AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಅವಧಿಯಲ್ಲಿ ಮದುವೆ ನಡೆಸಲು ಹೊಸ ಗೈಡ್​ಲೈನ್ಸ್ ಬಿಡುಗಡೆ; ವಿವರ ಇಲ್ಲಿದೆ

ಲಾಕ್‌ಡೌನ್‌ ವೇಳೆ ಮದುವೆಗೆ 40 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಮದುವೆಗೆ ಹಾಜರಾಗುವವರಿಗೆ ಪಾಸ್‌ ಫಿಕ್ಸ್ ಮಾಡಿ ಆದೇಶ ಹೊರಡಿಸಲಾಗಿದೆ. ಮದುವೆ ಸಮಾರಂಭವನ್ನು ಅವರ ಮನೆಗಳಲ್ಲೇ ಮಾಡಬೇಕು ಎಂದು ಸೂಚಿಸಲಾಗಿದೆ.

ಲಾಕ್​ಡೌನ್ ಅವಧಿಯಲ್ಲಿ ಮದುವೆ ನಡೆಸಲು ಹೊಸ ಗೈಡ್​ಲೈನ್ಸ್ ಬಿಡುಗಡೆ; ವಿವರ ಇಲ್ಲಿದೆ
ಪ್ರಾತಿನಿಧಿಕ
TV9 Web
| Edited By: |

Updated on:Aug 23, 2021 | 12:43 PM

Share

ಬೆಂಗಳೂರು: ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಕಾರಣ ಹಾಗೂ ಸೋಂಕನ್ನು ನಿಯಂತ್ರಿಸುವ ಅನಿವಾರ್ಯತೆ ಇರುವುದರಿಂದ ಕಠಿಣ ಮಾರ್ಗಸೂಚಿಯನ್ನು ಸರ್ಕಾರ ಜಾರಿಗೊಳಿಸಿದೆ. 10ನೇ ತಾರೀಕಿನಿಂದ ಜಾರಿಯಲ್ಲಿರುವಂತೆ ಹೊಸ ನಿಯಮಾವಳಿಗಳನ್ನು ಸರ್ಕಾರ ರೂಪಿಸಿದೆ. ಇದೀಗ ಮದುವೆ ಸಮಾರಂಭಕ್ಕೆ ಸಂಬಂಧಿಸಿ ಹೊಸ ಗೈಡ್​ಲೈನ್ ಪ್ರಕಟವಾಗಿದೆ. ಅದರನ್ವಯ ಬದಲಿಯಾದ ನಿಯಮಾವಳಿಗಳು ಈ ಕೆಳಗಿನಂತಿದೆ.

ಲಾಕ್‌ಡೌನ್‌ ವೇಳೆ ಮದುವೆಗೆ 40 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಮದುವೆಗೆ ಹಾಜರಾಗುವವರಿಗೆ ಪಾಸ್‌ ಫಿಕ್ಸ್ ಮಾಡಿ ಆದೇಶ ಹೊರಡಿಸಲಾಗಿದೆ. ಮದುವೆ ಸಮಾರಂಭವನ್ನು ಅವರ ಮನೆಗಳಲ್ಲೇ ಮಾಡಬೇಕು ಎಂದು ಸೂಚಿಸಲಾಗಿದೆ. ಮದುವೆ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆ ತೋರಿಸಿ ಅಧಿಕಾರಿಗಳ ಅನುಮತಿ ಅಗತ್ಯವಾಗಿದೆ. ಬಿಬಿಎಂಪಿ ಅಥವಾ ತಹಶೀಲ್ದಾರ್‌ಗಳಿಂದ ಪಾಸ್ ಪಡೆದಿರಬೇಕು ಎಂದು ತಿಳಿಸಲಾಗಿದೆ.

ಮದುವೆಯಲ್ಲಿ ಭಾಗಿಯಾಗುವ 40 ಅತಿಥಿಗಳಿಗೂ ಪಾಸ್ ನೀಡಬೇಕು. ಪಾಸ್ ಹೊಂದಿರುವವರಿಗೆ ಮಾತ್ರವೇ ಮದುವೆಗೆ ಪ್ರವೇಶ. ಷರತ್ತು ಉಲ್ಲಂಘಿಸಿದ್ರೆ ಮದುವೆ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಮದುವೆ ಸಮಾರಂಭಕ್ಕೆ ಇನ್ನಷ್ಟು ಷರತ್ತು ಹೇರಿದೆ. ಜೊತೆಗೆ ಯಾವುದೇ ಕಾರಣಕ್ಕೂ ಪಾಸ್ ವರ್ಗಾಯಿಸುವಂತಿಲ್ಲ. ಪಾಸ್ ವರ್ಗಾಯಿಸಿದ್ರೆ ಕಠಿಣ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಲಾಗಿದೆ.

ಕಟ್ಟುನಿಟ್ಟಿನ ಕ್ರಮ ಅಗತ್ಯ ಸೂಕ್ತ ಮತ್ತು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡರೆ ಕೊವಿಡ್-19 ಸೋಂಕಿನ ಮೂರನೇ ಅಲೆಯನ್ನು ದೇಶದ ಎಲ್ಲಾ ಕಡೆ ಎದುರಿಸುವ ಪರಿಸ್ಥಿತಿ ಬರುವುದಿಲ್ಲ ಅಥವಾ ಎಲ್ಲೂ ಕೂಡ ಮೂರನೇ ಅಲೆ ಉಂಟಾಗದು. ಸ್ಥಳೀಯ ಮಟ್ಟದಲ್ಲಿ, ಜಿಲ್ಲೆಗಳಲ್ಲಿ, ರಾಜ್ಯಗಳಲ್ಲಿ ಹಾಗೂ ನಗರ ಸೇರಿದಂತೆ ಎಲ್ಲಾ ಕಡೆ ಎಷ್ಟು ಪರಿಣಾಮಕಾರಿಯಾಗಿ ಕೊರೊನಾ ವಿರುದ್ಧದ ನಿಯಮಾವಳಿಗಳನ್ನು ಅನುಸರಿಸಲು ಸಾಧ್ಯವಾಗುತ್ತದೆ ಎಂಬುದರ ಮೇಲೆ ಮೂರನೇ ಅಲೆಯ ಪ್ರಭಾವ, ಪರಿಣಾಮ ಅವಲಂಬಿತವಾಗಿದೆ ಎಂದು ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಕೆ. ವಿಜಯ ರಾಘವನ್ ನಿನ್ನೆ (ಮೇ 7) ಸಲಹೆ ಕೊಟ್ಟಿದ್ದಾರೆ.

ಈಗಿರುವ ರೂಪಾಂತರಿ ಕೊರೊನಾ ವಿರುದ್ಧ ಹೋರಾಡಲು ಲಸಿಕೆಯು ಸಾಮರ್ಥ್ಯ ಹೊಂದಿದೆ. ದೇಶದ ಹಾಗೂ ವಿಶ್ವದ ವಿಜ್ಞಾನಿಗಳು ರೂಪಾಂತರಿ ಕೊರೊನಾ ವಿರುದ್ಧ ಹೋರಾಡಲು ಲಸಿಕೆ ಸಂಶೋಧನೆ ನಡೆಸುತ್ತಿದ್ದಾರೆ ಎಂದು ವಿಜಯ ರಾಘವನ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ನಾವು ಕೊರೊನಾ ಸೋಂಕಿನ ವಿರುದ್ಧ ಒಗ್ಗಟ್ಟಾಗಿ ಹೋರಾಡುವುದು, ನಿಯಮಾವಳಿಗಳನ್ನು ಪಾಲಿಸುವುದು ಅಗತ್ಯವಾಗಿದೆ. ಎಲ್ಲರ ಸಹಕಾರದಿಂದ ಮಾತ್ರ ಈ ಸಾಂಕ್ರಾಮಿಕವನ್ನು ಹೊಡೆದೋಡಿಸಲು ಸಾಧ್ಯ ಎಂದು ಮರೆಯದೇ ವ್ಯವಹರಿಸಬೇಕಾಗಿದೆ.

ಇದನ್ನೂ ಓದಿ: ಲಾಕ್​ಡೌನ್ ನಿಯಮ ಜಾರಿಗೊಳಿಸಲು ಪೊಲೀಸರಿಗೆ ಸಂಪೂರ್ಣ ಅಧಿಕಾರ; ಸುಖಾಸುಮ್ಮನೆ ಬೀದಿಗಿಳಿಯುವಂತಿಲ್ಲ

ಲಾಕ್​ಡೌನ್ ಯಶಸ್ವಿಗೊಳಿಸಲು, ಕೊರೊನಾ ಸೋಂಕಿತರಿಗೆ ಸಹಾಯ ಮಾಡಲು ನಾವು ಸಿದ್ಧ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಳಿಕೆ

Published On - 10:33 pm, Sat, 8 May 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು