AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid-19 Cluster | ಬೆಂಗಳೂರಿನ ಸಂಭ್ರಮ ಕಾಲೇಜ್ ಕ್ಯಾಂಪಸ್​ನಲ್ಲಿ 10 ವಿದ್ಯಾರ್ಥಿಗಳಿಗೆ ಕೊರೊನಾ

ಕೊರೊನಾ ಕೇಸ್​ಗಳು ದೃಢವಾದ ಬೆನ್ನಲ್ಲೇ ಎಚ್ಚೆತ್ತಿರುವ ಕಾಲೇಜಿನ ಆಡಳಿತ ಮಂಡಳಿ, ಪರೀಕ್ಷೆ ಬರೆಯುವವರನ್ನು ಬಿಟ್ಟು ಮತ್ಯಾರಿಗೂ ಕ್ಯಾಂಪಸ್​ ಒಳಗೆ ತೆರಳಲು ಅವಕಾಶ ನೀಡುತ್ತಿಲ್ಲ.

Covid-19 Cluster | ಬೆಂಗಳೂರಿನ ಸಂಭ್ರಮ ಕಾಲೇಜ್ ಕ್ಯಾಂಪಸ್​ನಲ್ಲಿ 10 ವಿದ್ಯಾರ್ಥಿಗಳಿಗೆ ಕೊರೊನಾ
ಸಂಗ್ರಹ ಚಿತ್ರ
ರಾಜೇಶ್ ದುಗ್ಗುಮನೆ
| Updated By: Skanda|

Updated on:Feb 27, 2021 | 2:40 PM

Share

ಬೆಂಗಳೂರು: ಕೊರೊನಾ ಸೋಂಕಿನ ಅಬ್ಬರ ನಿಧಾನವಾಗಿ ಕಡಿಮೆ ಆಗುತ್ತಿದೆ ಎನ್ನುವಾಗಲೇ ಮತ್ತೆ ಕೊವಿಡ್​-19 ಕೇಸ್​ಗಳು ಏರುಗತಿಯಲ್ಲಿ ಸಾಗುತ್ತಿವೆ. ಇಂದು ಯಲಹಂಕದ ಅಟ್ಟೂರು​ ಭಾಗದಲ್ಲಿರುವ ಸಂಭ್ರಮ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಸೈನ್ಸಸ್ ಕ್ಯಾಂಪಸ್​ನಲ್ಲಿ 10 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ದೃಢವಾಗಿದ್ದು, ಇದನ್ನು ಕೊವಿಡ್ ಕ್ಲಸ್ಟರ್​ ಎಂದು ಗುರುತಿಸಲಾಗಿದೆ. ಸಂಭ್ರಮ ಇಂಜಿನಿಯರಿಂಗ್​ ಕಾಲೇಜ್​ ಕೂಡ ಇದೇ ಕ್ಯಾಂಪಸ್​ನಲ್ಲಿದ್ದು, ಇಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ಇದು ಸಾಕಷ್ಟು ಆತಂಕ ಮೂಡಿಸಿದೆ. ಕೊರೊನಾ ಪಾಸಿಟಿವ್​ ಬಂದ ವಿದ್ಯಾರ್ಥಿಗಳು ಪಿಜಿಯಲ್ಲಿ ಉಳಿದುಕೊಳ್ಳುವವರಾಗಿದ್ದಾರೆ. ಕೊರೊನಾ ಕೇಸ್​ಗಳು ದೃಢವಾದ ಬೆನ್ನಲ್ಲೇ ಎಚ್ಚೆತ್ತಿರುವ ಕಾಲೇಜಿನ ಆಡಳಿತ ಮಂಡಳಿ, ಪರೀಕ್ಷೆ ಬರೆಯುವವರನ್ನು ಬಿಟ್ಟು ಮತ್ಯಾರಿಗೂ ಕ್ಯಾಂಪಸ್​ ಒಳಗೆ ತೆರಳಲು ಅವಕಾಶ ನೀಡುತ್ತಿಲ್ಲ. ಕೊರೊನಾ ಪಾಸಿಟಿವ್​ ಬಂದ ವಿದ್ಯಾರ್ಥಿಗಳ ಸಂಪರ್ಕಕ್ಕೆ ಬಂದವರನ್ನು ನಾವು ಪತ್ತೆ ಹಚ್ಚುವ ಕಾರ್ಯ ಮಾಡುತ್ತಿದ್ದೇವೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಯಲಹಂಕಾ ನ್ಯೂ ಟೌನ್​ ಅಪಾರ್ಟ್​ಮೆಂಟ್​ನಲ್ಲಿ ಸಾಕಷ್ಟು ಕೊರೊನಾ ಕೇಸ್​ಗಳು ವರದಿ ಆಗಿದ್ದವು. ಈಗ ಅಲ್ಲಿ ಯಾವುದೇ ಹೊಸ ಕೇಸ್​ಗಳು ವರದಿ ಆಗಿಲ್ಲ. ಇದು ಅಧಿಕಾರಿಗಳಿಗೆ ನೆಮ್ಮದಿ ತಂದಿದೆ.

ಸಣ್ಣ ಪ್ರದೇಶದಲ್ಲಿ ಹೆಚ್ಚು ಜನರು ಉಳಿದುಕೊಳ್ಳುವಂತಹ ಹೊಸ್ಟೇಲ್​ಗಳು, ಪಿಜಿ, ಅಪಾರ್ಟ್​ಮೆಂಟ್​ಗಳಲ್ಲಿ ಕೊರೊನಾ ಪ್ರಕರಣ ಹೆಚ್ಚುವ ಭಯ ಕಾಡಿದೆ. ಈಗ ಶಾಲಾ-ಕಾಲೇಜುಗಳು ಮತ್ತೆ ಆರಂಭವಾಗಿದ್ದು, ಅಲ್ಲಿಯೂ ಕೇಸ್​ಗಳು ಹೆಚ್ಚುವ ಸಾಧ್ಯತೆ ಇದೆ ಎನ್ನುವುದು ಆರೋಗ್ಯ ಅಧಿಕಾರಿಗಳ ಅಭಿಪ್ರಾಯ. ಇನ್ನು, ಜಿಮ್​, ಪಾರ್ಕ್​ ಮತ್ತು ಲಿಫ್ಟ್​ ಸೇರಿ ಅನೇಕ ಪ್ರದೇಶಗಳನ್ನು ಸ್ಯಾನಿಟೈಸ್​ ಮಾಡುವ ಅಗತ್ಯವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಹಾರಾಷ್ಟ್ರ, ಕೇರಳ ಭಾಗದಲ್ಲಿ ಕೊರೊನಾ ಕೇಸ್​ಗಳ ಸಂಖ್ಯೆ ಹೆಚ್ಚುತ್ತಿದೆ. ಆದರೆ, ಸದ್ಯ ಕರ್ನಾಟಕ ಹಾಗೂ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಆದಾಗ್ಯೂ, ಕೊರೊನಾ ಹೆಚ್ಚದಂತೆ ನೋಡಿಕೊಳ್ಳಲು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದು ಆರೋಗ್ಯದ ಅಧಿಕಾರಿಗಳ ಮಾತು.

ಇದನ್ನೂ ಓದಿ: ಆಂಧ್ರ ದಿಕ್ಕಿನಿಂದಲೂ ಬರುತ್ತಿದೆ ಕೊರೊನಾ ಮಹಾಮಾರಿ! ಬಳ್ಳಾರಿಯ ಸತ್ಯನಾರಾಯಣಪೇಟೆ ಅಪಾಟ್ಮೆಂಟ್​ನಲ್ಲಿ 7 ಜನರಿಗೆ ಕೊರೊನಾ ದೃಢ!

ಬೆಂಗಳೂರಿನ ಅಪಾರ್ಟ್‌ಮೆಂಟ್​ನಲ್ಲಿ ಹೆಚ್ಚುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ; ಆನೇಕಲ್‌ನಲ್ಲಿಯೂ ಕಾಲಿಟ್ಟಿದೆ!

Published On - 2:33 pm, Sat, 27 February 21

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ