AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nelyadi Accident: ಹೊತ್ತಿ ಉರಿದ ಬಸ್​ನಲ್ಲಿ ನಟಿ ನೀಮಾ ರೇ! ನೆಲ್ಯಾಡಿ ಭೀಕರ ಅಪಘಾತದಲ್ಲಿ ತುಳು ಕಲಾವಿದೆ ಸೇಫ್​ ಆಗಿದ್ದು ಹೇಗೆ?

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಬಳಿ ಬುಧವಾರ (ಮಾ.24) ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಸುದ್ದಿ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಈ ಅಪಘಾತದಲ್ಲಿ ತುಳು ನಟಿ ಬಚಾವ್​ ಆಗಿದ್ದಾರೆ.

Nelyadi Accident: ಹೊತ್ತಿ ಉರಿದ ಬಸ್​ನಲ್ಲಿ ನಟಿ ನೀಮಾ ರೇ! ನೆಲ್ಯಾಡಿ ಭೀಕರ ಅಪಘಾತದಲ್ಲಿ ತುಳು ಕಲಾವಿದೆ ಸೇಫ್​ ಆಗಿದ್ದು ಹೇಗೆ?
ನೀಮಾ ರೇ - ನೆಲ್ಯಾಡಿ ಅಪಘಾತ
ಮದನ್​ ಕುಮಾರ್​
|

Updated on: Mar 25, 2021 | 11:09 AM

Share

ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ನೆಲ್ಯಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ಅಪಘಾತ ಭೀಕರ ಅಪಘಾತ ಸಂಭವಿಸಿದೆ. ಬುಧವಾರ ರಾತ್ರಿ ನಡೆದ ಈ ದುರ್ಘಟನೆಯಲ್ಲಿ ಲಾರಿ ಮತ್ತು ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ನಿಮಿಷಗಳಲ್ಲಿ ಎರಡೂ ವಾಹನಗಳು ಸುಟ್ಟು ಭಸ್ಮವಾಗಿವೆ. ಲಾರಿ ಚಾಲಕ ಸಜೀವ ದಹನವಾಗಿದ್ದು, ಬಸ್​ನಲ್ಲಿದ್ದ ಪ್ರಯಾಣಿಸಕರು ಸೇಫ್​ ಆಗಿದ್ದಾರೆ. ಇದೇ ಬಸ್​ನಲ್ಲಿ ತುಳು ನಟಿ ನೀಮಾ ರೇ ಕೂಡ ಪ್ರಯಾಣ ಮಾಡುತ್ತಿದ್ದರು!

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಗೂಡ್ಸ್ ಲಾರಿ ನಡುವೆ ಡಿಕ್ಕಿ ಸಂಭವಿಸಿತು. ಪರಿಣಾಮ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿತು. ಬಸ್​ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅವರ ಪೈಕಿ ತುಳು ಚಿತ್ರರಂಗದ ಖ್ಯಾತ ನಟಿ ನೀಮಾ ರೇ ಕೂಡ ಇದ್ದರು. ಅದೃಷ್ಟವಶಾತ್​ ಅವರೆಲ್ಲರೂ ಪಾರಾಗಿದ್ದಾರೆ.

ಡಿಕ್ಕಿ ಹೊಡೆದ ತಕ್ಷಣ ಬಸ್​ನಲ್ಲಿ ಹೊಗೆ ಆವರಿಸಲು ಆರಂಭ ಆಯಿತು. ಅದರಿಂದ ಎಲ್ಲರೂ ಗಾಬರಿಗೊಂಡಿದ್ದಾರೆ. ಹೇಗೋ ಸಾಹಸಪಟ್ಟು ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ. ಬೆಂಕಿ ಆವರಿಸಿಕೊಳ್ಳುವ ಮುನ್ನವೇ ಎಲ್ಲರೂ ಬಸ್​ನಿಂದ ಹೊರಬಂದಿದ್ದಾರೆ. ಸ್ವಲ್ಪವೇ ತಡವಾಗಿದ್ದರೂ ಎಲ್ಲರೂ ಸಜೀವದಹನ ಆಗಬೇಕಾಗಿತ್ತು! ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

‘ಬಾಗಿಲು ತೆಗೆಯುವುದು ತುಂಬ ಕಷ್ಟ ಆಗಿತ್ತು. ಎಲ್ಲವೂ ಜಾಮ್​ ಆಗಿತ್ತು. ತುಂಬ ಕಷ್ಟಪಟ್ಟು ಹೊರಬಂದೆವು. ನಾನು ಈಗ ಚೆನ್ನಾಗಿದ್ದೇನೆ. ಎಲ್ಲ ಪ್ರಯಾಣಿಕರು ಸೇಫ್​ ಆಗಿದ್ದೇವೆ. ಕೆಲವರಿಗೆ ಗಾಯಗಳಾಗಿವೆ’ ಎಂದು ಮಾಧ್ಯಮಗಳಿಗೆ ನೀಮಾ ರೇ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ಘೋಷಣೆಯಾದ 67ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಯಲ್ಲಿ ‘ಅತ್ಯುತ್ತಮ ತುಳು ಸಿನಿಮಾ’ ಎಂಬ ಗೌರವಕ್ಕೆ ಪಾತ್ರವಾದ ‘ಪಿಂಗಾರ’ ಸಿನಿಮಾದಲ್ಲಿ ನೀಮಾ ರೈ ನಟಿಸಿದ್ದಾರೆ.

ಇದನ್ನೂ ಓದಿ: ಕಳೆದೊಂದು ವರ್ಷದಲ್ಲಿ ಕೊರೊನಾಕ್ಕಿಂತ ರಸ್ತೆ ಅಪಘಾತಕ್ಕೆ ಬಲಿಯಾದವರೇ ಹೆಚ್ಚು: ನಿತಿನ್ ಗಡ್ಕರಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್