AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Academic Year; 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭ ವಿಳಂಬ?

ನಾಳೆಯಿಂದಲೇ ಶೈಕ್ಷಣಿಕೆ ವರ್ಷ ಆರಂಭವಾಗಬೇಕಿತ್ತು. ಆದರೆ ರಾಜ್ಯದಲ್ಲಿ ಲಾಕ್‌ಡೌನ್ ಇರುವ ಹಿನ್ನೆಲೆಯಲ್ಲಿ ಅದು ಕಷ್ಟಸಾಧ್ಯವಾಗುತ್ತಿದೆ. ನಾಳೆಯಿಂದ ಶಾಲೆಗೆ ಹಾಜರಾಗಲು ಶಿಕ್ಷಕರಿಗೆ ಹಾಗೂ ಶಾಲೆಯ ಪೂರ್ವ ಚಟುವಟಿಕೆ ತಯಾರಿಗೆ ಕರ್ತವ್ಯಕ್ಕೆ ಹಾಜರಾಗಲು ಇಲಾಖೆ ಈ ಹಿಂದೆಯೇ ಆದೇಶ ಹೊರಡಿಸಿದೆ. ಆದರೆ ರಾಜ್ಯದಲ್ಲಿ ಸಂಪೂರ್ಣ ಅನ್ಲಾಕ್ ಘೋಷಣೆಯಾಗಿಲ್ಲ. ಶಿಕ್ಷಕರು ಶಾಲೆಗಳಿಗೆ ಹೋಗುವುದಕ್ಕೆ ಬಸ್ ಸೌಲಭ್ಯವಿಲ್ಲ.

New Academic Year; 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭ ವಿಳಂಬ?
ಪ್ರಾತಿನಿಧಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Jun 14, 2021 | 10:57 AM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾದಂತಿದೆ. ಕಳೆದ ಎರಡು ವರ್ಷಗಳಿಂದ ಶಾಲೆ-ಕಾಲೇಜುಗಳ ಬಾಗಿಲು ತೆರೆದೇ ಇಲ್ಲ. ಇನ್ನು ಜೂನ್ 15ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಬೇಕಿತ್ತು. ಆದರೆ ಸದ್ಯದ ಪರಿಸ್ಥಿತಿ ನೋಡಿದರೆ ಈ ವರ್ಷ ಹೊಸ ಶೈಕ್ಷಣಿಕ ವರ್ಷ ಆರಂಭವಾಗುವುದು ಸಂಶಯವಾಗಿದೆ. ಕೆಲ ದಿನಗಳ ಹಿಂದೆ 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಮಾರ್ಗಸೂಚಿಯನ್ನು ಶಿಕ್ಷಣ ಇಲಾಖೆ ಬಿಡುಗಡೆಗೊಳಿಸಿತ್ತು. 2021ರ ಜುಲೈ 1ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಶಾಲಾ ಪ್ರವೇಶ, ದಾಖಲಾತಿ, ಆಂದೋಲನ, ಶಾಲಾ ಹಂತದ ವಾರ್ಷಿಕ ಕ್ರಿಯಾ ಯೋಜನೆಗೆ ಪೂರ್ವ ಸಿದ್ಧತೆಗೆ ಸೂಚನೆ ನೀಡಲಾಗಿತ್ತು. ಕೊರೊನಾ ಸಂದರ್ಭ ನೋಡಿಕೊಂಡು ಮುಂದಿನ ದಿನಗಳಲ್ಲಿ ಆಫ್‌ಲೈನ್ ಅಥವಾ ಆನ್‌ಲೈನ್ ತರಗತಿ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ ಕೈಗೊಳ್ಳಲಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿತ್ತು. ಆದರೆ ಈಗ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭ ವಿಳಂಬವಾಗಲಿದೆ.?

ನಾಳೆಯಿಂದಲೇ ಶೈಕ್ಷಣಿಕೆ ವರ್ಷ ಆರಂಭವಾಗಬೇಕಿತ್ತು. ಆದರೆ ರಾಜ್ಯದಲ್ಲಿ ಲಾಕ್‌ಡೌನ್ ಇರುವ ಹಿನ್ನೆಲೆಯಲ್ಲಿ ಅದು ಕಷ್ಟಸಾಧ್ಯವಾಗುತ್ತಿದೆ. ನಾಳೆಯಿಂದ ಶಾಲೆಗೆ ಹಾಜರಾಗಲು ಶಿಕ್ಷಕರಿಗೆ ಹಾಗೂ ಶಾಲೆಯ ಪೂರ್ವ ಚಟುವಟಿಕೆ ತಯಾರಿಗೆ ಕರ್ತವ್ಯಕ್ಕೆ ಹಾಜರಾಗಲು ಇಲಾಖೆ ಈ ಹಿಂದೆಯೇ ಆದೇಶ ಹೊರಡಿಸಿದೆ. ಆದರೆ ರಾಜ್ಯದಲ್ಲಿ ಸಂಪೂರ್ಣ ಅನ್ಲಾಕ್ ಘೋಷಣೆಯಾಗಿಲ್ಲ. ಶಿಕ್ಷಕರು ಶಾಲೆಗಳಿಗೆ ಹೋಗುವುದಕ್ಕೆ ಬಸ್ ಸೌಲಭ್ಯವಿಲ್ಲ. ಮಕ್ಕಳು ಕೂಡ ಶಾಲೆಗೆ ಹಾಜರಾಗುವುದಕ್ಕೆ ಸಮಸ್ಯೆ ಉಂಟಾಗಿದೆ. ಹೀಗಾಗಿ ಬಸ್ ಸಂಚಾರ ಆರಂಭವಾಗುವವರೆಗೆ ವರ್ಕ್ ಫ್ರಂ ಹೋಂ ನೀಡಲು ಶಿಕ್ಷಕರ ಸಂಘದಿಂದ ಮನವಿ ಮಾಡಿಕೊಂಡಿದ್ದಾರೆ.

ದಾಖಲಾತಿ ಪ್ರಕ್ರಿಯೆ ದಿನಾಂಕ ಮುಂದೂಡಿಕೆಯಾದರೆ ಶೈಕ್ಷಣಿಕ ವರ್ಷ ಕೂಡ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಜುಲೈ 1ರಿಂದಲೇ ತರಗತಿ ಆರಂಭವಾಗುವುದು ಅನುಮಾನವಾಗಿದೆ. ಈ ಬಗ್ಗೆ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮತ್ತೊಂದು ಆದೇಶ ಹೊರಡಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: Education Guidelines: ಜುಲೈ 1ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?