AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೊಸ ಪ್ರಭೇದ ಆರ್ಭಟ: ಹೊಸ ವರ್ಷಾರಂಭದಿಂದ ಶಾಲೆ ಶುರುವಾಗುತ್ತಾ..? ಸಚಿವ ಸುರೇಶ್ ಕುಮಾರ್ ಹೇಳಿದ್ದೇನು?

ಯುಕೆಯಲ್ಲಿ ಕೊರೊನಾದ ಹೊಸ ಪ್ರಭೇದ ಪತ್ತೆಯಾಗಿದೆ. ಕರ್ನಾಟಕ ಸಹ ಕೊರೊನಾದ ಹೊಸ ರೂಪಾಂತರಕ್ಕೆ ಬೆಚ್ಚಿ ಬಿದ್ದಿದೆ. ಹೀಗಾಗಿ ರಾಜ್ಯದಲ್ಲಿ ಮುಂದಿನ ವರ್ಷವೂ ಶಾಲೆ ಬಾಗಿಲು ತೆರೆಯೋದು ಡೌಟಾ ಎಂಬ ಪ್ರಶ್ನೆ ಉದ್ಭವಿಸಿದೆ.

ಕೊರೊನಾ ಹೊಸ ಪ್ರಭೇದ ಆರ್ಭಟ: ಹೊಸ ವರ್ಷಾರಂಭದಿಂದ ಶಾಲೆ ಶುರುವಾಗುತ್ತಾ..? ಸಚಿವ ಸುರೇಶ್ ಕುಮಾರ್ ಹೇಳಿದ್ದೇನು?
ಆಯೇಷಾ ಬಾನು
|

Updated on:Dec 23, 2020 | 11:44 AM

Share

ಬೆಂಗಳೂರು: ಬ್ರಿಟನ್ನಿನಲ್ಲಿ ಕೊರೊನಾದ ಹೊಸ ಪ್ರಭೇದ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವಿಶ್ವದಾದ್ಯಂತ ಆತಂಕ ಹೆಚ್ಚಾಗಿದೆ. ಕರ್ನಾಟಕ ಸಹ ಕೊರೊನಾದ ಹೊಸ ರೂಪಾಂತರಕ್ಕೆ ಬೆಚ್ಚಿ ಬಿದ್ದಿದೆ. ಹೀಗಾಗಿ ರಾಜ್ಯದಲ್ಲಿ ವಿದೇಶದಿಂದ ಬರುವವರ ಮೇಲೆ ಹೆಚ್ಚಿನ ಗಮನವಹಿಸಲಾಗುತ್ತಿದೆ. ಸದ್ಯ ಇದರ ನಡುವೆ ಹೊಸ ಗೊಂದಲ ಸೃಷ್ಟಿಯಾಗಿದೆ.

ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆಯಲ್ಲಿ ಸರ್ಕಾರ ಜನವರ 1ರಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭಿಸಲು ತೀರ್ಮಾನಿಸಿತ್ತು. ಆದ್ರೆ ಈಗ ಮತ್ತೆ ಕೊರೊನಾದ ಹೊಸ ಪ್ರಭೇದದ ಅಟ್ಟಹಾಸ ಶುರುವಾಗಿದೆ. ಹೀಗಾಗಿ ರಾಜ್ಯದಲ್ಲಿ ಮುಂದಿನ ವರ್ಷವೂ ಶಾಲೆ ಬಾಗಿಲು ತೆರೆಯೋದು ಡೌಟಾ ಎಂಬ ಪ್ರಶ್ನೆ ಉದ್ಭವಿಸಿದೆ.

ಇದೀಗ ಮತ್ತೆ.. 2020-21 ಕೂಡ ಝೀರೋ ಶೈಕ್ಷಣಿಕ ವರ್ಷ ಆಗುತ್ತಾ? ಎಂಬ ಆತಂಕ ಪೋಷಕರಲ್ಲಿ ಮನೆ ಮಾಡಿದೆ. ಇನ್ನು 3 ತಿಂಗಳು ಕಳೆದ್ರೆ ಶೈಕ್ಷಣಿಕ ವರ್ಷವೇ ಕ್ಲೋಸ್ ಆಗುತ್ತೆ. ಇತ್ತ SSLC, PUC ವಿದ್ಯಾರ್ಥಿಗಳಿಗೆ ಎಕ್ಸಾಂ ಟೆನ್ಷನ್ ಕೂಡ ಇದೆ. ಕೊರೊನಾದಿಂದ ಈಗಾಗಲೇ 2020 ಶಾಲೆಗಳಿಲ್ಲದೆ ವಿದ್ಯಾರ್ಥಿಗಳು ಮನೆಯಲ್ಲೇ ಕೂರುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇದರ ನಡುವೆ ಈಗ 2021ಕ್ಕೆ ಕೊರೊನಾದ ಹೊಸ ಪ್ರಭೇದದ ಕಂಟಕ ಎದುರಾಗಿದೆ. ಈ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯುವ ಈ ಹಿಂದಿನ ನಿರ್ಧಾರಕ್ಕೆ ರಾಜ್ಯ ಸರ್ಕಾರ ಅಂಟಿಕೊಳ್ಳುತ್ತದಾ? ಅಥವಾ ತರಗತಿಗಳನ್ನು ಪುನರಾರಂಭಿಸುವ ಗೋಜಿಗೆ ಹೋಗುವುದಿಲ್ಲವಾ? ಎಂಬ ಚಿಂತೆಯ ಗೆರೆಗಳು ಮೂಡಿವೆ. ಹಿಂದಿನ ಸೂಚನೆಯಂತೆ ಹೊಸ ವರ್ಷಕ್ಕೆ ಶಾಲೆ ಆರಂಭವಾಗುತ್ತಾ.. ಅಥವಾ ಬ್ರಿಟನ್ ಭೂತಕ್ಕೆ ಹೆದರಿ ನಿರ್ಧಾರ ಬದಲಾಯಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಹೊಸ ಪ್ರಭೇದದ ಬಗ್ಗೆ ಆತಂಕಪಡುವ ಅವಶ್ಯಕತೆ ಇಲ್ಲ ಈಗಾಗಲೇ ನಿರ್ಧಾರವಾದಂತೆ ಜ.1ರಿಂದ ಶಾಲೆ ಆರಂಭವಾಗುತ್ತೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೊರೊನಾ ಹೊಸ ಪ್ರಭೇದದ ಬಗ್ಗೆ ತಜ್ಞರ ಜತೆ ಚರ್ಚೆ ನಡೆಸುತ್ತಿದ್ದೇವೆ. ಹೊಸ ಪ್ರಭೇದದ ಬಗ್ಗೆ ಕೇಂದ್ರ ಸಚಿವರಿಂದ ಮಾಹಿತಿ ಸಿಕ್ಕಿದೆ. ಇದರ ಬಗ್ಗೆ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ರು.

ಜನವರಿ 1ರಿಂದ ವಿದ್ಯಾಗಮ ಶಿಕ್ಷಣ ತರಗತಿ ಆರಂಭ: ನಿಯಮಗಳೇನು ಗೊತ್ತೇ?

Published On - 10:45 am, Wed, 23 December 20

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!