೋಸ್ಟ್ ಸ್ಥಾಪಿಸದೇ ರೈಲ್ವೆ ಪೊಲೀಸರ ನಿರ್ಲಕ್ಷ್ಯ: ತರಾಟೆ ತೆಗೆದುಕೊಂಡ ಬಾಗಲಕೋಟೆ ಡಿಸಿ, ಎಸ್ಪಿ
ಬಾಗಲಕೋಟೆ ರೈಲ್ವೆ ನಿಲ್ದಾಣಕ್ಕೆ ಚುನಾವಣಾಧಿಕಾರಿಗಳ ದಿಢೀರ್ ಭೇಟಿ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಗಂಗಾಧರ​ ಬ. ಸಾಬೋಜಿ

Updated on:Mar 30, 2024 | 8:58 PM

ಬಾಗಲಕೋಟೆ, ಮಾರ್ಚ್ 30: ರಾಜ್ಯದಲ್ಲಿ ಲೋಕಸಭೆ ಹಿನ್ನೆಲೆ ನೀತಿ ಸಂಹಿತೆ ಜಾರಿ ಮಾಡಲಾಗಿದೆ. ಆದರೆ ಚೆಕ್ ಪೋಸ್ಟ್ ಸ್ಥಾಪಿಸದೇ ರೈಲ್ವೆ ಪೊಲೀಸರು (railway police) ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ ಚುನಾವಣಾ ಅಧಿಕಾರಿಗಳು ರೈಲ್ವೆ ನಿಲ್ದಾಣಕ್ಕೆ ಧಿಡೀರ್ ಭೇಟಿ ನೀಡಿದ್ದು, ಚೆಕ್ ಪೋಸ್ಟ್ ಪರಿಶೀಲನೆ ಮಾಡಿದ್ದಾರೆ. ಡಿಸಿ ಜಾನಕಿ, ಸಿಇಒ ಶಶಿಧರ್‌ ಕುರೆರ್‌, ಎಸ್‌ಪಿ ಅಮರನಾಥರೆಡ್ಡಿಯನ್ನು ರೈಲ್ವೆ ಪೊಲೀಸ್‌ ಸಬ್ ಇನ್ಸ್‌ಪೆಕ್ಟರ್‌, ಸಿಬ್ಬಂದಿಗೆ ಅಧಿಕಾರಿಗಳಿಂದ ತರಾಟೆ ತೆಗೆದುಕೊಂಡಿದ್ದಾರೆ. ಸಬ್ ಇನ್ಸ್‌ಪೆಕ್ಟರ್ ಸಿದ್ಧಪ ಬಾರ್ಕಿ ಮೇಲೆ ಅಧಿಕಾರಿಗಳು ಗರಂ ಆಗಿದ್ದಾರೆ.

ನೀವು ಭಾರತ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿದ್ದೀರಿ ನೆನಪಿಟ್ಟುಕೊಳ್ಳಿ. ಈ ತರಹ ನಿಷ್ಕಾಳಜಿ ಮಾಡಿದರೆ ಆಗಲ್ಲ. ಇಲ್ಲೇ ಇದ್ದರೂ ಮೀಟಿಂಗ್ ಕರೆದಾಗ ಯಾಕೆ ಬರಲ್ಲ ನೀವು. ಇಲ್ಲಿಯವರೆಗೆ ಒಂದಾದರೂ ಪ್ರಕರಣ ಪತ್ತೆ ಮಾಡಿದ್ದೀರಾ ನೀವು. ಚೆಕ್ ಮಾಡಲ್ಲ ಅಂದರೆ ಎಲ್ಲಿ ಪತ್ತೆ ಮಾಡುತ್ತೀರಾ ಎಂದು ಅಧಿಕಾರಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.

ದಾಖಲೆ ಇಲ್ಲದೆ ಸರ್ಕಾರಿ ಬಸ್​ನಲ್ಲಿ ಸಾಗಿಸುತ್ತಿದ್ದ 2 ಲಕ್ಷ ರೂ. ಹಣ ಜಪ್ತಿ

ದಾಖಲೆ ಇಲ್ಲದೆ ಸರ್ಕಾರಿ ಬಸ್​ನಲ್ಲಿ ಸಾಗಿಸುತ್ತಿದ್ದ 2 ಲಕ್ಷ ರೂ. ಹಣವನ್ನು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಸರ್ಕಾರಿ ಬಸ್​ನಲ್ಲಿ ಶಿವಾನಂದ ಬುರುದ್ ಎಂಬಾತ 2 ಲಕ್ಷ ರೂ. ನಗದು ಸಾಗಿಸುತ್ತಿದ್ದ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: Lok Sabha Elections: ಚುನಾವಣಾ ಕಣದಲ್ಲಿ ಕೋಟಿ ಕೋಟಿ ಹಣ: ಈವರೆಗೆ ಸೀಜ್ ಆದ ಮೊತ್ತ ಕೇಳಿದ್ರೆ ಬೆಚ್ಚಿ ಬೀಳುತ್ತೀರಿ!

ಬಳ್ಳಾರಿ ತಾಲೂಕಿನ ಹಲಕುಂದಿ ಬಳಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 405 ಮಿಕ್ಸರ್ ಗ್ರೈಂಡರ್‌ಗಳನ್ನು ಚೆಕ್​ಪೋಸ್ಟ್​ನಲ್ಲಿ ಚುನಾವಣಾಧಿಕಾರಿಗಳಿಂದ ಲಾರಿ ಜಪ್ತಿ ಮಾಡಲಾಗಿದೆ. 5.25 ಲಕ್ಷ ರೂ. ಮೌಲ್ಯದ ಮಿಕ್ಸರ್ ಗ್ರೈಂಡರ್‌ಗಳು ಜಪ್ತಿ ಮಾಡಲಾಗಿದೆ. ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಂತೆ ಕಂತೆ ಹಣ ಸೀಜ್

ಗದಗ; ಚೆಕ್ ಪೋಸ್ಟ್​ಗಳಲ್ಲಿ ಪೊಲೀಸ್ ಇಲಾಖೆ ಕಂತೆ ಕಂತೆ ಹಣ ಸೀಜ್ ಮಾಡುತ್ತಿದ್ದಾರೆ. ಸೂಕ್ತ ದಾಖಲೆ ಇಲ್ದೆ ಸಾಗಿಸುತ್ತಿದ್ದ ಲಕ್ಷ ಲಕ್ಷ ರೂ. ಹಣ ಮುಂಡರಗಿ ಪೊಲೀಸ್ರು ಸೀಜ್ ಮಾಡಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಚೆಕ್ ಪೋಸ್ಟ್​ನಲ್ಲಿ ಸೀಜ್ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಕಾರ್ಯಾಚರಣೆ: 2.83 ಕೋಟಿ ಮೌಲ್ಯದ ವಸ್ತುಗಳು ಪತ್ತೆ

ವ್ಯಕ್ತಿಯೊಬ್ಬ ಸಾರಿಗೆ ಬಸ್​ನಲ್ಲಿ ಹಣ ತಗೆದುಕೊಂಡು ಹೊರಟ್ಟಿದ್ದ ಹಗರಿಬೊಮ್ಮನಹಳ್ಳಿಯಿಂದ ಗದಗ ತೆರಳುತ್ತಿದ್ದ. ಮೂರು ಲಕ್ಷ ರೂ. ಹಣ ತಗೆದುಕೊಂಡು ಹೊರಟ್ಟಿದ್ದ ವೀರಯ್ಯ ಎಂಬಾತನನ್ನು ವಿಚಾರಣೆ ಮಾಡಿದ್ದಾರೆ. ಆದರೆ ಸೂಕ್ತ ದಾಖಲೆ ಇಲ್ದೆ ಇಲ್ಲದ ಕಾರಣ ಹಣ ಸೀಜ್ ಮಾಡಿದ್ದಾರೆ. ಪೊಲೀಸರು ಅಧಿಕಾರಿಗಳಿಂದ ಬಸ್ ಪರಿಶೀಲನೆ‌ ವೇಳೆ ಪತ್ತೆಯಾಗಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:57 pm, Sat, 30 March 24

ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ