AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಥಮ, ದ್ವಿತೀಯ ಪಿಯು ಕಾಲೇಜ್ ತೆರೆಯಲು ಸರ್ಕಾರದಿಂದ ಮಾರ್ಗಸೂಚಿ ಪ್ರಕಟ; ನಿಯಮಗಳೇನು? ಇಲ್ಲಿದೆ ವಿವರ

College Reopen: ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಕ್ಕೆ ಮಾರ್ಗಸೂಚಿ ಪ್ರಕಟ ಮಾಡಲಾಗಿದೆ. ಕಾಲೇಜು ಆರಂಭಿಸುವ ಕುರಿತು ಸರ್ಕಾರದಿಂದ ಗೈಡ್​ಲೈನ್ಸ್ ಬಿಡುಗಡೆ ಆಗಿದೆ.

ಪ್ರಥಮ, ದ್ವಿತೀಯ ಪಿಯು ಕಾಲೇಜ್ ತೆರೆಯಲು ಸರ್ಕಾರದಿಂದ ಮಾರ್ಗಸೂಚಿ ಪ್ರಕಟ; ನಿಯಮಗಳೇನು? ಇಲ್ಲಿದೆ ವಿವರ
ಕಾಲೇಜು ಆರಂಭಕ್ಕೆ ಮಾರ್ಗಸೂಚಿ
TV9 Web
| Edited By: |

Updated on:Aug 18, 2021 | 8:29 PM

Share

ಬೆಂಗಳೂರು: ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಕ್ಕೆ ಮಾರ್ಗಸೂಚಿ ಪ್ರಕಟ ಮಾಡಲಾಗಿದೆ. ಕಾಲೇಜು ಆರಂಭಿಸುವ ಕುರಿತು ಸರ್ಕಾರದಿಂದ ಗೈಡ್​ಲೈನ್ಸ್ ಬಿಡುಗಡೆ ಆಗಿದೆ. ಶೇಕಡಾ 2 ಕ್ಕಿಂತ ಕಡಿಮೆ ಕೊರೊನಾ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಕಾಲೇಜು ತೆರೆಯಲು ಸೂಚಿಸಲಾಗಿದೆ. ಏಕಕಾಲದಲ್ಲಿ ಪ್ರಥಮ, ದ್ವಿತೀಯ ಪಿಯು ತರಗತಿ ನಡೆಸುವುದು ಎಂದು ಹೇಳಲಾಗಿದೆ. ವಾರದ ಮೊದಲ 3ದಿನ ಶೇಕಡಾ 50 ರಷ್ಟು ವಿದ್ಯಾರ್ಥಿಗಳಿಗೆ ಕ್ಲಾಸ್ ಮಾಡಬೇಕು. ಶೇಕಡಾ 50 ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರು ಆಗಬೇಕು. ಉಳಿದ ಶೇಕಡಾ 50 ರಷ್ಟು ವಿದ್ಯಾರ್ಥಿಗಳಿಗೆ ಮನೆಯಲ್ಲೇ ಆನ್​​ಲೈನ್​ ತರಗತಿ ನಡೆಸುವುದು. ಗುರುವಾರ, ಶುಕ್ರವಾರ, ಶನಿವಾರ ಉಳಿದ ಮಕ್ಕಳಿಗೆ ಕ್ಲಾಸ್​ ನಡೆಸುವ ಬಗ್ಗೆ ಸೂಚನೆ ಕೊಡಲಾಗಿದೆ.

ಆಗಸ್ಟ್ 23 ರಿಂದ ಪಿಯು ಕಾಲೇಜು ತರಗತಿಗಳು ಆರಂಭವಾಗಲಿದೆ. ಪ್ರಥಮ, ದ್ವಿತೀಯ ಪಿಯುಸಿ ತರಗತಿ ಏಕಕಾಲಕ್ಕೆ ಆರಂಭ ಆಗಲಿದೆ. ಪ್ರಥಮ, ದ್ವಿತೀಯ ಪಿಯುಸಿ ಆರಂಭಕ್ಕೆ ಮಾರ್ಗಸೂಚಿ ಪ್ರಕಟ ಆಗಿದೆ. ಕಾಲೇಜು ಆರಂಭಿಸುವ ಕುರಿತು ಸರ್ಕಾರದಿಂದ ಗೈಡ್​ಲೈನ್ಸ್ ನೀಡಲಾಗಿದೆ. ಅದರಂತೆ, ಶೇಕಡಾ 2 ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಕಾಲೇಜು ಓಪನ್ ಆಗಲಿದೆ. ಏಕಕಾಲದಲ್ಲಿ ಪ್ರಥಮ, ದ್ವಿತೀಯ ಪಿಯುಸಿ ತರಗತಿ ನಡೆಸುವುದು ಎಂದು ಹೇಳಲಾಗಿದೆ. ವಾರದ ಮೊದಲ 3ದಿನ ಶೇಕಡಾ 50 ರಷ್ಟು ವಿದ್ಯಾರ್ಥಿಗಳಿಗೆ ಮತ್ತು ನಂತರ ಶೇಕಡಾ 50 ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರು ಆಗಬಹುದು.

ಕಾಲೇಜು ಆರಂಭಕ್ಕೆ ಸೂಚಿಸಿದ ಮಾರ್ಗಸೂಚಿಯ ಇತರೆ ಅಂಶಗಳು ಇಲ್ಲಿದೆ:

  • ವಿದ್ಯಾರ್ಥಿಗಳ ಸಂಖ್ಯೆ 100 ಕ್ಕಿಂತ ಕಡಿಮೆ ಇರಬೇಕು
  • ವಿಶಾಲ ಕೊಠಡಿಗಳಿದ್ದರೆ ವಾರದ ಎಲ್ಲಾ ದಿನ ಭೌತಿಕ ತರಗತಿ ನಡೆಸಬಹುದು
  • ಕಾಲೇಜು ಆವರಣದಲ್ಲಿ ದೈಹಿಕ ಅಂತರ ಕಡ್ಡಾಯವಾಗಿರುತ್ತೆ
  • ಪ್ರಿನ್ಸಿಪಾಲ್, ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು
  • ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಪೋಷಕರ ಒಪ್ಪಿಗೆ ಬೇಕು
  • ವಿದ್ಯಾರ್ಥಿಗಳಿಗೆ ಕೊವಿಡ್​​-19 ನೆಗೆಟಿವ್ ವರದಿ ಕಡ್ಡಾಯ
  • ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿಗಳಿಂದ ಕೊವಿಡ್ ನಿಯಮಗಳ ಉಲ್ಲಂಘನೆಯಾಗದಂತೆ ಗಮನಿಸಬೇಕು
  • ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯ
  • ಕೆಮ್ಮುವಾಗ, ಸೀನುವಾಗ ಕರವಸ್ತ್ರ ಅಡ್ಡ ಹಿಡಿಯಬೇಕು, ಎಲ್ಲೆಂದರಲ್ಲಿ ಉಗುಳಬಾರದು
  • ಕಾಲೇಜು ಆರಂಭಕ್ಕೆ ಮುನ್ನ ಇಡೀ ಆವರಣ ಹಾಗೂ ಕೊಠಡಿಗಳನ್ನ ಸ್ಯಾನಿಟೈಸ್ ಮಾಡಬೇಕು
  • ಕೊವಿಡ್​ಗೆ ಬಳಸಿದ ಕಟ್ಟಡಗಳನ್ನ ಎರೆಡೆರಡು ಬಾರಿ ಸ್ಯಾನಿಟೈಸ್ ಮಾಡಬೇಕು
  • ಸಾಮೂಹಿಕ ಪ್ರಾರ್ಥನೆ, ಕ್ರೀಡೆ ಎಲ್ಲಾ ಚಟುವಟಿಕೆಗಳಿಗೆ ಕೋವಿಡ್ ನಿಯಮ ಕಡ್ಡಾಯ
  • ಪ್ರವೇಶ ಧ್ವಾರದಲ್ಲಿ ಥರ್ಮಲ್ ಸ್ಕ್ಯಾನರ್ ಹಾಗೂ ಸ್ಯಾನಿಟೈಸರ್ ಕಡ್ಡಾಯವಾಗಿ ಇರಬೇಕು

ಇದನ್ನೂ ಓದಿ: SSLC Exams: ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ವಿವರ ಇಲ್ಲಿದೆ

ಶೇಕಡಾ 2ಕ್ಕಿಂತ ಹೆಚ್ಚು ಕೊರೊನಾ ಪ್ರಕರಣ ಕಂಡುಬಂದರೆ ಅಂತಹ ಶಾಲೆ ಮುಚ್ಚಲಾಗುವುದು: ಕೆ ಸುಧಾಕರ್

Published On - 8:13 pm, Wed, 18 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು