AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ.. ಧೂಳು ತಿನ್ನುತ್ತಾ, ಗೋದಾಮಿನಲ್ಲೇ ಬಿದ್ದಿವೆ ಅಂಗವಿಕಲರಿಗೆ ಸೇರಬೇಕಾದ ಬೈಕ್‌ಗಳು

ಸರ್ಕಾರ ಅಲ್ಲಿನ ಅಂಗವಿಕಲರಿಗೆ ನೆರವಾಗಲು ತ್ರಿಚಕ್ರ ವಾಹನ ಖರೀದಿಗೆ ಕೋಟಿಗಟ್ಟಲೇ ಹಣ ನೀಡಿತ್ತು. ಅಲ್ಲಿನ ಅಧಿಕಾರಿಗಳು ವಿಕಲಚೇತನರಿಗೆ ನೀಡಲು ನೂರಾರು ಬೈಕ್‌ಗಳನ್ನು ಖರೀದಿಸಿದ್ದಾರೆ. ಆದ್ರೆ ಅಂಗವಿಕಲರಿಗೆ ಸೇರಬೇಕಿದ್ದ ಬೈಕ್‌ಗಳು ಈಗ ಯಾವ ಸ್ಥಿತಿಯಲ್ಲಿವೆ ಗೊತ್ತಾ?

ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ.. ಧೂಳು ತಿನ್ನುತ್ತಾ, ಗೋದಾಮಿನಲ್ಲೇ ಬಿದ್ದಿವೆ ಅಂಗವಿಕಲರಿಗೆ ಸೇರಬೇಕಾದ ಬೈಕ್‌ಗಳು
ಧೂಳು ತಿನ್ನುತ್ತಾ, ಗೋದಾಮಿನಲ್ಲೇ ಬಿದ್ದಿರುವ ಬೈಕ್‌ಗಳು
ಆಯೇಷಾ ಬಾನು
|

Updated on:Jan 11, 2021 | 8:54 AM

Share

ರಾಯಚೂರು: ಜಿಲ್ಲಾ ಪಂಚಾಯತ್ ಕಚೇರಿಯ ಗೋದಾಮಿನಲ್ಲಿ ಅಂಗವಿಕಲರಿಗಾಗಿ ಖರೀದಿಸಿರುವ ಬೈಕ್‌ಗಳನ್ನೆಲ್ಲಾ ಇರಿಸಲಾಗಿದೆ. ಸುಮಾರು 2 ಕೋಟಿಗೂ ಅಧಿಕ ಹಣ ಖರ್ಚು ಮಾಡಿ ಬೈಕ್ ಖರೀದಿಸಿ 8 ತಿಂಗಳಾಗಿದೆ. ಆದ್ರೆ ಇದುವರೆಗೂ ರಾಯಚೂರು ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯತಿ ಕಚೇರಿಗಳಿಗೆ ಸರಬರಾಜು ಆಗಿಲ್ಲ.

ಸುಮಾರು 179 ಗ್ರಾಮ ಪಂಚಾಯತಿ ಕಚೇರಿಗಳ ವ್ಯಾಪ್ತಿಯಲ್ಲಿರುವ ವಿಕಲಚೇತನರು ತ್ರಿಚಕ್ರವಾಹನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ನಿತ್ಯವೂ ಕಚೇರಿಗೆ ಅಲೆದಾಡ್ತಿದ್ದಾರೆ. ಆದ್ರೆ ಯಾರಿಗೂ ತ್ರಿಚಕ್ರವಾಹನ ನೀಡಿಲ್ಲ. ಜಿಲ್ಲಾ ಪಂಚಾಯತ್ ಗೋದಾಮಿನಲ್ಲೆ ಆ ಬೈಕ್​ಗಳು ಅನಾಥವಾಗಿ ಬಿದ್ದಿವೆ. ಈ ಬಗ್ಗೆ ಜಿಲ್ಲಾ ಪಂಚಾಯತ್ ಸಿಇಒ ಅವನರನ್ನ ಕೇಳಿದ್ರೆ, ಗ್ರಾಮ ಪಂಚಾಯತ್ ಚುನಾವಣೆ ನೀತಿ ಸಂಹಿತೆ ಜಾರಿ ಇದ್ದಿದ್ದರಿಂದ ಬೈಕಗಳನ್ನ ವಿತರಣೆ ಮಾಡಲಾಗಿಲ್ಲ ಅಂತೆಲ್ಲಾ ಸಬೂಬು ಹೇಳ್ತಾರೆ.

ಒಟ್ನಲ್ಲಿ ತ್ರಿಚಕ್ರವಾಹನಕ್ಕಾಗಿ ಅರ್ಜಿ ಸಲ್ಲಿಸಿದ ಅಂಗವಿಕಲರಿಗೆ ಬೈಕಗಳನ್ನ ವಿತರಣೆ ಮಾಡದೇ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಬೇಜವಾಬ್ದಾರಿ ತೋರಿಸ್ತಿರೋದು ವಿಕಲಚೇತನರಲ್ಲಿ ಆಕ್ರೊಶ ಮೂಡಿಸಿದೆ. ಇನ್ನಾದ್ರೂ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಎಚ್ಚೆತ್ತುಕೊಂಡು ಗೋದಾಮಿನಲ್ಲಿ ತುಕ್ಕು ಹಿಡಿಯುತ್ತಿರುವ ಬೈಕಗಳನ್ನ ಅಂಗವಿಕಲರಿಗೆ ವಿತರಣೆ ಮಾಡಲು ಅಗತ್ಯ ಕ್ರಮಕೈಗೊಳ್ತಾರಾ ಕಾದು ನೋಡಬೇಕಷ್ಟೆ.

Published On - 8:51 am, Mon, 11 January 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ