AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nelyadi Accident: ಹೊತ್ತಿ ಉರಿದ ಬಸ್​ನಲ್ಲಿ ನಟಿ ನೀಮಾ ರೇ! ನೆಲ್ಯಾಡಿ ಭೀಕರ ಅಪಘಾತದಲ್ಲಿ ತುಳು ಕಲಾವಿದೆ ಸೇಫ್​ ಆಗಿದ್ದು ಹೇಗೆ?

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಬಳಿ ಬುಧವಾರ (ಮಾ.24) ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಸುದ್ದಿ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಈ ಅಪಘಾತದಲ್ಲಿ ತುಳು ನಟಿ ಬಚಾವ್​ ಆಗಿದ್ದಾರೆ.

Nelyadi Accident: ಹೊತ್ತಿ ಉರಿದ ಬಸ್​ನಲ್ಲಿ ನಟಿ ನೀಮಾ ರೇ! ನೆಲ್ಯಾಡಿ ಭೀಕರ ಅಪಘಾತದಲ್ಲಿ ತುಳು ಕಲಾವಿದೆ ಸೇಫ್​ ಆಗಿದ್ದು ಹೇಗೆ?
ನೀಮಾ ರೇ - ನೆಲ್ಯಾಡಿ ಅಪಘಾತ
ಮದನ್​ ಕುಮಾರ್​
|

Updated on: Mar 25, 2021 | 11:09 AM

Share

ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ನೆಲ್ಯಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ಅಪಘಾತ ಭೀಕರ ಅಪಘಾತ ಸಂಭವಿಸಿದೆ. ಬುಧವಾರ ರಾತ್ರಿ ನಡೆದ ಈ ದುರ್ಘಟನೆಯಲ್ಲಿ ಲಾರಿ ಮತ್ತು ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ನಿಮಿಷಗಳಲ್ಲಿ ಎರಡೂ ವಾಹನಗಳು ಸುಟ್ಟು ಭಸ್ಮವಾಗಿವೆ. ಲಾರಿ ಚಾಲಕ ಸಜೀವ ದಹನವಾಗಿದ್ದು, ಬಸ್​ನಲ್ಲಿದ್ದ ಪ್ರಯಾಣಿಸಕರು ಸೇಫ್​ ಆಗಿದ್ದಾರೆ. ಇದೇ ಬಸ್​ನಲ್ಲಿ ತುಳು ನಟಿ ನೀಮಾ ರೇ ಕೂಡ ಪ್ರಯಾಣ ಮಾಡುತ್ತಿದ್ದರು!

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಗೂಡ್ಸ್ ಲಾರಿ ನಡುವೆ ಡಿಕ್ಕಿ ಸಂಭವಿಸಿತು. ಪರಿಣಾಮ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿತು. ಬಸ್​ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅವರ ಪೈಕಿ ತುಳು ಚಿತ್ರರಂಗದ ಖ್ಯಾತ ನಟಿ ನೀಮಾ ರೇ ಕೂಡ ಇದ್ದರು. ಅದೃಷ್ಟವಶಾತ್​ ಅವರೆಲ್ಲರೂ ಪಾರಾಗಿದ್ದಾರೆ.

ಡಿಕ್ಕಿ ಹೊಡೆದ ತಕ್ಷಣ ಬಸ್​ನಲ್ಲಿ ಹೊಗೆ ಆವರಿಸಲು ಆರಂಭ ಆಯಿತು. ಅದರಿಂದ ಎಲ್ಲರೂ ಗಾಬರಿಗೊಂಡಿದ್ದಾರೆ. ಹೇಗೋ ಸಾಹಸಪಟ್ಟು ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ. ಬೆಂಕಿ ಆವರಿಸಿಕೊಳ್ಳುವ ಮುನ್ನವೇ ಎಲ್ಲರೂ ಬಸ್​ನಿಂದ ಹೊರಬಂದಿದ್ದಾರೆ. ಸ್ವಲ್ಪವೇ ತಡವಾಗಿದ್ದರೂ ಎಲ್ಲರೂ ಸಜೀವದಹನ ಆಗಬೇಕಾಗಿತ್ತು! ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

‘ಬಾಗಿಲು ತೆಗೆಯುವುದು ತುಂಬ ಕಷ್ಟ ಆಗಿತ್ತು. ಎಲ್ಲವೂ ಜಾಮ್​ ಆಗಿತ್ತು. ತುಂಬ ಕಷ್ಟಪಟ್ಟು ಹೊರಬಂದೆವು. ನಾನು ಈಗ ಚೆನ್ನಾಗಿದ್ದೇನೆ. ಎಲ್ಲ ಪ್ರಯಾಣಿಕರು ಸೇಫ್​ ಆಗಿದ್ದೇವೆ. ಕೆಲವರಿಗೆ ಗಾಯಗಳಾಗಿವೆ’ ಎಂದು ಮಾಧ್ಯಮಗಳಿಗೆ ನೀಮಾ ರೇ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ಘೋಷಣೆಯಾದ 67ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಯಲ್ಲಿ ‘ಅತ್ಯುತ್ತಮ ತುಳು ಸಿನಿಮಾ’ ಎಂಬ ಗೌರವಕ್ಕೆ ಪಾತ್ರವಾದ ‘ಪಿಂಗಾರ’ ಸಿನಿಮಾದಲ್ಲಿ ನೀಮಾ ರೈ ನಟಿಸಿದ್ದಾರೆ.

ಇದನ್ನೂ ಓದಿ: ಕಳೆದೊಂದು ವರ್ಷದಲ್ಲಿ ಕೊರೊನಾಕ್ಕಿಂತ ರಸ್ತೆ ಅಪಘಾತಕ್ಕೆ ಬಲಿಯಾದವರೇ ಹೆಚ್ಚು: ನಿತಿನ್ ಗಡ್ಕರಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ