AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಬೊಮ್ಮಾಯಿ ಸಂಪುಟದಲ್ಲಿ ಹೊಸಬರಿಗೆ ಭರ್ಜರಿ ಖಾತೆ; ಹಳಬರಿಗೂ ಸೂಕ್ತ ಮನ್ನಣೆ; ವಿವರ ಇಲ್ಲಿದೆ

ಹಾಗೆಯೇ ಬಿ.ಸಿ.ಪಾಟೀಲ್-ಕೃಷಿ, ಎಸ್.ಟಿ.ಸೋಮಶೇಖರ್-ಸಹಕಾರ, ಡಾ.ಕೆ.ಸುಧಾಕರ್-ಆರೋಗ್ಯ, ವೈದ್ಯಕೀಯ ಶಿಕ್ಷಣ, ಕೆ.ಗೋಪಾಲಯ್ಯ-ಅಬಕಾರಿ, ಎಂಟಿಬಿ ನಾಗರಾಜ್-ಪೌರಾಡಳಿತ, ಸಣ್ಣ ಕೈಗಾರಿಕೆ ಖಾತೆಗಳಲ್ಲಿ ಮುಂದುವರಿಸಲಾಗಿದೆ.

ಮುಖ್ಯಮಂತ್ರಿ  ಬೊಮ್ಮಾಯಿ ಸಂಪುಟದಲ್ಲಿ ಹೊಸಬರಿಗೆ ಭರ್ಜರಿ ಖಾತೆ; ಹಳಬರಿಗೂ ಸೂಕ್ತ ಮನ್ನಣೆ; ವಿವರ ಇಲ್ಲಿದೆ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Aug 07, 2021 | 12:49 PM

Share

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಸ್ವತಃ ಸಿಎಂ ಬೊಮ್ಮಾಯಿ ಅವರು ಬೆಂಗಳೂರು ನಗರ ಅಭಿವೃದ್ಧಿ ಖಾತೆ, ಆರ್ಥಿಕ, ಸಂಸದೀಯ ವ್ಯವಹಾರ ಹಾಗೂ ಡಿಪಿಎಆರ್ ಹಾಗೂ ಹಂಚಿಕೆ ಆಗದ ಖಾತೆಗಳನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಇನ್ನು ಆರ್.ಅಶೋಕ್ ಅವರನ್ನು ಕಂದಾಯ ಖಾತೆಯಲ್ಲಿ, ವಿ.ಸೋಮಣ್ಣ ಅವರನ್ನು ವಸತಿ ಹಾಗೂ ಮೂಲಸೌಕರ್ಯ ಖಾತೆಯಲ್ಲಿಯೇ ಮುಂದುವರಿಸಿದ್ದಾರೆ. ಕೆ.ಎಸ್.ಈಶ್ವರಪ್ಪ ಅವರನ್ನು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಖಾತೆಯಲ್ಲಿ ಮುಂದುವರಿಸಲಾಗಿದೆ. ಹಿರಿಯ ಸಚಿವ ಗೋವಿಂದ ಕಾರಜೋಳ ಅವರಿಗೆ ಈ ಹಿಂದೆ ತಾವು ನಿರ್ವಹಿಸುತ್ತಿದ್ದ ಜಲಸಂಪನ್ಮೂಲ ಖಾತೆಯನ್ನು ನೀಡಲಾಗಿದೆ.

ಹಾಗೆಯೇ ಬಿ.ಸಿ.ಪಾಟೀಲ್-ಕೃಷಿ, ಎಸ್.ಟಿ.ಸೋಮಶೇಖರ್-ಸಹಕಾರ, ಡಾ.ಕೆ.ಸುಧಾಕರ್-ಆರೋಗ್ಯ, ವೈದ್ಯಕೀಯ ಶಿಕ್ಷಣ, ಕೆ.ಗೋಪಾಲಯ್ಯ-ಅಬಕಾರಿ, ಎಂಟಿಬಿ ನಾಗರಾಜ್- ಪೌರಾಡಳಿತ, ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಖಾತೆಗಳಲ್ಲಿ ಮುಂದುವರಿಸಲಾಗಿದೆ.

ಇನ್ನು ಹೊಸದಾಗಿ ತಮ್ಮ ಮಂತ್ರ ಮಂಡಲಕ್ಕೆ ಸೇರಿಸಿಕೊಡಿರುವ ಸಚಿವರಿಗೂ ಸಹ ಮಹತ್ವದ ಖಾತೆಗಳನ್ನು ನೀಡಿದ್ದಾರೆ. ಬಿ.ಸಿ.ನಾಗೇಶ್ ಅವರಿಗೆ ಸುರೇಶ್​ ಕುಮಾರ್​ ಅವರು ನಿರ್ವಹಿಸುತ್ತಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ ವಹಿಸಲಾಗಿದೆ. ವಿ. ಸುನಿಲ್ ​ಕುಮಾರ್ ಅವರಿಗೆ ಮಹತ್ವದ ಇಂಧನ ಖಾತೆ ನೀಡಲಾಗಿದೆ. ಆರಗ ಜ್ಞಾನೇಂದ್ರ ಅವರಿಗೆ ಪ್ರಮುಖ ಗೃಹ ಖಾತೆಯನ್ನು ನೀಡಲಾಗಿದೆ. ಮುನಿರತ್ನ ಅವರಿಗೆ ತೋಟಗಾರಿಕೆ ಹಾಗೂ ಸಂಖ್ಯಾಶಾಸ್ತ್ರ ಖಾತೆ, ಹಾಲಪ್ಪ ಆಚಾರ್ ಅವರಿಗೆ ಗಣಿ & ಭೂವಿಜ್ಞಾನ, ಮಹಿಳಾ & ಮಕ್ಕಳ ಕಲ್ಯಾಣ, ವಿಶೇಷ ಚೇತನ, ಹಿರಿಯ ನಾಗರಿಕರ ಕಲ್ಯಾಣ ಖಾತೆ ವಹಿಸಲಾಗಿದೆ.

ಬಿ.ಶ್ರೀರಾಮುಲುಗೆ ಸಾರಿಗೆ ಖಾತೆ: ಜೆ.ಸಿ.ಮಾಧುಸ್ವಾಮಿ -ಸಣ್ಣ ನೀರಾವರಿ, ಕಾನೂನು ಜತೆಗೆ ಸಂಸದೀಯ ವ್ಯವಹಾರ, ಶಾಸನ ಖಾತೆ, ಉಮೇಶ್ ಕತ್ತಿ ಅವರಿಗೆ ಅರಣ್ಯ ಹಾಗೂ ಆಹಾರ-ನಾಗರಿಕ ಪೂರೈಕೆ ಖಾತೆ, ಡಾ. ಸಿ.ಎನ್.ಅಶ್ವತ್ಥ್ ನಾರಾಯಣ ಅವರಿಗೆ ಉನ್ನತ ಶಿಕ್ಷಣ ಖಾತೆ, IT ಅಂಡ್ BT, ವಿಜ್ಞಾನ & ತಂತ್ರಜ್ಞಾನ ಕೌಶಲ್ಯಾಭಿವೃದ್ಧಿ ಖಾತೆ, ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ, ಪರಿಸರ ಹಾಗೂ ಜೀವಶಾಸ್ತ್ರ ಖಾತೆ , ಪ್ರಭು ಚೌಹಾಣ್ ಪಶುಸಂಗೋಪನೆ, ಮುರುಗೇಶ್ ನಿರಾಣಿ ಅವರಿಗೆ ಬೃಹತ್ -ಮಧ್ಯಮ ಕೈಗಾರಿಕೆ, ಶಿವರಾಮ್ ಹೆಬ್ಬಾರ್ ಅವರಿಗೆ ಕಾರ್ಮಿಕ ಖಾತೆ, ಎಸ್.ಅಂಗಾರ ಅವರಿಗೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಜವಾಬ್ದಾರಿ ವಹಿಸಲಾಗಿದೆ. ಬಿ.ಶ್ರೀರಾಮುಲುಗೆ ಸಾರಿಗೆ ಖಾತೆ ಜತೆಗೆ ಪರಿಶಿಷ್ಟ ಪಂಗಡದ ಅಭಿವೃದ್ಧಿ ಖಾತೆ ನೀಡಲಾಗಿದೆ.

ಕೋಟ ಶ್ರೀನಿವಾಸ ಪೂಜಾರಿ- ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಅಭಿವೃದ್ಧಿ, ಕೆ.ಸಿ.ನಾರಾಯಣಗೌಡ-ಕ್ರೀಡೆ, ಭೈರತಿ ಬಸವರಾಜ್-ನಗರಾಭಿವೃದ್ಧಿ, ಸಿ.ಸಿ.ಪಾಟೀಲ್-ಲೋಕೋಪಯೋಗಿ ಮತ್ತು ಶಂಕರ ಪಾಟೀಲ್ ಮುನೇನಕೊಪ್ಪ- ಜವಳಿ ಹಾಗೂ ಕೈಮಗ್ಗ ಹಾಗೂ ಸಕ್ಕರೆ ಖಾತೆ ನೀಡಲಾಗಿದೆ. ಶಶಿಕಲಾ ಜೊಲ್ಲೆಗೆ ಈ ಬಾರಿ ಮುಜರಾಯಿ ಮತ್ತು ಹಜ್‌ ಹಾಗೂ ವಕ್ಫ್ ಖಾತೆ ಹಂಚಿಕೆಯಾಗಿದೆ.

29 ಸಚಿವರಿಗೆ ಖಾತೆ ಹಂಚಿಕೆ; ಹಣಕಾಸು ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ತನ್ನಲ್ಲಿಯೇ ಉಳಿಸಿಕೊಂಡ ಸಿಎಂ ಬೊಮ್ಮಾಯಿ

(new ministers like Araga Jnanendra, Sunil Kumar, halappa achar in cm basavaraj bommai cabinet get plum posts)

Published On - 12:07 pm, Sat, 7 August 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?