Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಯರ ಅಂಗಾಂಗಗಳನ್ನು ಮುಟ್ಟಿ ವಿಕೃತಿ ಮೆರೆಯುತ್ತಿದ್ದ ಶಾಲಾ ಮಾಲೀಕ ಅರೆಸ್ಟ್

ನೆಲಮಂಗಲದ ಶಾಲೆಯೊಂದರ ಮಾಲೀಕರೊಬ್ಬರ ಕಾಮಚೇಷ್ಟೆಗಳು ಬಗೆದಷ್ಟು ಹೊರಬರುತ್ತಿವೆ. ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ನಡೆದುಕೊಂಡು ತೃಪ್ತಿಪಡುತ್ತಿದ್ದ ಶಾಲೆ ಮಾಲೀಕ ಈರತ್ತಯ್ಯ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ವಿದ್ಯಾರ್ಥಿನಿಯರ ಅಂಗಾಂಗಗಳನ್ನು ಮುಟ್ಟಿ ವಿಕೃತಿ ಮೆರೆಯುತ್ತಿದ್ದ ಶಾಲಾ ಮಾಲೀಕ ಅರೆಸ್ಟ್
ಈರತ್ತಯ್ಯ
Follow us
ಬಿ ಮೂರ್ತಿ, ನೆಲಮಂಗಲ
| Updated By: Ganapathi Sharma

Updated on:Nov 16, 2024 | 10:52 AM

ಬೆಂಗಳೂರು, (ನವೆಂಬರ್ 15): ನೆಲಮಂಗಲದ ಶಾಲೆಯೊಂದರ ಮಾಲೀಕ ಈರತ್ತಯ್ಯನ ಕಾಮಚೇಷ್ಟೆ ಬಟಾಬಯಲಾಗಿದೆ. ವಿದ್ಯಾರ್ಥಿನಿಯರನ್ನು ತನ್ನ ಕ್ಯಾಬಿನ್​ಗೆ ಕರೆಸಿಕೊಂಡು ಅವರ ಅಂಗಾಂಗಗಳನ್ನು ಮುಟ್ಟಿ, ವರ್ಣಿಸಿ ವಿಕೃತಿ ಮೆರೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಹೆಣ್ಣು ಮಕ್ಕಳ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಸುತ್ತಲೇ ಇದ್ದ ಎಂದು ನೊಂದ ವಿದ್ಯಾರ್ಥಿ ದೂರು ದಾಖಲಿಸಿದ್ದು, ದೂರಿನಲ್ಲಿ ಕಾಮಚೇಷ್ಟೆಯ ಬಗ್ಗೆ ಎಳೆ ಎಳೆಯಾಗಿ ವಿವರಿಸಿದ್ದಾರೆ. ಸದ್ಯ ಈ ದೂರಿನ ಮೇರೆಗೆ ಮಾದನಾಯಕನಹಳ್ಳಿಯ ಪೊಲೀಸರು. ಶಾಲಾ ಮಾಲೀಕ ಈರತ್ತಯ್ಯನನ್ನು ಪೋಕ್ಸೋ ಕಾಯ್ದೆ ಅಡಿಯಲ್ಲಿ ‌ಬಂಧಿಸಿ ಜೈಲಿಗಟ್ಟಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ತನ್ನ ಕ್ಯಾಬಿನ್ ಗೆ ವಿದ್ಯಾರ್ಥಿನಿಯರನ್ನು ಕರೆಯಿಸಿಕೊಂಡು ಅವರ ಅಂಗಾಂಗಗಳನ್ನು ಮುಟ್ಟಿ ವಿಕೃತ ಆನಂದಪಡುತ್ತಿದ್ದ. ಅವರ ಅಂಗಾಂಗಗಳನ್ನು ಹಣ್ಣುಗಳಿಗೆ ಹೋಲಿಕೆ ಮಾಡಿ ವರ್ಣನೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಇನ್ನು ವಿದ್ಯಾರ್ಥಿನಿಯರು ಕೂಡ ತಮಗಾದ ಕಿರುಕುಳ ಬಗ್ಗೆ ಎಫ್​ಐಆರ್​ನಲ್ಲಿ ವಿವರಿಸಿದ್ದಾರೆ.

ಶಾಲಾ ಮಾಲೀಕನ ಕಾಮಚೇಷ್ಟೆ ವಿವರಿಸಿದ ವಿದ್ಯಾರ್ಥಿನಿ

ನಮ್ಮ ಗ್ರಾಮದಲ್ಲಿರುವ ಸ್ಕೂಲ್​ನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿರುತ್ತೇನೆ. ಈಗ್ಗೆ ಕಳೆದ 4 ತಿಂಗಳಿನಿಂದ ನಮ್ಮ ಶಾಲೆಯ ಸೆಕ್ರೆಟರಿಯಾದ ಈರತ್ತಯ್ಯರವರು ನನ್ನನ್ನು ಒಬ್ಬಳನ್ನೇ ಅವರ ಕ್ಯಾಬಿನ್ ಗೆ ಕರೆಸಿಕೊಂಡು ನನ್ನ ತುಟಿಗೆ ಮುತ್ತನ್ನು ಕೊಟ್ಟರು, ಅವರು ನನ್ನ ಬಳಿ ಪೀರಿಯಡ್ಸ್ ಮತ್ತು ನನ್ನ ದೇಹದ ಅಂಗಾಂಗಗಳ ಬಗ್ಗೆ ಅಸಹ್ಯವಾಗಿ ಮಾತನಾಡಿದರು. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ನಿನ್ನ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದು ಹೆದರಿಸಿದ್ದರಿಂದ ಎಲ್ಲವನ್ನು ಸಹಿಸಿಕೊಂಡಿದ್ದೆ ಎಂದು ವಿದ್ಯಾರ್ಥಿನಿಯೊಬ್ಬರು ಹೇಳಿಕೊಂಡಿದ್ದಾರೆ.

ಸುಮಾರು 2 ತಿಂಗಳ ಹಿಂದೆ ನನ್ನನ್ನು ಅವರ ಕ್ಯಾಬಿನ್ ಗೆ ಕರೆಸಿಕೊಂಡು ನಿನಗೊಂದು ಉದಾಹರಣೆ ಕೂಡಲೇ? ಎಂದು ಕೇಳಿದರು. ನಾನು ಹೇಳಿ ಎಂದೆ, ಅದಕ್ಕೆ ಈರತ್ತಯ್ಯರವರು ನನಗೆ ಆಸೆಯಾಗಿ ನಿನ್ನ ಕರೆದರೆ ಬರುತ್ತೀಯಾ ಎಂದು ಕೇಳಿದರು. ಅಷ್ಟೇ ಅಲ್ಲದೇ ನಿನಗೆ ಅಪ್ಪನ ಪ್ರೀತಿ ಬೇಕಾ ಇಲ್ಲ ನನ್ನ ಪ್ರೀತಿ ಬೇಕಾ ಎಂದು ಕೇಳಿದ್ದಾರೆ. ಆಗ ನಾನು ಭಯಪಟ್ಟು ಏನನ್ನೂ ಹೇಳದೇ ಮಾನಸಿಕವಾಗಿ ಕುಗ್ಗಿ ಹೋದೆ. ಆಗಾಗ ಸ್ಪೆಷಲ್ ಕ್ಲಾಸ್ ಭಾನುವಾರದ ವೇಳೆ ಕ್ಯಾಬಿನ್​​ಗೆ ಕರೆದು ಮತ್ತು ಬಸ್ ನಲ್ಲಿ ಹೋಗುವಾಗ ಎಲ್ಲಾ ಮಕ್ಕಳು ಇಳಿದ ಮೇಲೆ ನನ್ನನ್ನು ಲಾಸ್ಟ್ ಸೀಟಿಗೆ ಕರೆದುಕೊಂಡು ಹೋಗಿ ಮುತ್ತು ಕೊಡುವುದು ಮತ್ತು ಅಂಗಾಂಗಗಳನ್ನು ಅಸಭ್ಯವಾಗಿ ಮುಟ್ಟುವುದು ಮಾಡುತ್ತಿದ್ದರು. ಇವರು ನಮ್ಮ ಶಾಲೆಯ ಮಾಲೀಕರು ಎಂದು ಅವರಿಗೆ ಭಯಪಟ್ಟು ಸುಮ್ಮನಾಗಿದ್ದೆ. ಈ ರೀತಿ ಕಿರುಕುಳ ಸಹಿಸಿಕೊಂಡು ಸಾಕಾಗಿತ್ತು ಎಂದು ವಿದ್ಯಾರ್ಥಿನಿ ಅಳಲು ತೋಡಿಕೊಂಡಿದ್ದಾಳೆ.

ಇಷ್ಟೇ ಅಲ್ಲದೆ ಈರಯ್ಯ ಹೆಣ್ಣು ಮಕ್ಕಳ ಎದೆ ಭಾಗ ಮುಟ್ಟಿ ಹಣ್ಣುಗಳಿಗೆ ಹೋಲಿಕೆ ಮಾಡಿ ವರ್ಣನೆ ಮಾಡುತ್ತಿದ್ದನಂತೆ. ಅಸಭ್ಯ ವರ್ತನೆ ಬಗ್ಗೆ ಶಿಕ್ಷಕರು ಶಿಕ್ಷಣ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಕೂಡಲೇ ಮಾದನಾಯಕನಹಳ್ಳಿಯ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಾಥಮಿಕ ಹಂತದ ತನಿಖೆ ನಡೆಸಿ ಅರೋಪಿಯನ್ನು ಜೈಲಿಗೆ ಕಳುಹಿಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:23 pm, Fri, 15 November 24

ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ: ಮೋದಿ
ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ: ಮೋದಿ
ಕುಡಿದ ಮತ್ತಿನಲ್ಲಿ ಹೈಟೆನ್ಷನ್ ವಿದ್ಯುತ್​ ಕಂಬ ಏರಿದ ಯುವಕ!
ಕುಡಿದ ಮತ್ತಿನಲ್ಲಿ ಹೈಟೆನ್ಷನ್ ವಿದ್ಯುತ್​ ಕಂಬ ಏರಿದ ಯುವಕ!
ನಿಮ್ಮಪ್ಪಂದಾ ಪದ ಹುಟ್ಟುಹಾಕಿದ್ದು ಬಿಜೆಪಿ ನಾಯಕರು: ಪ್ರದೀಪ್ ಈಶ್ವರ್
ನಿಮ್ಮಪ್ಪಂದಾ ಪದ ಹುಟ್ಟುಹಾಕಿದ್ದು ಬಿಜೆಪಿ ನಾಯಕರು: ಪ್ರದೀಪ್ ಈಶ್ವರ್