ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡದಂತೆ ಶಿಕ್ಷಣ ಇಲಾಖೆಗೆ ಶಿಫಾರಸ್ಸು! ಎನ್ಇಪಿ ಸಮಿತಿ ವಿರುದ್ಧ ತೀವ್ರ ಆಕ್ರೋಶ

ಮೊಟ್ಟೆ ಹಾಗೂ ಮಾಂಸ ದೇಹಕ್ಕೆ ಪ್ರೋಟೀನ್ ಒದಗಿಸುತ್ತದೆ. ಮಾನವನ ಮೆದುಳಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ ಎಂಬುದು ವೈಜ್ಞಾನಿಕವಾಗಿ ಸಾಭೀತಾಗಿದೆ.

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡದಂತೆ ಶಿಕ್ಷಣ ಇಲಾಖೆಗೆ ಶಿಫಾರಸ್ಸು! ಎನ್ಇಪಿ ಸಮಿತಿ ವಿರುದ್ಧ ತೀವ್ರ ಆಕ್ರೋಶ
ಸಾಂದರ್ಭಿಕ ಚಿತ್ರ
Follow us
|

Updated on:Jul 14, 2022 | 9:47 AM

ಬೆಂಗಳೂರು: ಶಿಕ್ಷಣ ಇಲಾಖೆಯ (Education Department) ಆರ್ಥಿಕ ಸಂಕಷ್ಟದಿಂದ ಶಾಲಾ ವಿದ್ಯಾರ್ಥಿಗಳಿಗೆ ಈ ಬಾರಿ ಶೂ- ಸಾಕ್ಸ್, ಬೈಸಿಕಲ್ ಪಡೆಯುವ ಭಾಗ್ಯ ಇಲ್ಲ. ಈ ನಡುವೆ ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳಿಗೆ ಮೊಟ್ಟೆ (Egg) ನೀಡದಿರಲು ಎನ್ಇಪಿ ಸಮಿತಿ ಶಿಕ್ಷಣ ಇಲಾಖೆಗೆ ಶಿಫಾರಸ್ಸು ಮಾಡಿದೆ. ಮೊಟ್ಟೆ ಹಾಗೂ ಮಾಂಸದಿಂದ ಅನೇಕ ರೋಗಗಳು ಬರುತ್ತವೆ. ಹೀಗಾಗಿ ಸಾತ್ವಿಕ ಆಹಾರ ಪದ್ಧತಿಯನ್ನು ಅನುಸರಿಸಬೇಕೆಂದು ಎನ್ಇಪಿ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಎನ್ಇಪಿ ಸಮಿತಿಯ ಈ ಶಿಫಾರಸ್ಸಿಗೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಮೊಟ್ಟೆ ಹಾಗೂ ಮಾಂಸ ದೇಹಕ್ಕೆ ಪ್ರೋಟೀನ್ ಒದಗಿಸುತ್ತದೆ. ಮಾನವನ ಮೆದುಳಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ. ಹೀಗಾಗಿ ಕರ್ನಾಟಕ ಸರ್ಕಾರವು ಮೊಟ್ಟೆಯನ್ನು ಬಿಸಿಯೂಟದಲ್ಲಿ ಸೇರಿಸಿತ್ತು. ಆದ್ರೆ ಈ ಸಮಿತಿ ಮೊಟ್ಟೆ ಉತ್ತಮವಲ್ಲ ಅಂತಾ ಶಿಫಾರಸ್ಸು ಮಾಡಿರುವುದು ಅವೈಜ್ಞಾನಿಕವಾಗಿದೆ ಎಂದು ಶಿಕ್ಷಣ ಇಲಾಖೆ ವಿರುದ್ಧ ಸಾಹಿತಿಗಳು, ವಿದ್ಯಾರ್ಥಿಗಳು ಸೇರಿ ಶಿಕ್ಷಣ ಕ್ಷೇತ್ರದ ಪ್ರತಿನಿಧಿಗಳು ಆಕ್ರೋಶಗೊಂಡಿದ್ದಾರೆ.

ಇದನ್ನೂ ಓದಿ: ಜೈಲಿನಿಂದ ಪರಾರಿಯಾಗಲು ಕೈದಿಯೊಬ್ಬನಿಗೆ ನೆರವಾಗಿ ಅವನೊಂದಿಗೆ ತಾನೂ ನಾಪತ್ತೆಯಾದ ಮಹಿಳಾ ಜೈಲು ಅಧಿಕಾರಿ ಸಿಕ್ಕಿದ್ದು ಮಾತ್ರ ಶವವಾಗಿ!

ಇದನ್ನೂ ಓದಿ
Image
ಇಂದು ಆರ್​ಎಸ್​ಎಸ್​-ಬಿಜೆಪಿ ಸಮನ್ವಯ ಸಭೆ: ಸಿಎಂ ಬೊಮ್ಮಾಯಿ ಸೇರಿದಂತೆ ಬಿಜೆಪಿಯ ಆಯ್ದ ಪದಾಧಿಕಾರಿಗಳು ಭಾಗಿ
Image
India Playing XI vs ENG: ಏಕದಿನ ಸರಣಿ ವಶಕ್ಕೆ ಪಡೆಯಲು ಮಾಸ್ಟರ್ ಪ್ಲಾನ್: ಭಾರತದಲ್ಲಿ ಮಹತ್ವದ ಬದಲಾವಣೆ
Image
Ismart Jodi: ಗಣೇಶ್​ ಸಾರಥ್ಯದಲ್ಲಿ ಜುಲೈ 16ರಿಂದ ‘ಇಸ್ಮಾರ್ಟ್​ ಜೋಡಿ’; ‘ಸ್ಟಾರ್​ ಸುವರ್ಣ’ದ ಈ ಶೋ ವಿಶೇಷತೆ ಏನು?
Image
ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ನಾಗರಿಕರ ಒಕ್ಕೂಟದಿಂದ ಬೃಹತ್ ಬೈಕ್ ರ್ಯಾಲಿಗೆ ನಿರ್ಧಾರ

ಇನ್ನು ತಜ್ಞರ ಶಿಫಾರಸ್ಸಿಗೆ ಕಿಡಿ ಕಾರಿರುವ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಜನರ ಊಟದ ಪದ್ಧತಿಯನ್ನು ಹೇರಲು ಸಮಿತಿ ಮುಂದಾಗಿದೆ. ದೇಶದಲ್ಲಿ ಶೇ. 50 ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವಾಗ ಸಮಿತಿಯು ಈ ವಾಸ್ತವವನ್ನು ಅಣಕಿಸಿದಂತಿದೆ. ಇದು ಅವೈಜ್ಞಾನಿಕ ಸಲಹೆ. ಸರ್ಕಾರ ಮಕ್ಕಳಿಗೆ ಮೊಟ್ಟೆ ಕೊಡಲೇಬೇಕು. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆದು ಮನವಿ ಮಾಡುತ್ತೇವೆ ಎಂದು ತಿಳಿಸಿದರು.

ಮಕ್ಕಳಿಗೆ ತಟ್ಟಿದ ಆರ್ಥಿಕ ಸಂಕಷ್ಟದ ಬಿಸಿ: ಆರ್ಥಿಕ ಸಂಕಷ್ಟದ ಹಿನ್ನೆಲೆ ಈ ವರ್ಷವೂ ಮಕ್ಕಳಿಗೆ ಉಚಿತ ಶೂ ಸಾಕ್ಸ್ ಭಾಗ್ಯ ಇಲ್ಲ. ಕೊರೊನಾ ಕಾರಣದಿಂದ ಮಕ್ಕಳಿಗೆ ಸೈಕಲ್ ವಿತರಣೆ ಮಾಡುತ್ತಿಲ್ಲ. ಶೂ ಹಾಗೂ ಸಾಕ್ಸ್ ಯೋಜನೆಗೂ ಇಲಾಖೆ ಬ್ರೇಕ್ ಹಾಕಲು ಮುಂದಾಗಿದೆ. ಕೊರೊನಾ ಕಾರಣದಿಂದ ದೇಶ ಲರ್ನಿಂಗ್ ಲಾಸ್​ನಲ್ಲಿದೆ. ಗುಣಮಟ್ಟದ ಶಿಕ್ಷಣ ಕೊಡುವುದು ನಮ್ಮ ಪ್ರಮುಖ ಆದ್ಯತೆ ಎಂದು ಶಿಕ್ಷಣ ಇಲಾಖೆ ಯೋಜನೆಗೆ ಎಳ್ಳು ನೀರು ಬಿಡಲು ಮುಂದಾಗಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಕಿರು ಸೇತುವೆ ಮೇಲೆ ಯುವಕ- ಯುವತಿಯರ ಹುಚ್ಚಾಟ; ಸ್ಥಳಕ್ಕೆ ಆಗಮಿಸಿದ ಇಇಯಿಂದ ಯುವಕನಿಗೆ ಕಪಾಳಮೋಕ್ಷ

Published On - 9:35 am, Thu, 14 July 22

ತಾಜಾ ಸುದ್ದಿ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ