AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೊಸ ಪ್ರಕರಣಗಳಲ್ಲಿ ಇಳಿಕೆಯಾಗಿದ್ದರೂ ಮರಣ ಪ್ರಮಾಣ ಕಡಿಮೆ ಆಗಿಲ್ಲ; ಕಾರಣವೇನು?

ಕರ್ನಾಟಕದಲ್ಲಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತು ಪಾಸಿಟಿವಿಟಿ ಪ್ರಮಾಣ ಇಳಿಕೆಯಾಗುತ್ತಿದೆ. ಆದರೆ, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಸಂಖ್ಯೆಯಲ್ಲಿ ಅಂತಹಾ ಇಳಿಕೆ ಕಂಡುಬಂದಿಲ್ಲ.

ಕೊರೊನಾ ಹೊಸ ಪ್ರಕರಣಗಳಲ್ಲಿ ಇಳಿಕೆಯಾಗಿದ್ದರೂ ಮರಣ ಪ್ರಮಾಣ ಕಡಿಮೆ ಆಗಿಲ್ಲ; ಕಾರಣವೇನು?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 07, 2021 | 7:58 PM

Share

ಬೆಂಗಳೂರು: ಲಾಕ್​ಡೌನ್ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ. ಹೊಸ ಕೊವಿಡ್-19 ಪ್ರಕರಣಗಳು ಪ್ರತಿನಿತ್ಯ ಕಡಿಮೆ ವರದಿಯಾಗುತ್ತಿದೆ. ಬೆಂಗಳೂರಿನಲ್ಲಿ ಲಾಕ್​ಡೌನ್ ಆರಂಭದಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಕೊರೊನಾ ಕಂಡುಬರುತ್ತಿದ್ದವು. ಆದರೆ, ಈಗ ಸುಮಾರು 2 ಸಾವಿರದ ಆಸುಪಾಸಿನಲ್ಲಿ ಪ್ರಕರಣಗಳು ವರದಿಯಾಗುತ್ತಿದೆ. ಹೀಗಿದ್ದರೂ ಕೂಡ ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿ ಇಳಿಕೆಯಾಗಿಲ್ಲ.

ಬೆಂಗಳೂರಿನಲ್ಲಿ ಕೊವಿಡ್ ಮೊದಲ ಅಲೆ ಅಥವಾ ಕಳೆದ ತಿಂಗಳಿನಲ್ಲಿ ಕೊರೊನಾದಿಂದ ಮರಣಿಸುತ್ತಿದ್ದವರ ಸಂಖ್ಯೆಗಿಂತ ಈಗ ಸಾವನ್ನಪ್ಪುತ್ತಿರುವವರ ಸಂಖ್ಯೆ ಬಹಳ ಅಧಿಕವಾಗಿದೆ. ಇಡೀ ಕರ್ನಾಟಕಕ್ಕೆ ಹೋಲಿಸಿದರೂ ಬೆಂಗಳೂರಿನ ಮರಣ ಪ್ರಮಾಣ ಅಧಿಕವಾಗಿದೆ. ಕರ್ನಾಟಕ ರಾಜ್ಯದಲ್ಲಿ ಕೊರೊನಾ ಮರಣ ಪ್ರಮಾಣ ಶೇಕಡಾ 2.62 ರಷ್ಟು ಇದ್ದರೆ, ಬೆಂಗಳೂರಿನಲ್ಲೇ ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಪ್ರಮಾಣ ಶೇಕಡಾ 7.71ರಷ್ಟಿದೆ.

ಈ ಬಗ್ಗೆ ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ ಮಾತನಾಡಿದ್ದಾರೆ. ಕೊರೊನಾದಿಂದ ಈಗ ಸಂಭವಿಸುತ್ತಿರುವ ಸಾವುಗಳು ಕೆಲವು ದಿನಗಳ ಹಿಂದೆ ಕಂಡುಬಂದ ಪ್ರಕರಣಗಳದ್ದಾಗಿದೆ ಎಂದು ತಿಳಿಸಿದ್ದಾರೆ. ಕೆಲ ದಿನಗಳಿಂದ ಬೆಂಗಳೂರಿನಲ್ಲಿ 3 ಸಾವಿರಕ್ಕಿಂತಲೂ ಕಡಿಮೆ ಕೊವಿಡ್ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಆದರೆ, ಸಾವನ್ನಪ್ಪುತ್ತಿರುವವರ ಸಂಖ್ಯೆ 300ರ ಆಸುಪಾಸಿನಲ್ಲೇ ದಾಖಲಾಗುತ್ತಿದೆ.

ಕರ್ನಾಟಕದಲ್ಲಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತು ಪಾಸಿಟಿವಿಟಿ ಪ್ರಮಾಣ ಇಳಿಕೆಯಾಗುತ್ತಿದೆ. ಆದರೆ, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಸಂಖ್ಯೆಯಲ್ಲಿ ಅಂತಹಾ ಇಳಿಕೆ ಕಂಡುಬಂದಿಲ್ಲ. ಈಗ ಸುಮಾರು ಶೇಕಡಾ 80ರಷ್ಟು ವಾರ್ಡ್ ಬೆಡ್​ಗಳು ಖಾಲಿ ಇವೆ ಹಾಗೂ ಶೇಕಡಾ 50ರಷ್ಟು ಆಕ್ಸಿಜನ್ ಬೆಡ್​ಗಳು ಕೂಡ ಖಾಲಿ ಇವೆ ಎಂದು ಕರ್ನಾಟಕ ಕೊವಿಡ್ ಸಲಹಾ ಸಮಿತಿ ಸದಸ್ಯ ಡಾ. ವಿಶಾಲ್ ರಾವ್ ತಿಳಿಸಿದ್ದಾರೆ.

ಇಷ್ಟಾದರೂ ಐಸಿಯು ಬೆಡ್​ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಕಡಿಮೆ ಆಗಿಲ್ಲ. ಶೇಕಡಾ 80ರಷ್ಟು ಐಸಿಯು ಬೆಡ್​ಗಳು ಭರ್ತಿಯಾಗೇ ಇವೆ. ಐಸಿಯುಗೆ ದಾಖಲಾಗುವ ಸೋಂಕಿತರು ಗುಣಮುಖರಾಗಲು ದೀರ್ಘ ಸಮಯ ತಗುಲುತ್ತದೆ ಎಂದು ಅವರು ಹೇಳಿದ್ದಾರೆ.

ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಕೂಡ ಇದೇ ಹೇಳಿಕೆ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಐಸಿಯುಗೆ ದಾಖಲಾದ ಸೋಂಕಿತರು ಈಗ ಸಾವನ್ನಪ್ಪುತ್ತಿದ್ದಾರೆ. ಹಾಗಾಗಿ, ಹೊಸ ಪ್ರಕರಣಗಳು ಕಡಿಮೆ ಆಗಿದ್ದರೂ ಮರಣ ಪ್ರಮಾಣ ಇಳಿಕೆಯಾಗಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Corona Vaccine: ಕೊರೊನಾ ಲಸಿಕೆ ಪಡೆಯುವ ಮೊದಲು ಮತ್ತು ನಂತರ ಪಾಲಿಸಬೇಕಾದ ಅಂಶಗಳೇನು? ಇಲ್ಲಿದೆ ವಿವರ

PM Modi Speech: ಭಾರತದ ಎಲ್ಲ ನಾಗರಿಕರಿಗೂ ಉಚಿತ ಲಸಿಕೆ: ಪ್ರಧಾನಿ ನರೇಂದ್ರ ಮೋದಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ