AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ಬಾಕಿ ವಸೂಲಿಗೆ ಹೊಸ ಪ್ಲಾನ್; ಸ್ವಸಹಾಯ ಸಂಘಗಳ ಮೊರೆ ಹೋದ ಸರ್ಕಾರ!

ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹರಸಾಹಸಪಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದೆಡೆ ತೆರಿಗೆ ಬಾಕಿಯನ್ನು ವಸೂಲಿ ಮಾಡುವುದೂ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದಕ್ಕೆ ಇದೀಗ ಸರ್ಕಾರ ಹೊಸ ಐಡಿಯಾವೊಂದನ್ನು ಕಂಡುಕೊಂಡಿದೆ. ಆ ಮೂಲಕ ತೆರಿಗೆ ಬಾಕಿ ಹಾಗೂ ಇತರ ಬಿಲ್​ ಬಾಕಿಗಳನ್ನು ಸಂಗ್ರಹಿಸಲು ಮುಂದಾಗಿದೆ. ಆ ಕುರಿತ ವಿವರ ಇಲ್ಲಿದೆ.

ತೆರಿಗೆ ಬಾಕಿ ವಸೂಲಿಗೆ ಹೊಸ ಪ್ಲಾನ್; ಸ್ವಸಹಾಯ ಸಂಘಗಳ ಮೊರೆ ಹೋದ ಸರ್ಕಾರ!
ವಿಧಾನಸೌಧ
ಶಾಂತಮೂರ್ತಿ
| Edited By: |

Updated on: Jun 25, 2024 | 6:55 AM

Share

ಬೆಂಗಳೂರು, ಜೂನ್ 25: ಆಸ್ತಿತೆರಿಗೆ (Property Tax), ನೀರಿನ ಬಿಲ್ ಬಾಕಿ ವಸೂಲಿಗೆ ನೋಟಿಸ್ ನೀಡಿ ಸುಸ್ತಾದ ಸರ್ಕಾರ (Karnataka Government), ಇದೀಗ ಹೊಸ ಯೋಜನೆಗೆ ಮುಂದಾಗಿದೆ. ಬಾಕಿ ತೆರಿಗೆ ವಸೂಲಿ ಮಾಡಲು ಸ್ವಸಹಾಯ ಸಂಘಗಳ ಮೊರೆ ಹೋಗಿರುವ ಸರ್ಕಾರ, ರಾಜ್ಯದ ಎನ್​ಜಿಒಗಳು, ಸ್ವಸಹಾಯ ಸಂಘಗಳ ಮೂಲಕ ತೆರಿಗೆ ಬಾಕಿ ವಸೂಲಿ ಮಾಡಿಸಲು ಸಜ್ಜಾಗಿದೆ. ಈ ಬಗ್ಗೆ ಸಚಿವ ಸಂಪುಟದಲ್ಲೂ ಚರ್ಚೆ ನಡೆದಿದ್ದು ಸಂಪುಟದಿಂದ ಕೂಡ ಹಸಿರು ನಿಶಾನೆ ಸಿಕ್ಕಿದೆ.

ಸದ್ಯ ಪಾಲಿಕೆ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳಿಂದ ಆಸ್ತಿ ತೆರಿಗೆ ಒಟ್ಟು 1,860.17 ಕೋಟಿ ರೂ. ಬಾಕಿ ಇದೆ. ಇದನ್ನ ವಸೂಲಿ ಮಾಡಲು ಮುಂದಾಗಿರುವ ಸರ್ಕಾರ, ಬಾಕಿ ವಸೂಲಿ ಜವಬ್ದಾರಿಯನ್ನು ಸ್ವಸಹಾಯ ಸಂಘಗಳು ಹಾಗೂ ಎನ್​​ಜಿಒಗಳಿಗೆ ವಹಿಸಲು ಸಜ್ಜಾಗಿದೆ. ಇದಕ್ಕೆ ಪ್ರತಿಯಾಗಿ ಸ್ವಸಹಾಯ ಸಂಘಗಳಿಗೆ ವಸೂಲಿಯಾದ ಹಣದ ಶೇಕಡ 5 ರಷ್ಟು ಪಾಲನ್ನ ಕಮಿಷನ್ ಆಗಿ ಕೊಡುವುದಕ್ಕೂ ಸಂಪುಟ ಒಪ್ಪಿಗೆ ಸೂಚಿಸಿದೆ. ಈ ಬಗ್ಗೆ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್​​ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

315 ನಗರ ಸ್ಥಳೀಯ ಸಂಸ್ಥೆಗಳು, 10 ಮಹಾನಗರ ಪಾಲಿಕೆಗಳು, 61 ನಗರ ಸಭೆಗಳು, 114 ಪಟ್ಟಣ ಪಂಚಾಯಿತಿಗಳು ಹಾಗೂ 4 ಅಧಿಸೂಚಿತ ಪ್ರದೇಶಗಳಲ್ಲಿ ಆಸ್ತಿ ತೆರಿಗೆ ವಸೂಲಿಯ ಹೊಣೆಯನ್ನ ಸ್ವಸಹಾಯ ಸಂಘಗಳಿಗೆ ವಹಿಸೋಕೆ ತಯಾರಿ ನಡೆದಿದ್ದು, ಆ ಮೂಲಕ ಸರ್ಕಾರದ ಬೊಕ್ಕಸ ತುಂಬಿಸಿಕೊಳ್ಳಲು ಸಿದ್ಧತೆ ನಡೆದಿದೆ.

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ಜೋರಾಗುತ್ತಿದೆ ಡಿಸಿಎಂ ಫೈಟ್: ಶೀಘ್ರದಲ್ಲೇ ದೆಹಲಿಗೆ ಕಾಂಗ್ರೆಸ್ ನಾಯಕರು

ಒಟ್ಟಿನಲ್ಲಿ ಈಗಾಗಲೇ ಪಂಚ ಗ್ಯಾರಂಟಿಗಳನ್ನ ನೀಡಿ ಸುಸ್ತಾಗಿರೋ ಸರ್ಕಾರ, ಇದೀಗ ಒಂದೊಂದಾಗಿ ಆದಾಯದ ಮೂಲ ಹುಡುಕಲು ಮುಂದಾಗಿದೆ ಎಂಬ ಚರ್ಚೆ ಕೇಳಿಬರುತ್ತಿದೆ. ಈ ಮಧ್ಯೆ ಸ್ವಸಹಾಯ ತೆರಿಗೆ ಬಾಕಿ ವಸೂಲಿಗೆ ಸಂಘಗಳ ಮೊರೆ ಹೋಗಿದ್ದು, ಸರ್ಕಾರದ ಈ ಯೋಜನೆಗೆ ತೆರಿಗೆ ಬಾಕಿದಾರರು ಯಾವ ರೀತಿ ಸ್ಪಂದಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ