AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nelyadi Accident: ಹೊತ್ತಿ ಉರಿದ ಬಸ್​ನಲ್ಲಿ ನಟಿ ನೀಮಾ ರೇ! ನೆಲ್ಯಾಡಿ ಭೀಕರ ಅಪಘಾತದಲ್ಲಿ ತುಳು ಕಲಾವಿದೆ ಸೇಫ್​ ಆಗಿದ್ದು ಹೇಗೆ?

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಬಳಿ ಬುಧವಾರ (ಮಾ.24) ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಸುದ್ದಿ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಈ ಅಪಘಾತದಲ್ಲಿ ತುಳು ನಟಿ ಬಚಾವ್​ ಆಗಿದ್ದಾರೆ.

Nelyadi Accident: ಹೊತ್ತಿ ಉರಿದ ಬಸ್​ನಲ್ಲಿ ನಟಿ ನೀಮಾ ರೇ! ನೆಲ್ಯಾಡಿ ಭೀಕರ ಅಪಘಾತದಲ್ಲಿ ತುಳು ಕಲಾವಿದೆ ಸೇಫ್​ ಆಗಿದ್ದು ಹೇಗೆ?
ನೀಮಾ ರೇ - ನೆಲ್ಯಾಡಿ ಅಪಘಾತ
ಮದನ್​ ಕುಮಾರ್​
|

Updated on: Mar 25, 2021 | 11:09 AM

Share

ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ನೆಲ್ಯಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ಅಪಘಾತ ಭೀಕರ ಅಪಘಾತ ಸಂಭವಿಸಿದೆ. ಬುಧವಾರ ರಾತ್ರಿ ನಡೆದ ಈ ದುರ್ಘಟನೆಯಲ್ಲಿ ಲಾರಿ ಮತ್ತು ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ನಿಮಿಷಗಳಲ್ಲಿ ಎರಡೂ ವಾಹನಗಳು ಸುಟ್ಟು ಭಸ್ಮವಾಗಿವೆ. ಲಾರಿ ಚಾಲಕ ಸಜೀವ ದಹನವಾಗಿದ್ದು, ಬಸ್​ನಲ್ಲಿದ್ದ ಪ್ರಯಾಣಿಸಕರು ಸೇಫ್​ ಆಗಿದ್ದಾರೆ. ಇದೇ ಬಸ್​ನಲ್ಲಿ ತುಳು ನಟಿ ನೀಮಾ ರೇ ಕೂಡ ಪ್ರಯಾಣ ಮಾಡುತ್ತಿದ್ದರು!

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಗೂಡ್ಸ್ ಲಾರಿ ನಡುವೆ ಡಿಕ್ಕಿ ಸಂಭವಿಸಿತು. ಪರಿಣಾಮ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿತು. ಬಸ್​ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅವರ ಪೈಕಿ ತುಳು ಚಿತ್ರರಂಗದ ಖ್ಯಾತ ನಟಿ ನೀಮಾ ರೇ ಕೂಡ ಇದ್ದರು. ಅದೃಷ್ಟವಶಾತ್​ ಅವರೆಲ್ಲರೂ ಪಾರಾಗಿದ್ದಾರೆ.

ಡಿಕ್ಕಿ ಹೊಡೆದ ತಕ್ಷಣ ಬಸ್​ನಲ್ಲಿ ಹೊಗೆ ಆವರಿಸಲು ಆರಂಭ ಆಯಿತು. ಅದರಿಂದ ಎಲ್ಲರೂ ಗಾಬರಿಗೊಂಡಿದ್ದಾರೆ. ಹೇಗೋ ಸಾಹಸಪಟ್ಟು ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ. ಬೆಂಕಿ ಆವರಿಸಿಕೊಳ್ಳುವ ಮುನ್ನವೇ ಎಲ್ಲರೂ ಬಸ್​ನಿಂದ ಹೊರಬಂದಿದ್ದಾರೆ. ಸ್ವಲ್ಪವೇ ತಡವಾಗಿದ್ದರೂ ಎಲ್ಲರೂ ಸಜೀವದಹನ ಆಗಬೇಕಾಗಿತ್ತು! ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

‘ಬಾಗಿಲು ತೆಗೆಯುವುದು ತುಂಬ ಕಷ್ಟ ಆಗಿತ್ತು. ಎಲ್ಲವೂ ಜಾಮ್​ ಆಗಿತ್ತು. ತುಂಬ ಕಷ್ಟಪಟ್ಟು ಹೊರಬಂದೆವು. ನಾನು ಈಗ ಚೆನ್ನಾಗಿದ್ದೇನೆ. ಎಲ್ಲ ಪ್ರಯಾಣಿಕರು ಸೇಫ್​ ಆಗಿದ್ದೇವೆ. ಕೆಲವರಿಗೆ ಗಾಯಗಳಾಗಿವೆ’ ಎಂದು ಮಾಧ್ಯಮಗಳಿಗೆ ನೀಮಾ ರೇ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ಘೋಷಣೆಯಾದ 67ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಯಲ್ಲಿ ‘ಅತ್ಯುತ್ತಮ ತುಳು ಸಿನಿಮಾ’ ಎಂಬ ಗೌರವಕ್ಕೆ ಪಾತ್ರವಾದ ‘ಪಿಂಗಾರ’ ಸಿನಿಮಾದಲ್ಲಿ ನೀಮಾ ರೈ ನಟಿಸಿದ್ದಾರೆ.

ಇದನ್ನೂ ಓದಿ: ಕಳೆದೊಂದು ವರ್ಷದಲ್ಲಿ ಕೊರೊನಾಕ್ಕಿಂತ ರಸ್ತೆ ಅಪಘಾತಕ್ಕೆ ಬಲಿಯಾದವರೇ ಹೆಚ್ಚು: ನಿತಿನ್ ಗಡ್ಕರಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ