Covid-19 Cluster | ಬೆಂಗಳೂರಿನ ಸಂಭ್ರಮ ಕಾಲೇಜ್ ಕ್ಯಾಂಪಸ್​ನಲ್ಲಿ 10 ವಿದ್ಯಾರ್ಥಿಗಳಿಗೆ ಕೊರೊನಾ

ಕೊರೊನಾ ಕೇಸ್​ಗಳು ದೃಢವಾದ ಬೆನ್ನಲ್ಲೇ ಎಚ್ಚೆತ್ತಿರುವ ಕಾಲೇಜಿನ ಆಡಳಿತ ಮಂಡಳಿ, ಪರೀಕ್ಷೆ ಬರೆಯುವವರನ್ನು ಬಿಟ್ಟು ಮತ್ಯಾರಿಗೂ ಕ್ಯಾಂಪಸ್​ ಒಳಗೆ ತೆರಳಲು ಅವಕಾಶ ನೀಡುತ್ತಿಲ್ಲ.

Covid-19 Cluster | ಬೆಂಗಳೂರಿನ ಸಂಭ್ರಮ ಕಾಲೇಜ್ ಕ್ಯಾಂಪಸ್​ನಲ್ಲಿ 10 ವಿದ್ಯಾರ್ಥಿಗಳಿಗೆ ಕೊರೊನಾ
ಸಂಗ್ರಹ ಚಿತ್ರ
Edited By:

Updated on: Feb 27, 2021 | 2:40 PM

ಬೆಂಗಳೂರು: ಕೊರೊನಾ ಸೋಂಕಿನ ಅಬ್ಬರ ನಿಧಾನವಾಗಿ ಕಡಿಮೆ ಆಗುತ್ತಿದೆ ಎನ್ನುವಾಗಲೇ ಮತ್ತೆ ಕೊವಿಡ್​-19 ಕೇಸ್​ಗಳು ಏರುಗತಿಯಲ್ಲಿ ಸಾಗುತ್ತಿವೆ. ಇಂದು ಯಲಹಂಕದ ಅಟ್ಟೂರು​ ಭಾಗದಲ್ಲಿರುವ ಸಂಭ್ರಮ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಸೈನ್ಸಸ್ ಕ್ಯಾಂಪಸ್​ನಲ್ಲಿ 10 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ದೃಢವಾಗಿದ್ದು, ಇದನ್ನು ಕೊವಿಡ್ ಕ್ಲಸ್ಟರ್​ ಎಂದು ಗುರುತಿಸಲಾಗಿದೆ. ಸಂಭ್ರಮ ಇಂಜಿನಿಯರಿಂಗ್​ ಕಾಲೇಜ್​ ಕೂಡ ಇದೇ ಕ್ಯಾಂಪಸ್​ನಲ್ಲಿದ್ದು, ಇಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ಇದು ಸಾಕಷ್ಟು ಆತಂಕ ಮೂಡಿಸಿದೆ.

ಕೊರೊನಾ ಪಾಸಿಟಿವ್​ ಬಂದ ವಿದ್ಯಾರ್ಥಿಗಳು ಪಿಜಿಯಲ್ಲಿ ಉಳಿದುಕೊಳ್ಳುವವರಾಗಿದ್ದಾರೆ. ಕೊರೊನಾ ಕೇಸ್​ಗಳು ದೃಢವಾದ ಬೆನ್ನಲ್ಲೇ ಎಚ್ಚೆತ್ತಿರುವ ಕಾಲೇಜಿನ ಆಡಳಿತ ಮಂಡಳಿ, ಪರೀಕ್ಷೆ ಬರೆಯುವವರನ್ನು ಬಿಟ್ಟು ಮತ್ಯಾರಿಗೂ ಕ್ಯಾಂಪಸ್​ ಒಳಗೆ ತೆರಳಲು ಅವಕಾಶ ನೀಡುತ್ತಿಲ್ಲ. ಕೊರೊನಾ ಪಾಸಿಟಿವ್​ ಬಂದ ವಿದ್ಯಾರ್ಥಿಗಳ ಸಂಪರ್ಕಕ್ಕೆ ಬಂದವರನ್ನು ನಾವು ಪತ್ತೆ ಹಚ್ಚುವ ಕಾರ್ಯ ಮಾಡುತ್ತಿದ್ದೇವೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಯಲಹಂಕಾ ನ್ಯೂ ಟೌನ್​ ಅಪಾರ್ಟ್​ಮೆಂಟ್​ನಲ್ಲಿ ಸಾಕಷ್ಟು ಕೊರೊನಾ ಕೇಸ್​ಗಳು ವರದಿ ಆಗಿದ್ದವು. ಈಗ ಅಲ್ಲಿ ಯಾವುದೇ ಹೊಸ ಕೇಸ್​ಗಳು ವರದಿ ಆಗಿಲ್ಲ. ಇದು ಅಧಿಕಾರಿಗಳಿಗೆ ನೆಮ್ಮದಿ ತಂದಿದೆ.

ಸಣ್ಣ ಪ್ರದೇಶದಲ್ಲಿ ಹೆಚ್ಚು ಜನರು ಉಳಿದುಕೊಳ್ಳುವಂತಹ ಹೊಸ್ಟೇಲ್​ಗಳು, ಪಿಜಿ, ಅಪಾರ್ಟ್​ಮೆಂಟ್​ಗಳಲ್ಲಿ ಕೊರೊನಾ ಪ್ರಕರಣ ಹೆಚ್ಚುವ ಭಯ ಕಾಡಿದೆ. ಈಗ ಶಾಲಾ-ಕಾಲೇಜುಗಳು ಮತ್ತೆ ಆರಂಭವಾಗಿದ್ದು, ಅಲ್ಲಿಯೂ ಕೇಸ್​ಗಳು ಹೆಚ್ಚುವ ಸಾಧ್ಯತೆ ಇದೆ ಎನ್ನುವುದು ಆರೋಗ್ಯ ಅಧಿಕಾರಿಗಳ ಅಭಿಪ್ರಾಯ. ಇನ್ನು, ಜಿಮ್​, ಪಾರ್ಕ್​ ಮತ್ತು ಲಿಫ್ಟ್​ ಸೇರಿ ಅನೇಕ ಪ್ರದೇಶಗಳನ್ನು ಸ್ಯಾನಿಟೈಸ್​ ಮಾಡುವ ಅಗತ್ಯವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಹಾರಾಷ್ಟ್ರ, ಕೇರಳ ಭಾಗದಲ್ಲಿ ಕೊರೊನಾ ಕೇಸ್​ಗಳ ಸಂಖ್ಯೆ ಹೆಚ್ಚುತ್ತಿದೆ. ಆದರೆ, ಸದ್ಯ ಕರ್ನಾಟಕ ಹಾಗೂ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಆದಾಗ್ಯೂ, ಕೊರೊನಾ ಹೆಚ್ಚದಂತೆ ನೋಡಿಕೊಳ್ಳಲು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದು ಆರೋಗ್ಯದ ಅಧಿಕಾರಿಗಳ ಮಾತು.

ಇದನ್ನೂ ಓದಿ: ಆಂಧ್ರ ದಿಕ್ಕಿನಿಂದಲೂ ಬರುತ್ತಿದೆ ಕೊರೊನಾ ಮಹಾಮಾರಿ! ಬಳ್ಳಾರಿಯ ಸತ್ಯನಾರಾಯಣಪೇಟೆ ಅಪಾಟ್ಮೆಂಟ್​ನಲ್ಲಿ 7 ಜನರಿಗೆ ಕೊರೊನಾ ದೃಢ!

ಬೆಂಗಳೂರಿನ ಅಪಾರ್ಟ್‌ಮೆಂಟ್​ನಲ್ಲಿ ಹೆಚ್ಚುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ; ಆನೇಕಲ್‌ನಲ್ಲಿಯೂ ಕಾಲಿಟ್ಟಿದೆ!

Published On - 2:33 pm, Sat, 27 February 21

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us