AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಮ್ ಬಂದ್ ನಿರ್ಧಾರ ವಾಪಸ್; ಆದರೆ ಷರತ್ತುಗಳು ಅನ್ವಯ

ಜಿಮ್​ಗಳಲ್ಲಿ ಶೇಕಡಾ 50ರಷ್ಟು ಅವಕಾಶ ನೀಡಿ, ಕೊರೊನಾ ಮಾರ್ಗಸೂಚಿ ಪಾಲಿಸುವಂತೆ ರಾಜ್ಯ ಸರ್ಕಾರ ತಿಳಿಸಿದೆ. ಜಿಮ್​ಗಳಲ್ಲಿ ಉಪಕರಣಗಳನ್ನ ಸ್ಯಾನಿಟೈಸ್​​​ ಮಾಡಬೇಕು ಎಂದು ಜಿಮ್​ಗಳಿಗೆ ಹೊರಡಿಸಿದ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ ಸೂಚಿಸಿದೆ.

ಜಿಮ್ ಬಂದ್ ನಿರ್ಧಾರ ವಾಪಸ್; ಆದರೆ ಷರತ್ತುಗಳು ಅನ್ವಯ
ಜಿಮ್ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: ganapathi bhat

Updated on:Apr 05, 2022 | 12:53 PM

ಬೆಂಗಳೂರು: ಜಿಮ್​ಗಳ ಮೇಲೆ ಹೇರಿದ್ದ ಸಂಪೂರ್ಣ ನಿರ್ಬಂಧವನ್ನು ಪರಿಶ್ಕರಿಸಿ ರಾಜ್ಯ ಸರ್ಕಾರ ಇಂದು (ಏಪ್ರಿಲ್ 4) ನೂತನ ಆದೇಶ ಹೊರಡಿಸಿದೆ. ಜಿಮ್​ಗಳನ್ನು ಸಂಪೂರ್ಣವಾಗಿ ಬಂದ್ ಮಾಡಬೇಕು ಎಂದು ರಾಜ್ಯ ಸರ್ಕಾರ ಈ ಮೊದಲು ಹೇಳಿತ್ತು. ಆದರೆ, ಈ ನಿಯಮಕ್ಕೆ ಜಿಮ್ ಅಸೋಸಿಯೇಷನ್​ನಿಂದ ಆಕ್ಷೇಪ ವ್ಯಕ್ತವಾಗಿತ್ತು. ಸಿನಿಮಾ ಹಾಲ್​ಗಳಿಗೆ ನೀಡಿದಂತೆ ಜಿಮ್​ಗಳಿಗೂ ಶೇಕಡಾ 50ರಷ್ಟು ಅವಕಾಶ ನೀಡಿ ಎಂದು ಜಿಮ್ ಅಸೋಸಿಯೇಷನ್ ಮನವಿ ಮಾಡಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಆದೇಶವನ್ನು ಇಂದು ಹೊರಡಿಸಿದೆ. ಜಿಮ್​ಗಳಲ್ಲಿ ಶೇಕಡಾ 50ರಷ್ಟು ಅವಕಾಶ ನೀಡಿ, ಕೊರೊನಾ ಮಾರ್ಗಸೂಚಿ ಪಾಲಿಸುವಂತೆ ರಾಜ್ಯ ಸರ್ಕಾರ ತಿಳಿಸಿದೆ. ಜಿಮ್​ಗಳಲ್ಲಿ ಉಪಕರಣಗಳನ್ನ ಸ್ಯಾನಿಟೈಸ್​​​ ಮಾಡಬೇಕು ಎಂದು ಜಿಮ್​ಗಳಿಗೆ ಹೊರಡಿಸಿದ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ ಸೂಚಿಸಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಸೋಂಕು ಹರಡುವ ವೇಗಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರದಿಂದ ಏಪ್ರಿಲ್ 2ರಂದು ಹೊಸ ಮಾರ್ಗಸೂಚಿ ಪ್ರಕಟವಾಗಿತ್ತು. 8 ಜಿಲ್ಲೆಗಳಲ್ಲಿ ಸಿನಿಮಾ ಹಾಲ್​, ಬಾರ್, ಪಬ್​, ಕ್ಲಬ್, ರೆಸ್ಟೊರೆಂಟ್​ಗೆ ಶೇ 50ರಷ್ಟು ನಿರ್ಬಂಧ ವಿಧಿಸಲಾಗಿತ್ತು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಲ್ಲಿ ಈ ನಿಯಮಗಳು ಅನ್ವಯವಾಗಲಿದೆ ಎಂದು ಸೂಚಿಸಲಾಗಿತ್ತು.

ಇದೀಗ ಏಪ್ರಿಲ್ 7ರ ವರೆಗೆ ಸಿನಿಮಾ ಹಾಲ್​ಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಅನುಮತಿ ನೀಡಿದ್ದು, ಜಿಮ್​ಗಳಲ್ಲಿ ಕೂಡ ಸಂಪೂರ್ಣ ನಿರ್ಬಂಧ ತೆರವು ಮಾಡಿ, ಶೇ. 50ರಷ್ಟು ಅವಕಾಶ ನೀಡಿ ಆದೇಶ ಹೊರಡಿಸಿದೆ.

6ರಿಂದ 9ನೇ ತರಗತಿಯವರೆಗೆ ಶಾಲೆಗಳು ಕಾರ್ಯನಿರ್ವಹಿಸುವುದಿಲ್ಲ. ವಿದ್ಯಾಗಮ ಸೇರಿದಂತೆ ಎಲ್ಲಾ ಶೈಕ್ಷಣಿಕ ಚಟುವಟಿಕೆ ಬಂದ್ ಆಗಲಿದೆ. ಏಪ್ರಿಲ್ 20ರವರೆಗೆ ಪ್ರಸ್ತುತ ಮಾರ್ಗಸೂಚಿ ಅನ್ವಯವಾಗಲಿದೆ. ಉಳಿದಂತೆ ಇತರ ನಗರಗಳ ಪಬ್‌, ಬಾರ್‌ಗಳಲ್ಲಿ ಮಾಸ್ಕ್‌, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು, ಜಾತ್ರೆ, ಮೇಳಗಳು, ಗುಂಪು ಸೇರುವುದು ನಿಷೇಧ ಮುಂದುವರಿಯಲಿದೆ. ಸಭೆ, ಸಮಾರಂಭ ಆಚರಣೆಗೆ ಮಾರ್ಚ್ 12ರ ಸುತ್ತೋಲೆ ಅನ್ವಯವಾಗಲಿದೆ ಎಂದು ತಿಳಿಸಿತ್ತು.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಕಡ್ಡಾಯ. ಅಂತರ ಕಾಪಾಡಿಕೊಳ್ಳುವ ವಿಚಾರದಲ್ಲಿ ಜನರು ಎಚ್ಚರ ವಹಿಸಬೇಕು. ಈ ನಿಯಮಗಳನ್ನು ಪೊಲೀಸರು, ಸ್ಥಳೀಯ ಆಡಳಿತ ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಸೂಚಿಸಲಾಗಿತ್ತು. ಕೊರೊನಾ ತಡೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದ್ದು, ಅದರನ್ವಯ ಯಾವುದೇ ರೀತಿಯ ಜಾಥಾ, ಮುಷ್ಕರ, ಧರಣಿ ನಡೆಸುವುದನ್ನು ನಿಷೇಧ ಮಾಡಲಾಗಿದೆ. ಸಾರಿಗೆ ಬಸ್‌ಗಳಲ್ಲಿ ನಿಗದಿತ ಆಸನದಷ್ಟೇ ಜನರನ್ನು ಕೊಂಡೊಯ್ಯಬೇಕು. ಸಾಧ್ಯವಾದ ಮಟ್ಟಿಗೂ ಮನೆಯಿಂದಲೇ ಕಚೇರಿ ಕೆಲಸ  (ವರ್ಕ್​ಫ್ರಂ) ಸೌಲಭ್ಯ ಬಳಸಿಕೊಳ್ಳಬೇಕು ಎಂದು ಸರ್ಕಾರ ಸೂಚಿಸಿತ್ತು.

ಇದನ್ನೂ ಓದಿ: ಯುವರತ್ನನಿಗೆ ರಿಲೀಫ್: ಏಪ್ರಿಲ್ 7ರವರೆಗೂ ಥಿಯೇಟರ್​ ಹೌಸ್ ಫುಲ್​ಗೆ ಅವಕಾಶ

ಇದನ್ನೂ ಓದಿ: ‘ಸಿಎಂ ಯಡಿಯೂರಪ್ಪ ನಿಜವಾದ ರಾಜಾಹುಲಿ’: ಹೌಸ್​ಫುಲ್ ಅವಕಾಶ ನೀಡಿದ್ದಕ್ಕೆ ಕೇಳಿಬಂತು ಹೊಗಳಿಕೆ

Published On - 6:00 pm, Sun, 4 April 21

ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ