AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Disease: ಕೊವಿಡ್ ಹಾವಳಿಯ ಬೆನ್ನಲ್ಲೇ ಕರ್ನಾಟಕದ ಶಾಲಾ ಮಕ್ಕಳಲ್ಲಿ ಹೊಸ ರೋಗ ಪತ್ತೆ; ಆತಂಕದಲ್ಲಿ ಪೋಷಕರು

Karnataka News: ಕಳೆದ ಎರಡು ವರ್ಷಗಳಿಂದ ಕರ್ನಾಟಕದಲ್ಲಿ ಕೊವಿಡ್ ಹಾವಳಿ ಶುರುವಾದ ಬಳಿಕ ಶಾಲೆಗಳಲ್ಲಿ ಮಕ್ಕಳಿಗೆ ಹೊಸ ರೋಗ ಕಾಡುತ್ತಿದೆ. ಮಕ್ಕಳಿಂದ ಮಕ್ಕಳಿಗೆ ಹರಡುತ್ತಿರುವ ರೋಗದಿಂದ ಪೋಷಕರು ಕಂಗಾಲಾಗಿದ್ದಾರೆ.

New Disease: ಕೊವಿಡ್ ಹಾವಳಿಯ ಬೆನ್ನಲ್ಲೇ ಕರ್ನಾಟಕದ ಶಾಲಾ ಮಕ್ಕಳಲ್ಲಿ ಹೊಸ ರೋಗ ಪತ್ತೆ; ಆತಂಕದಲ್ಲಿ ಪೋಷಕರು
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Jul 15, 2022 | 9:05 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾವೈರಸ್​ ಪ್ರಕರಣಗಳ (Coronavirus Cases) ಸಂಖ್ಯೆ ಮತ್ತೆ ಹೆಚ್ಚುತ್ತಿದೆ. ನಿನ್ನೆ ಕರ್ನಾಟಕದಲ್ಲಿ 1,209 ಕೊವಿಡ್ ಕೇಸುಗಳು (Covid-19 Cases) ಪತ್ತೆಯಾಗಿವೆ. ಕಳೆದ ಎರಡು ವರ್ಷಗಳಿಂದ ಕರ್ನಾಟಕದಲ್ಲಿ ಕೊವಿಡ್ ಹಾವಳಿ ಶುರುವಾದ ಬಳಿಕ ಶಾಲೆಗಳಲ್ಲಿ ಮಕ್ಕಳಿಗೆ ಹೊಸ ರೋಗ ಕಾಡುತ್ತಿದೆ. ಮಕ್ಕಳಿಂದ ಮಕ್ಕಳಿಗೆ ಹರಡುತ್ತಿರುವ ರೋಗದಿಂದ ಪೋಷಕರು ಕಂಗಾಲಾಗಿದ್ದಾರೆ. ಕರ್ನಾಟಕದ ಶಾಲೆಗಳಲ್ಲಿ ಕೈ, ಕಾಲು ಮತ್ತು ಬಾಯಿ ರೋಗದ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ.

ಕೈ ಹಾಗೂ ಬಾಯಿ ಸುತ್ತಮುತ್ತ ಮಕ್ಕಳಿಗೆ ಗುಳ್ಳೆಗಳು ಕಾಣಿಸಿಕೊಳ್ಳುತ್ತಿದೆ. ಗುಳ್ಳೆಗಳು ಹಾಗೂ ಗಾಯಗಳಿಂದ ಮಕ್ಕಳಿಗೆ ತೀವ್ರ ಜ್ವರ ಕಾಣಿಸಿಕೊಳ್ಳುತ್ತಿದೆ. ಕೊವಿಡ್ ಹಾವಳಿ ಕಡಿಮೆಯಾಯ್ತು ಅಂತ ನಿರಾಳವಾಗಿದ್ದ ಪೋಷಕರು ಹೊಸ ವೈರಲ್ ರೋಗದ ಕಾಟದಿಂದ ಕಂಗೆಟ್ಟಿದ್ದಾರೆ. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಚಿಕ್ಕ ಮಕ್ಕಳಲ್ಲಿಯೇ ಈ ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ.

ಈ ಹೊಸ ರೋಗ ಮಕ್ಕಳಿಂದ ಮಕ್ಕಳಿಗೆ ಹರಡುತ್ತಿದ್ದು, ಪೋಷಕರ ಆತಂಕಕ್ಕೆ ಕಾರಣವಾಗಿದೆ. ಮುಂಗಾರು ಮಳೆಯ ಆರ್ಭಟ ಮತ್ತು ಬೆಂಗಳೂರಿನಲ್ಲಿ ಹಠಾತ್ ಹವಾಮಾನ ಬದಲಾವಣೆಯಿಂದ ಸೋಂಕುಗಳ ಉಲ್ಬಣವಾಗುತ್ತಿದೆ. ಕೈ, ಕಾಲು ಮತ್ತು ಬಾಯಿ ರೋಗದ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕ ಮಕ್ಕಳಲ್ಲಿ ಹೆಚ್ಚುತ್ತಿರುವ ಕೈ, ಕಾಲು ಮತ್ತು ಬಾಯಿ ರೋಗ ಪ್ರಕರಣಗಳ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಶಾಲೆಗಳು ಮಕ್ಕಳು ಹಾಗೂ ಪೋಷಕರಿಗೆ ಎಚ್ಚರಿಕೆ ನೀಡಲಾಗಿದೆ. ಈ ರೋಗ ಲಕ್ಷಣಗಳು ಮಕ್ಕಳಲ್ಲಿ ಕಂಡು ಬಂದರೆ ಸೂಕ್ತ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.

ಇದನ್ನೂ ಓದಿ: COVID-19 Updates: ಭಾರತದಲ್ಲಿ ಹೊಸ ಕೊವಿಡ್ ರೂಪಾಂತರಿ ಬಿಎ 2.75 ಪತ್ತೆ; WHO ಮಾಹಿತಿ

ಗುರುವಾರ 1,072 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಸೋಂಕಿಗೆ ಒಳಗಾಗಿದ್ದವರಲ್ಲಿ 39,36,160 ಮಂದಿ ಗುಣವಾಗಿದ್ದಾರೆ. ಪ್ರಸ್ತುತ ಕರ್ನಾಟದಲ್ಲಿ ಕೊರೊನಾವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 6,739ಕ್ಕೆ ಏರಿಕೆಯಾಗಿದೆ. ಕೊವಿಡ್‌ ಸೋಂಕಿನಿಂದಾಗಿ ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯಾದ್ಯಂತ ಇದುವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 40,084ಕ್ಕೆ ಏರಿಕೆಯಾಗಿದೆ. ಬೆಂಗಳೂರೊಂದರಲ್ಲೇ 1,068 ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ. ಬೆಳಗಾವಿಯಲ್ಲಿ 13, ಬಳ್ಳಾರಿಯಲ್ಲಿ 14, ಮೈಸೂರಿನಲ್ಲಿ 25, ಧಾರವಾಡದಲ್ಲಿ 18 ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ. ಉಳಿದ ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ಕೊವಿಡ್ ಪ್ರಕರಣಗಳು ದೃಢಪಟ್ಟಿವೆ.

Published On - 8:59 am, Fri, 15 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ