ವಿಸಿ ನಾಲೆ ಕಾರು ದುರಂತ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದ ಮಾಜಿ ಸಚಿವ ಸಿಎಸ್ ಪುಟ್ಟರಾಜು

ಅರುಣ್​ ಕುಮಾರ್​ ಬೆಳ್ಳಿ

Updated on: Nov 08, 2023 | 11:56 AM

ಅಪಾಯಕಾರಿ ತಿರುವುಗಳಿರುವ ರಸ್ತೆಯ ಭಾಗಗಳಲ್ಲಿ ತಡೆಗೋಡೆ, ಬ್ಯಾರಿಕೇಡ್ ಗಳನ್ನು ನಿರ್ಮಿಸದಿರುವುದು ಮತ್ತು ಸೂಚನಾಫಲಕಗಳನ್ನು ನೆಡದಿರುವುದೇ ಕಾರಣ ಎಂದು ಪುಟ್ಟರಾಜು ಹೇಳಿದರು. ತಾನು ಜಿಲ್ಲಾಧಿಕಾರಿಯೊಂದಿಗೆ ಮಾತಾಡಿರುವುದಾಗಿ ಹೇಳಿದ ಮಾಜಿ ಸಚಿವರು ಮೃತರ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರವಾಗಿ ತಲಾ 10 ಲಕ್ಷ ರೂ. ಪರಿಹಾರ ಧನ ಕೂಡಲೇ ಬಿಡುಗಡೆ ಮಾಡುವಂತೆ ತಿಳಿಸಿರುವುದಾಗಿ ಹೇಳಿದರು.

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬನಘಟ್ಟ (Banaghatta) ಬಳಿ ಕಾರೊಂದು ವಿಸಿ ನಾಲೆಗೆ (VC Nale) ಉರುಳಿ ಐವರು ಜಲಸಮಾಧಿಯಾಗಿರುವ ಘೋರ ದುರಂತ ಕನ್ನಡಿಗರನ್ನು ಬೆಚ್ಚಿ ಬೀಳಿಸಿದೆ. ಸ್ಥಳಕ್ಕೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮೇಲುಕೋಟೆ ಮಾಜಿ ಶಾಸಕ ಸಿಎಸ್ ಪುಟ್ಟರಾಜು (CS Puttaraju) ದುರಂತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ, ಈ ನಿಟ್ಟಿನಲ್ಲಿ ಅವರು ಮುಂಜಾಗ್ರತೆಯ ಕ್ರಮಗಳನ್ನು ತೆಗೆದಿಕೊಳ್ಳದಿದ್ದರೆ, ಅವರ ವಿರುದ್ಧ ಕೊಲೆ ಪ್ರಕರಣ ದಾಖಲೆ ಮಾಡಬೇಕಾಗುತ್ತದೆ ಎಂದು ಹೇಳಿದರು. ಅಪಘಾತಕ್ಕೆ ವಿಸಿ ನಾಲೆ ಕಾರಣವಲ್ಲ, ಅಪಾಯಕಾರಿ ತಿರುವುಗಳಿರುವ ರಸ್ತೆಯ ಭಾಗಗಳಲ್ಲಿ ತಡೆಗೋಡೆ, ಬ್ಯಾರಿಕೇಡ್ ಗಳನ್ನು ನಿರ್ಮಿಸದಿರುವುದು ಮತ್ತು ಸೂಚನಾಫಲಕಗಳನ್ನು ನೆಡದಿರುವುದೇ ಕಾರಣ ಎಂದು ಪುಟ್ಟರಾಜು ಹೇಳಿದರು. ತಾನು ಜಿಲ್ಲಾಧಿಕಾರಿಯೊಂದಿಗೆ ಮಾತಾಡಿರುವುದಾಗಿ ಹೇಳಿದ ಮಾಜಿ ಸಚಿವರು ಮೃತರ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರವಾಗಿ ತಲಾ 10 ಲಕ್ಷ ರೂ. ಪರಿಹಾರ ಧನ ಕೂಡಲೇ ಬಿಡುಗಡೆ ಮಾಡುವಂತೆ ತಿಳಿಸಿರುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.