AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಕ್ ಪೋಸ್ಟ್ ಸ್ಥಾಪಿಸದೇ ರೈಲ್ವೆ ಪೊಲೀಸರ ನಿರ್ಲಕ್ಷ್ಯ: ತರಾಟೆ ತೆಗೆದುಕೊಂಡ ಬಾಗಲಕೋಟೆ ಡಿಸಿ, ಎಸ್ಪಿ

ರಾಜ್ಯದಲ್ಲಿ ಲೋಕಸಭೆ ಹಿನ್ನೆಲೆ ನೀತಿ ಸಂಹಿತೆ ಜಾರಿ ಮಾಡಲಾಗಿದೆ. ಆದರೆ ಚೆಕ್ ಪೋಸ್ಟ್ ಸ್ಥಾಪಿಸದೇ ರೈಲ್ವೆ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ ಚುನಾವಣಾ ಅಧಿಕಾರಿಗಳು ರೈಲ್ವೆ ನಿಲ್ದಾಣಕ್ಕೆ ಧಿಡೀರ್ ಭೇಟಿ ನೀಡಿದ್ದು, ಚೆಕ್ ಪೋಸ್ಟ್ ಪರಿಶೀಲನೆ ಮಾಡಿದ್ದಾರೆ. ಸಬ್ ಇನ್ಸ್‌ಪೆಕ್ಟರ್ ಸಿದ್ಧಪ ಬಾರ್ಕಿ ಮೇಲೆ ಅಧಿಕಾರಿಗಳು ಗರಂ ಆಗಿದ್ದಾರೆ.

ಚೆಕ್ ಪೋಸ್ಟ್ ಸ್ಥಾಪಿಸದೇ ರೈಲ್ವೆ ಪೊಲೀಸರ ನಿರ್ಲಕ್ಷ್ಯ: ತರಾಟೆ ತೆಗೆದುಕೊಂಡ ಬಾಗಲಕೋಟೆ ಡಿಸಿ, ಎಸ್ಪಿ
ಬಾಗಲಕೋಟೆ ರೈಲ್ವೆ ನಿಲ್ದಾಣಕ್ಕೆ ಚುನಾವಣಾಧಿಕಾರಿಗಳ ದಿಢೀರ್ ಭೇಟಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Mar 30, 2024 | 8:58 PM

Share

ಬಾಗಲಕೋಟೆ, ಮಾರ್ಚ್ 30: ರಾಜ್ಯದಲ್ಲಿ ಲೋಕಸಭೆ ಹಿನ್ನೆಲೆ ನೀತಿ ಸಂಹಿತೆ ಜಾರಿ ಮಾಡಲಾಗಿದೆ. ಆದರೆ ಚೆಕ್ ಪೋಸ್ಟ್ ಸ್ಥಾಪಿಸದೇ ರೈಲ್ವೆ ಪೊಲೀಸರು (railway police) ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ ಚುನಾವಣಾ ಅಧಿಕಾರಿಗಳು ರೈಲ್ವೆ ನಿಲ್ದಾಣಕ್ಕೆ ಧಿಡೀರ್ ಭೇಟಿ ನೀಡಿದ್ದು, ಚೆಕ್ ಪೋಸ್ಟ್ ಪರಿಶೀಲನೆ ಮಾಡಿದ್ದಾರೆ. ಡಿಸಿ ಜಾನಕಿ, ಸಿಇಒ ಶಶಿಧರ್‌ ಕುರೆರ್‌, ಎಸ್‌ಪಿ ಅಮರನಾಥರೆಡ್ಡಿಯನ್ನು ರೈಲ್ವೆ ಪೊಲೀಸ್‌ ಸಬ್ ಇನ್ಸ್‌ಪೆಕ್ಟರ್‌, ಸಿಬ್ಬಂದಿಗೆ ಅಧಿಕಾರಿಗಳಿಂದ ತರಾಟೆ ತೆಗೆದುಕೊಂಡಿದ್ದಾರೆ. ಸಬ್ ಇನ್ಸ್‌ಪೆಕ್ಟರ್ ಸಿದ್ಧಪ ಬಾರ್ಕಿ ಮೇಲೆ ಅಧಿಕಾರಿಗಳು ಗರಂ ಆಗಿದ್ದಾರೆ.

ನೀವು ಭಾರತ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿದ್ದೀರಿ ನೆನಪಿಟ್ಟುಕೊಳ್ಳಿ. ಈ ತರಹ ನಿಷ್ಕಾಳಜಿ ಮಾಡಿದರೆ ಆಗಲ್ಲ. ಇಲ್ಲೇ ಇದ್ದರೂ ಮೀಟಿಂಗ್ ಕರೆದಾಗ ಯಾಕೆ ಬರಲ್ಲ ನೀವು. ಇಲ್ಲಿಯವರೆಗೆ ಒಂದಾದರೂ ಪ್ರಕರಣ ಪತ್ತೆ ಮಾಡಿದ್ದೀರಾ ನೀವು. ಚೆಕ್ ಮಾಡಲ್ಲ ಅಂದರೆ ಎಲ್ಲಿ ಪತ್ತೆ ಮಾಡುತ್ತೀರಾ ಎಂದು ಅಧಿಕಾರಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.

ದಾಖಲೆ ಇಲ್ಲದೆ ಸರ್ಕಾರಿ ಬಸ್​ನಲ್ಲಿ ಸಾಗಿಸುತ್ತಿದ್ದ 2 ಲಕ್ಷ ರೂ. ಹಣ ಜಪ್ತಿ

ದಾಖಲೆ ಇಲ್ಲದೆ ಸರ್ಕಾರಿ ಬಸ್​ನಲ್ಲಿ ಸಾಗಿಸುತ್ತಿದ್ದ 2 ಲಕ್ಷ ರೂ. ಹಣವನ್ನು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಸರ್ಕಾರಿ ಬಸ್​ನಲ್ಲಿ ಶಿವಾನಂದ ಬುರುದ್ ಎಂಬಾತ 2 ಲಕ್ಷ ರೂ. ನಗದು ಸಾಗಿಸುತ್ತಿದ್ದ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: Lok Sabha Elections: ಚುನಾವಣಾ ಕಣದಲ್ಲಿ ಕೋಟಿ ಕೋಟಿ ಹಣ: ಈವರೆಗೆ ಸೀಜ್ ಆದ ಮೊತ್ತ ಕೇಳಿದ್ರೆ ಬೆಚ್ಚಿ ಬೀಳುತ್ತೀರಿ!

ಬಳ್ಳಾರಿ ತಾಲೂಕಿನ ಹಲಕುಂದಿ ಬಳಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 405 ಮಿಕ್ಸರ್ ಗ್ರೈಂಡರ್‌ಗಳನ್ನು ಚೆಕ್​ಪೋಸ್ಟ್​ನಲ್ಲಿ ಚುನಾವಣಾಧಿಕಾರಿಗಳಿಂದ ಲಾರಿ ಜಪ್ತಿ ಮಾಡಲಾಗಿದೆ. 5.25 ಲಕ್ಷ ರೂ. ಮೌಲ್ಯದ ಮಿಕ್ಸರ್ ಗ್ರೈಂಡರ್‌ಗಳು ಜಪ್ತಿ ಮಾಡಲಾಗಿದೆ. ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಂತೆ ಕಂತೆ ಹಣ ಸೀಜ್

ಗದಗ; ಚೆಕ್ ಪೋಸ್ಟ್​ಗಳಲ್ಲಿ ಪೊಲೀಸ್ ಇಲಾಖೆ ಕಂತೆ ಕಂತೆ ಹಣ ಸೀಜ್ ಮಾಡುತ್ತಿದ್ದಾರೆ. ಸೂಕ್ತ ದಾಖಲೆ ಇಲ್ದೆ ಸಾಗಿಸುತ್ತಿದ್ದ ಲಕ್ಷ ಲಕ್ಷ ರೂ. ಹಣ ಮುಂಡರಗಿ ಪೊಲೀಸ್ರು ಸೀಜ್ ಮಾಡಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಚೆಕ್ ಪೋಸ್ಟ್​ನಲ್ಲಿ ಸೀಜ್ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಕಾರ್ಯಾಚರಣೆ: 2.83 ಕೋಟಿ ಮೌಲ್ಯದ ವಸ್ತುಗಳು ಪತ್ತೆ

ವ್ಯಕ್ತಿಯೊಬ್ಬ ಸಾರಿಗೆ ಬಸ್​ನಲ್ಲಿ ಹಣ ತಗೆದುಕೊಂಡು ಹೊರಟ್ಟಿದ್ದ ಹಗರಿಬೊಮ್ಮನಹಳ್ಳಿಯಿಂದ ಗದಗ ತೆರಳುತ್ತಿದ್ದ. ಮೂರು ಲಕ್ಷ ರೂ. ಹಣ ತಗೆದುಕೊಂಡು ಹೊರಟ್ಟಿದ್ದ ವೀರಯ್ಯ ಎಂಬಾತನನ್ನು ವಿಚಾರಣೆ ಮಾಡಿದ್ದಾರೆ. ಆದರೆ ಸೂಕ್ತ ದಾಖಲೆ ಇಲ್ದೆ ಇಲ್ಲದ ಕಾರಣ ಹಣ ಸೀಜ್ ಮಾಡಿದ್ದಾರೆ. ಪೊಲೀಸರು ಅಧಿಕಾರಿಗಳಿಂದ ಬಸ್ ಪರಿಶೀಲನೆ‌ ವೇಳೆ ಪತ್ತೆಯಾಗಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:57 pm, Sat, 30 March 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ