ಬೆಂಗಳೂರು ನಗರಾಭಿವೃದ್ಧಿ ಸಚಿವ ಸ್ಥಾನಕ್ಕೆ ಓಡೋಡಿ ಬರುತ್ತಿದ್ದಾರೆ ಭೈರತಿ, ಆದ್ರೆ..

ಬೆಂಗಳೂರು: ಸಚಿವ ಸ್ಥಾನ ಆಕಾಂಕ್ಷಿಯಾಗಿಯೇ ಈ ಹಿಂದೆ ತಮ್ಮ ಶಾಸಕ ಸ್ಥಾನಕ್ಕೆ ಓಡೋಡಿ ಬಂದು ರಾಜೀನಾಮೆ ನೀಡಿದ್ದ, ಬಳಿಕ ನಡೆದ ಬೈ ಎಲೆಕ್ಷನ್​ನಲ್ಲಿ ಶಾಸಕರಾಗಿ ಮರು ಆಯ್ಕೆಯಾದ ಕೆ ಆರ್​ ಪುರದ ಭೈರತಿ ಬಸವರಾಜ್ ಅದಾಗಲೇ ಸಚಿವ ಸ್ಥಾನ ಕಾಯಂ ಮಾಡಿಕೊಂಡಿದ್ದಾರೆ. ಸಿಎಂ ಬಿಎಸ್‌ವೈ ಈಗಾಗ್ಲೇ ಸಚಿವ ಸ್ಥಾನ ಖಾತ್ರಿ ಮಾಡಿದ್ದಾರೆ. ಈ ಸಂಬಂಧ ಯಡಿಯೂರಪ್ಪರನ್ನ ಭೇಟಿಯಾಗಿ ಮಾತಾಡುತ್ತೇನೆ. ಬೆಂಗಳೂರು ನಗರಾಭಿವೃದ್ಧಿ ಕೊಡುವಂತೆ ಕೇಳಿದ್ದೇನೆ. ಆ ಖಾತೆ ಕೊಟ್ರೆ ನಿಭಾಯಿಸುತ್ತೇನೆ. ಇದನ್ನು ಹೊರತುಪಡಿಸಿ ಇನ್ನೂ ಕೆಲ ಖಾತೆಗಳನ್ನು […]

ಬೆಂಗಳೂರು ನಗರಾಭಿವೃದ್ಧಿ ಸಚಿವ ಸ್ಥಾನಕ್ಕೆ ಓಡೋಡಿ ಬರುತ್ತಿದ್ದಾರೆ ಭೈರತಿ, ಆದ್ರೆ..
ಸಾಧು ಶ್ರೀನಾಥ್​

Updated on: Dec 10, 2019 | 3:16 PM

ಬೆಂಗಳೂರು: ಸಚಿವ ಸ್ಥಾನ ಆಕಾಂಕ್ಷಿಯಾಗಿಯೇ ಈ ಹಿಂದೆ ತಮ್ಮ ಶಾಸಕ ಸ್ಥಾನಕ್ಕೆ ಓಡೋಡಿ ಬಂದು ರಾಜೀನಾಮೆ ನೀಡಿದ್ದ, ಬಳಿಕ ನಡೆದ ಬೈ ಎಲೆಕ್ಷನ್​ನಲ್ಲಿ ಶಾಸಕರಾಗಿ ಮರು ಆಯ್ಕೆಯಾದ ಕೆ ಆರ್​ ಪುರದ ಭೈರತಿ ಬಸವರಾಜ್ ಅದಾಗಲೇ ಸಚಿವ ಸ್ಥಾನ ಕಾಯಂ ಮಾಡಿಕೊಂಡಿದ್ದಾರೆ.

ಸಿಎಂ ಬಿಎಸ್‌ವೈ ಈಗಾಗ್ಲೇ ಸಚಿವ ಸ್ಥಾನ ಖಾತ್ರಿ ಮಾಡಿದ್ದಾರೆ. ಈ ಸಂಬಂಧ ಯಡಿಯೂರಪ್ಪರನ್ನ ಭೇಟಿಯಾಗಿ ಮಾತಾಡುತ್ತೇನೆ. ಬೆಂಗಳೂರು ನಗರಾಭಿವೃದ್ಧಿ ಕೊಡುವಂತೆ ಕೇಳಿದ್ದೇನೆ. ಆ ಖಾತೆ ಕೊಟ್ರೆ ನಿಭಾಯಿಸುತ್ತೇನೆ. ಇದನ್ನು ಹೊರತುಪಡಿಸಿ ಇನ್ನೂ ಕೆಲ ಖಾತೆಗಳನ್ನು ಕೇಳಿದ್ದೇನೆ. ಸಿಎಂ ಬಿಎಸ್‌ವೈ ಏನು ನಿರ್ಧಾರ ಮಾಡ್ತಾರೋ ನೋಡಬೇಕು ಎಂದು ಬೆಂಗಳೂರಿನಲ್ಲಿ ನೂತನ ಶಾಸಕ ಭೈರತಿ ಬಸವರಾಜ್ ಹೇಳಿದ್ದಾರೆ.

ಅವರಿಬ್ಬರೂ ಗೆದ್ದಿದ್ದರೆ ನನಗೆ ನೈತಿಕ ಬಲ ಸಿಗುತ್ತಿತ್ತು:
ಕೊಟ್ಟ ಮಾತು ಉಳಿಸಿಕೊಳ್ಳೋದಾಗಿ ಸಿಎಂ ಬಿಎಸ್‌ವೈ ನನಗೆ ಹೇಳಿದ್ದಾರೆ. ನಂಬಿಕೆ ಉಳಿಸಿಕೊಳ್ಳುತ್ತಾರೆ ಎಂಬ ನಂಬಿಕೆ, ವಿಶ್ವಾಸ ನನಗೂ ಇದೆ. ಪಕ್ಕದ ಕ್ಷೇತ್ರದಲ್ಲಿ ಎಂಟಿಬಿ ನಾಗರಾಜ್ ಅವರು ಅನುಭವಿಸಿದ ಸೋಲು ನನಗೆ ನೋವು ತಂದಿದೆ. ವಿಶ್ವನಾಥ್ ಮತ್ತು ಎಂಟಿಬಿ ಗೆದ್ದಿದ್ದರೆ ನನಗೆ ನೈತಿಕ ಬಲ ಸಿಗುತ್ತಿತ್ತು ಎಂದು ಶಾಸಕ ಭೈರತಿ ಹೇಳಿದ್ದಾರೆ.

ವಲಸಿಗರಿಗೆ ಮಣೆ?
ಭೈರತಿ ಬಸವರಾಜ್, ಬೆಂಗಳೂರು ನಗರಾಭಿವೃದ್ಧಿ ಖಾತೆ ಸಚಿವರಾಗುವ ಬಯಕೆ ವ್ಯಕ್ತಪಡಿಸಿರುವುದು ವಿಶೇಷವಾಗಿದೆ. ಆದ್ರೆ ಈ ಖಾತೆಯನ್ನು ಯಾರಿಗೂ ನೀಡದಂತೆ ಬೆಂಗಳೂರಿನ ಶಾಸಕರು ಈ ಹಿಂದೆ ಸಿಎಂ ಮೇಲೆ ಒತ್ತಡ ಹೇರಿದ್ದರು. ಹಾಗಾಗಿ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಎಂ ಬಳಿಯೇ ಇತ್ತು. ಇದರಿಂದ ಬೆಂಗಳೂರು ನಗರಾಭಿವೃದ್ಧಿ ಖಾತೆ ಆಕಾಂಕ್ಷಿ ಆಗಿರುವ ಭೈರತಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ.

ಸಿಎಂ ಬಿಎಸ್‌ವೈ ಬೆಂಗಳೂರಿನ ಹಾಲಿ ಯಾವುದೇ ಸಚಿವರಿಗೂ ಬೆಂಗಳೂರು ನಗರಾಭಿವೃದ್ಧಿ ಖಾತೆ ಹಂಚಿಕೆ ಮಾಡದೇ ತಮ್ಮ ಬಳಿಯೇ ಇಟ್ಟುಕೊಂಡಿದ್ದರು.
ಇದೀಗ, ವಲಸಿಗ ಶಾಸಕ ಭೈರತಿ ಬಸವರಾಜ್ ಗೆ ಬೆಂಗಳೂರು ನಗರಾಭಿವೃದ್ಧಿಯಂತಹ ಮಹತ್ವದ ಖಾತೆ ಕೊಟ್ಟಲ್ಲಿ ಬೆಂಗಳೂರಿನ ಬಿಜೆಪಿ ಶಾಸಕರು ಮುನಿಸಿಕೊಳ್ಳುವ ಸಾಧ್ಯತೆಯಿದೆ. ಗಮನಾರ್ಹವೆಂದ್ರೆ ಕಂದಾಯ ಸಚಿವ ಆರ್. ಅಶೋಕ್ ಸಹ ಬೆಂಗಳೂರು ನಗರಾಭಿವೃದ್ಧಿ ಖಾತೆಯ ಮೇಲೆ ಹಿಂದೆಯೇ ಕಣ್ಣಿಟ್ಟಿದ್ದರು.

Published On - 1:54 pm, Tue, 10 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us