AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ಬಾಕಿ ವಸೂಲಿಗೆ ಹೊಸ ಪ್ಲಾನ್; ಸ್ವಸಹಾಯ ಸಂಘಗಳ ಮೊರೆ ಹೋದ ಸರ್ಕಾರ!

ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹರಸಾಹಸಪಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದೆಡೆ ತೆರಿಗೆ ಬಾಕಿಯನ್ನು ವಸೂಲಿ ಮಾಡುವುದೂ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದಕ್ಕೆ ಇದೀಗ ಸರ್ಕಾರ ಹೊಸ ಐಡಿಯಾವೊಂದನ್ನು ಕಂಡುಕೊಂಡಿದೆ. ಆ ಮೂಲಕ ತೆರಿಗೆ ಬಾಕಿ ಹಾಗೂ ಇತರ ಬಿಲ್​ ಬಾಕಿಗಳನ್ನು ಸಂಗ್ರಹಿಸಲು ಮುಂದಾಗಿದೆ. ಆ ಕುರಿತ ವಿವರ ಇಲ್ಲಿದೆ.

ತೆರಿಗೆ ಬಾಕಿ ವಸೂಲಿಗೆ ಹೊಸ ಪ್ಲಾನ್; ಸ್ವಸಹಾಯ ಸಂಘಗಳ ಮೊರೆ ಹೋದ ಸರ್ಕಾರ!
ವಿಧಾನಸೌಧ
ಶಾಂತಮೂರ್ತಿ
| Edited By: |

Updated on: Jun 25, 2024 | 6:55 AM

Share

ಬೆಂಗಳೂರು, ಜೂನ್ 25: ಆಸ್ತಿತೆರಿಗೆ (Property Tax), ನೀರಿನ ಬಿಲ್ ಬಾಕಿ ವಸೂಲಿಗೆ ನೋಟಿಸ್ ನೀಡಿ ಸುಸ್ತಾದ ಸರ್ಕಾರ (Karnataka Government), ಇದೀಗ ಹೊಸ ಯೋಜನೆಗೆ ಮುಂದಾಗಿದೆ. ಬಾಕಿ ತೆರಿಗೆ ವಸೂಲಿ ಮಾಡಲು ಸ್ವಸಹಾಯ ಸಂಘಗಳ ಮೊರೆ ಹೋಗಿರುವ ಸರ್ಕಾರ, ರಾಜ್ಯದ ಎನ್​ಜಿಒಗಳು, ಸ್ವಸಹಾಯ ಸಂಘಗಳ ಮೂಲಕ ತೆರಿಗೆ ಬಾಕಿ ವಸೂಲಿ ಮಾಡಿಸಲು ಸಜ್ಜಾಗಿದೆ. ಈ ಬಗ್ಗೆ ಸಚಿವ ಸಂಪುಟದಲ್ಲೂ ಚರ್ಚೆ ನಡೆದಿದ್ದು ಸಂಪುಟದಿಂದ ಕೂಡ ಹಸಿರು ನಿಶಾನೆ ಸಿಕ್ಕಿದೆ.

ಸದ್ಯ ಪಾಲಿಕೆ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳಿಂದ ಆಸ್ತಿ ತೆರಿಗೆ ಒಟ್ಟು 1,860.17 ಕೋಟಿ ರೂ. ಬಾಕಿ ಇದೆ. ಇದನ್ನ ವಸೂಲಿ ಮಾಡಲು ಮುಂದಾಗಿರುವ ಸರ್ಕಾರ, ಬಾಕಿ ವಸೂಲಿ ಜವಬ್ದಾರಿಯನ್ನು ಸ್ವಸಹಾಯ ಸಂಘಗಳು ಹಾಗೂ ಎನ್​​ಜಿಒಗಳಿಗೆ ವಹಿಸಲು ಸಜ್ಜಾಗಿದೆ. ಇದಕ್ಕೆ ಪ್ರತಿಯಾಗಿ ಸ್ವಸಹಾಯ ಸಂಘಗಳಿಗೆ ವಸೂಲಿಯಾದ ಹಣದ ಶೇಕಡ 5 ರಷ್ಟು ಪಾಲನ್ನ ಕಮಿಷನ್ ಆಗಿ ಕೊಡುವುದಕ್ಕೂ ಸಂಪುಟ ಒಪ್ಪಿಗೆ ಸೂಚಿಸಿದೆ. ಈ ಬಗ್ಗೆ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್​​ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

315 ನಗರ ಸ್ಥಳೀಯ ಸಂಸ್ಥೆಗಳು, 10 ಮಹಾನಗರ ಪಾಲಿಕೆಗಳು, 61 ನಗರ ಸಭೆಗಳು, 114 ಪಟ್ಟಣ ಪಂಚಾಯಿತಿಗಳು ಹಾಗೂ 4 ಅಧಿಸೂಚಿತ ಪ್ರದೇಶಗಳಲ್ಲಿ ಆಸ್ತಿ ತೆರಿಗೆ ವಸೂಲಿಯ ಹೊಣೆಯನ್ನ ಸ್ವಸಹಾಯ ಸಂಘಗಳಿಗೆ ವಹಿಸೋಕೆ ತಯಾರಿ ನಡೆದಿದ್ದು, ಆ ಮೂಲಕ ಸರ್ಕಾರದ ಬೊಕ್ಕಸ ತುಂಬಿಸಿಕೊಳ್ಳಲು ಸಿದ್ಧತೆ ನಡೆದಿದೆ.

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ಜೋರಾಗುತ್ತಿದೆ ಡಿಸಿಎಂ ಫೈಟ್: ಶೀಘ್ರದಲ್ಲೇ ದೆಹಲಿಗೆ ಕಾಂಗ್ರೆಸ್ ನಾಯಕರು

ಒಟ್ಟಿನಲ್ಲಿ ಈಗಾಗಲೇ ಪಂಚ ಗ್ಯಾರಂಟಿಗಳನ್ನ ನೀಡಿ ಸುಸ್ತಾಗಿರೋ ಸರ್ಕಾರ, ಇದೀಗ ಒಂದೊಂದಾಗಿ ಆದಾಯದ ಮೂಲ ಹುಡುಕಲು ಮುಂದಾಗಿದೆ ಎಂಬ ಚರ್ಚೆ ಕೇಳಿಬರುತ್ತಿದೆ. ಈ ಮಧ್ಯೆ ಸ್ವಸಹಾಯ ತೆರಿಗೆ ಬಾಕಿ ವಸೂಲಿಗೆ ಸಂಘಗಳ ಮೊರೆ ಹೋಗಿದ್ದು, ಸರ್ಕಾರದ ಈ ಯೋಜನೆಗೆ ತೆರಿಗೆ ಬಾಕಿದಾರರು ಯಾವ ರೀತಿ ಸ್ಪಂದಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ