AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಯೋಜನೆಗೆ ಮತ್ತೆ ಡಿಪಿಆರ್ ಸಲ್ಲಿಸುತ್ತೇವೆ; ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ

ಸುಪ್ರೀಂ ಕೋರ್ಟ್‌ನಲ್ಲಿ ಮೇಕೆದಾಟು ಯೋಜನೆಗೆ ಮುನ್ನಡೆ ದೊರೆತಿದೆ. ಈ ಹಿನ್ನೆಲೆಯಲ್ಲಿ ಈ ಯೋಜನೆಯ ತುರ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಯಿತು. ಅರಣ್ಯ, ನೀರಾವರಿ, ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಹೊಸ ಡಿಪಿಆರ್ (ವಿವರವಾದ ಯೋಜನಾ ವರದಿ) ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮೇಕೆದಾಟು ಯೋಜನೆಗೆ ಮತ್ತೆ ಡಿಪಿಆರ್ ಸಲ್ಲಿಸುತ್ತೇವೆ; ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ
Dk Shivakumar Meeting
ಸುಷ್ಮಾ ಚಕ್ರೆ
|

Updated on: Nov 18, 2025 | 10:32 PM

Share

ಬೆಂಗಳೂರು, ನವೆಂಬರ್ 18: ಮೇಕೆದಾಟು ಯೋಜನೆ ಕುರಿತಾದ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಕೇಂದ್ರ ಸರಕಾರಕ್ಕೆ ಹೊಸದಾಗಿ ಡಿಪಿಆರ್ (ವಿವರವಾದ ಯೋಜನಾ ವರದಿ) ಸಲ್ಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಮಾಹಿತಿ ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ನಡೆದ ಮೇಕೆದಾಟು ಯೋಜನೆ ಅನುಷ್ಠಾನ ಕುರಿತಾದ ಅಧಿಕಾರಿಗಳ ಸಭೆ ಹಾಗೂ ಕಾವೇರಿ ನೀರಾವರಿ ನಿಗಮದ ನಿರ್ದೇಶಕರ ಮಂಡಳಿಯ ಮಹತ್ವದ ಸಭೆ ನಡೆಸಿದ ಬಳಿಕ ಮಾಹಿತಿ ನೀಡಿದ್ದಾರೆ.

ಕಾವೇರಿ ನೀರಾವರಿ ನಿಗಮ ಮಂಡಳಿ ಸಭೆ ಮಾಡಲಾಗಿದೆ. ಇದಕ್ಕೆ ಮೊದಲು, ಮೇಕೆದಾಟು ಯೋಜನೆ ಕುರಿತ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಈ ಯೋಜನೆಯನ್ನು ಹೇಗೆ ಮುಂದಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಚರ್ಚೆ ಮಾಡಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಹೊಸದಾಗಿ ಡಿಪಿಆರ್ ಸಲ್ಲಿಕೆ ಮಾಡಬೇಕಿದೆ. ಇದರಲ್ಲಿ ಯೋಜನೆಯ ಸಂಪೂರ್ಣ ವಿವರ, ಎಷ್ಟು ಅರಣ್ಯ ಪ್ರದೇಶ ಮುಳುಗಡೆಯಾಗಲಿದೆ ಎಂಬ ಮಾಹಿತಿಯನ್ನು ನೀಡಬೇಕು ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ನೂತನ ಐಟಿ ಸಿಟಿ ಎಂದ ಡಿಸಿಎಂ ಡಿಕೆಶಿ: ಎಲ್ಲಿ ನಿರ್ಮಾಣ?

“ಈ ಹಿಂದೆ ಸಲ್ಲಿಸಿದ್ದ ಡಿಪಿಆರ್ ಅನ್ನು ತಿರಸ್ಕರಿಸಿದ್ದರು. ಹೀಗಾಗಿ ಅದರಲ್ಲಿದ್ದ ಲೋಪದೋಷಗಳನ್ನು ಸರಿಪಡಿಸಿ ಹೊಸದಾಗಿ ಡಿಪಿಆರ್ ಸಲ್ಲಿಸುತ್ತೇವೆ. ಕಾನೂನು ಪ್ರಕಾರ ಯಾರ ಮುಂದೆ ಮಂಡಿಸಬೇಕೋ ಅವರ ಮುಂದೆ ಮಂಡಿಸುತ್ತೇವೆ” ಎಂದು ಡಿಸಿಎಂ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?