AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆತಂಕ ಹೆಚ್ಚಳ; ಪಂಜಾಬ್, ಚಂಡೀಗಡದಿಂದ ಆಗಮಿಸುವ ಪ್ರಯಾಣಿಕರಿಗೂ ಕೊವಿಡ್ ನೆಗೆಟಿವ್ ಪತ್ರ ಕಡ್ಡಾಯ

ರಾಜ್ಯದಲ್ಲಿ ಇಂದು ಹೊಸದಾಗಿ 1,445 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,71,647ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾಗೆ 12,444 ಜನರು ಬಲಿಯಾಗಿದ್ದು, ಇಂದು ಸೋಂಕಿನಿಂದ 10 ಜನರ ಸಾವನ್ನಪ್ಪಿದ್ದಾರೆ.

ಕೊರೊನಾ ಆತಂಕ ಹೆಚ್ಚಳ; ಪಂಜಾಬ್, ಚಂಡೀಗಡದಿಂದ ಆಗಮಿಸುವ ಪ್ರಯಾಣಿಕರಿಗೂ ಕೊವಿಡ್ ನೆಗೆಟಿವ್ ಪತ್ರ ಕಡ್ಡಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 06, 2022 | 6:50 PM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಿಸಲು ಕೇರಳ ಮತ್ತು ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ಜಾರಿ ಮಾಡಿರುವ ನಿಯಮವನ್ನು ಪಂಜಾಬ್ ಮತ್ತು ಚಂಡೀಗಡದಿಂದ ಆಗಮಿಸುವ ಪ್ರಯಾಣಿಕರಿಗೂ ವಿಸ್ತರಿಸಲಾಗಿದ್ದು, ಈ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು 72 ಗಂಟೆಗಳಿಗಿಂತ ಹಳೆಯದಲ್ಲದ ಕೋವಿಡ್ ನೆಗಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ.

ರಾಜ್ಯದಲ್ಲಿ ಇಂದು ಹೊಸದಾಗಿ 1,445 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,71,647ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾಗೆ 12,444 ಜನರು ಬಲಿಯಾಗಿದ್ದು, ಇಂದು ಸೋಂಕಿನಿಂದ 10 ಜನರ ಸಾವನ್ನಪ್ಪಿದ್ದಾರೆ.

ಬೆಂಗಳೂರಲ್ಲಿ ಇಂದು ಒಂದೇ ದಿನ 886 ಜನರಿಗೆ ಸೋಂಕು ಪತ್ತೆಯಾಗಿದೆ. ತನ್ಮೂಲಕ ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,18,558ಕ್ಕೆ ಏರಿಕೆಯಾಗಿದೆ. ಹಾಗೂ ನಗರದಲ್ಲಿ ಸೋಂಕಿನಿಂದ ಇಂದು ನಾಲ್ವರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೊವಿಡ್​ನಿಂದ ತೀರಿಕೊಂಡವರ ಸಂಖ್ಯೆ 4,553 ಆಗಿದೆ.

ರಾಜ್ಯದ ಒಟ್ಟು ಸೋಂಕಿತರ ಪೈಕಿ 9,44,917 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ 14,267 ಮಂದಿ ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಮಾಹಿತಿ ನೀಡಿದೆ.

ಮಣಿಪಾಲ MIT ಕ್ಯಾಂಪಸ್​ನಲ್ಲಿ ಇಂದು 72 ಜನರಿಗೆ ಕೊರೊನಾ ದೃಢ ಉಡುಪಿ ಜಿಲ್ಲೆಯಲ್ಲಿ ಇಂದು 113 ಜನರಿಗೆ ಕೊರೊನಾ ದೃಢವಾಗಿದೆ. ಮಣಿಪಾಲದ MIT ಕ್ಯಾಂಪಸ್ ಒಂದರಲ್ಲೇ 72 ಜನರಿಗೆ ಕೊರೊನಾ ಪತ್ತೆಯಾಗಿದೆ. ಈ ಮೂಲಕ, ಎಂಐಟಿ ಕ್ಯಾಂಪಸ್​ನಲ್ಲಿ ಸೋಂಕಿತರ ಸಂಖ್ಯೆ 372ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ 190 ಜನರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಉಡುಪಿ DHO ಡಾ. ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.

ಕೊರೊನಾ ಪ್ರಕರಣಗಳ ಪ್ರಮಾಣ ಮತ್ತೆ ಏರಿಕೆಯಾಗುತ್ತಿದೆ. ಮಹಾರಾಷ್ಟ್ರ, ಕೇರಳ, ಪಂಜಾಬ್, ಚಂಡೀಗಢ, ರಾಜಸ್ಥಾನ್, ಗುಜರಾತ್ ಸಹಿತ ಕರ್ನಾಟಕದಲ್ಲೂ ಕೊವಿಡ್19 ಆತಂಕ ಹೆಚ್ಚಾಗಿದೆ. ಈ ನಡುವೆ, ನೆರೆಯ ರಾಜ್ಯವಾದ ತಮಿಳುನಾಡಿನಲ್ಲಿ ಎಲ್ಲಾ‌ ಕಾಲೇಜುಗಳಿಗೆ ಇಂದು (ಮಾರ್ಚ್ 22) ರಜೆ ಘೋಷಣೆ ಮಾಡಲಾಗಿದೆ. ಆನ್‌ಲೈನ್‌ ತರಗತಿಗಳನ್ನು ಮಾತ್ರ ನಡೆಸುವಂತೆ ಸೂಚನೆ ನೀಡಲಾಗಿದೆ. ನಿನ್ನೆಯಷ್ಟೇ 9, 10, 11ನೇ ತರಗತಿ ಶಾಲೆಗಳಿಗೆ ರಜೆ ನೀಡಲಾಗಿತ್ತು.

ಇದನ್ನೂ ಓದಿ: ಕೋವಿಶೀಲ್ಡ್ ಎರಡು ಡೋಸ್​ ನಡುವಿನ ಅಂತರ 6-8 ವಾರಗಳಿಷ್ಟಿರಬೇಕು ಎಂದ ಕೇಂದ್ರ ಸರ್ಕಾರ

ಉತ್ತರಾಖಂಡ ಮುಖ್ಯಮಂತ್ರಿ ತೀರಥ್​ ಸಿಂಗ್ ರಾವತ್​ಗೆ ಕೊರೊನಾ ಸೋಂಕು; ದೆಹಲಿ ಭೇಟಿ ರದ್ದು

Published On - 10:38 pm, Mon, 22 March 21

ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌