AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಖಾಸಗಿ ಶಾಲೆ ಮಾಲೀಕ ಪೊಲೀಸ್​ ವಶಕ್ಕೆ

ಬೆಂಗಳೂರಿನ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಶಾಲೆ ಮಾಲೀಕ ನಾಲ್ಕು ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದಿದೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಖಾಸಗಿ ಶಾಲೆ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಖಾಸಗಿ ಶಾಲೆ ಮಾಲೀಕ ಪೊಲೀಸ್​ ವಶಕ್ಕೆ
ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಖಾಸಗಿ ಶಾಲೆ ಮಾಲೀಕ ಪೊಲೀಸ್​ ವಶಕ್ಕೆ
ಬಿ ಮೂರ್ತಿ, ನೆಲಮಂಗಲ
| Edited By: |

Updated on:Nov 14, 2024 | 5:45 PM

Share

ನೆಲಮಂಗಲ, ನವೆಂಬರ್ 14: ವಿದ್ಯಾರ್ಥಿನಿಯರ (students) ಜೊತೆ ಖಾಸಗಿ ಶಾಲೆ ಮಾಲೀಕ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದಿದೆ. ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಘಟನೆ ನಡೆದಿದ್ದು, ಶಾಲೆಯ ಮಾಲೀಕ ಈರತ್ತಯ್ಯ(50)ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಲ್ವರು ವಿದ್ಯಾರ್ಥಿನಿಯರನ್ನು ಶಾಲೆಯ ಕೊಠಡಿಗೆ ಕರೆಸಿದ್ದ ಮಾಲೀಕ, ಈ ವೇಳೆ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಪೊಲೀಸರು ಮತ್ತು ಬೆಂಗಳೂರು ಉತ್ತರ ತಾಲೂಕಿನ ಬಿಇಒ ತಾರನಾಥ್ ಅವರಿಗೆ​ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಸದ್ಯ ಖಾಸಗಿ ಶಾಲೆ ಬಳಿ ಪೋಷಕರು ಮತ್ತು ವಿದ್ಯಾರ್ಥಿಗಳಿಂದ ಪ್ರತಿಭಟನೆ ಮಾಡಲಾಗಿದೆ.

ಕೆಎಸ್​ಆರ್ ಟಿಸಿ ಬಸ್​ನಲ್ಲಿ ಕಂಡಕ್ಟರ್ ಅಸಭ್ಯ ವರ್ತನೆ ಆರೋಪ

ರಾಯಚೂರು: ರಾಯಚೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಮಹಿಳೆಗೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಹೌದು.. ಇತ್ತೀಚೆಗೆ ರಾತ್ರಿ ಕೆಎ-36,ಎಫ್-1532 ನಂಬರ್​ನ ಬಸ್​ನಲ್ಲಿ ಮಹಿಳೆಯೋರ್ವರು ರಾಯಚೂರು ಟು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ತಡ ರಾತ್ರಿ ಬಸ್​ ಒಳಗಿನ ಲೈಟ್ ಆಫ್ ಆದಾಗ ರಾಯಚೂರು ನಗರ ಘಟಕದ ಕಂಡಕ್ಟರ್ ಲಕ್ಷ್ಮಿಕಾಂತ್ ರೆಡ್ಡಿ ಮಹಿಳೆಯ ಖಾಸಗಿ ಅಂಗಾಂಗಗಳನ್ನ ಮುಟ್ಟಿ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಇದನ್ನೂ ಓದಿ: ದಾವಣಗೆರೆ: ಪತ್ನಿ ಇದ್ರು‌‌ ಮತ್ತೊಬ್ಬಳೊಂದಿಗೆ ಚಕ್ಕಂದ; ಕಿಲಾಡಿ ಪೊಲೀಸ್ ಕಾನ್ಸ್​ಸ್ಟೇಬಲ್ ಅಮಾನತು

ಸಂತ್ರಸ್ತ ಮಹಿಳೆ ಡ್ರೈವರ್ ಸೀಟ್ ಹಿಂಬದಿಯಲ್ಲಿ ಕುಳಿತು ಪ್ರಯಾಣ ಮಾಡುತ್ತಿದ್ದರು. ಡ್ರೈವರ್ ಮಲಗೋಕೆ ಇರುವ ಸೀಟ್​ನಲ್ಲಿ ಕಂಡಕ್ಟರ್ ಮಲಗಿದ್ದ. ಪಕ್ಕದಲ್ಲಿದ್ದ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಕಿರುಕುಳ ನೀಡಿದ್ದಾನೆ ಅಂತ ಸಂತ್ರಸ್ತ ಮಹಿಳೆ ಆರೋಪಿಸಿದ್ದರು. ಫ್ರೀ ಟಿಕೆಟ್ ಹರಿದು ತನ್ನ ಜೇಬ್​ನಲ್ಲಿ ಇಟ್ಟುಕೊಂಡು ಟಿಕೆಟ್ ಬೇಕಾದರೆ ಲೈಂಗಿಕವಾಗಿ ಸಹಕರಿಸು, ಇಲ್ಲ ಫೈನ್ ಬೀಳುತ್ತೆ ಎಂದು ಹೇಳಿ ಪಟ್ಟು ಹಿಡಿದಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:43 pm, Thu, 14 November 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು