Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ಬಾಕಿ ವಸೂಲಿಗೆ ಹೊಸ ಪ್ಲಾನ್; ಸ್ವಸಹಾಯ ಸಂಘಗಳ ಮೊರೆ ಹೋದ ಸರ್ಕಾರ!

ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹರಸಾಹಸಪಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದೆಡೆ ತೆರಿಗೆ ಬಾಕಿಯನ್ನು ವಸೂಲಿ ಮಾಡುವುದೂ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದಕ್ಕೆ ಇದೀಗ ಸರ್ಕಾರ ಹೊಸ ಐಡಿಯಾವೊಂದನ್ನು ಕಂಡುಕೊಂಡಿದೆ. ಆ ಮೂಲಕ ತೆರಿಗೆ ಬಾಕಿ ಹಾಗೂ ಇತರ ಬಿಲ್​ ಬಾಕಿಗಳನ್ನು ಸಂಗ್ರಹಿಸಲು ಮುಂದಾಗಿದೆ. ಆ ಕುರಿತ ವಿವರ ಇಲ್ಲಿದೆ.

ತೆರಿಗೆ ಬಾಕಿ ವಸೂಲಿಗೆ ಹೊಸ ಪ್ಲಾನ್; ಸ್ವಸಹಾಯ ಸಂಘಗಳ ಮೊರೆ ಹೋದ ಸರ್ಕಾರ!
ವಿಧಾನಸೌಧ
Follow us
ಶಾಂತಮೂರ್ತಿ
| Updated By: Ganapathi Sharma

Updated on: Jun 25, 2024 | 6:55 AM

ಬೆಂಗಳೂರು, ಜೂನ್ 25: ಆಸ್ತಿತೆರಿಗೆ (Property Tax), ನೀರಿನ ಬಿಲ್ ಬಾಕಿ ವಸೂಲಿಗೆ ನೋಟಿಸ್ ನೀಡಿ ಸುಸ್ತಾದ ಸರ್ಕಾರ (Karnataka Government), ಇದೀಗ ಹೊಸ ಯೋಜನೆಗೆ ಮುಂದಾಗಿದೆ. ಬಾಕಿ ತೆರಿಗೆ ವಸೂಲಿ ಮಾಡಲು ಸ್ವಸಹಾಯ ಸಂಘಗಳ ಮೊರೆ ಹೋಗಿರುವ ಸರ್ಕಾರ, ರಾಜ್ಯದ ಎನ್​ಜಿಒಗಳು, ಸ್ವಸಹಾಯ ಸಂಘಗಳ ಮೂಲಕ ತೆರಿಗೆ ಬಾಕಿ ವಸೂಲಿ ಮಾಡಿಸಲು ಸಜ್ಜಾಗಿದೆ. ಈ ಬಗ್ಗೆ ಸಚಿವ ಸಂಪುಟದಲ್ಲೂ ಚರ್ಚೆ ನಡೆದಿದ್ದು ಸಂಪುಟದಿಂದ ಕೂಡ ಹಸಿರು ನಿಶಾನೆ ಸಿಕ್ಕಿದೆ.

ಸದ್ಯ ಪಾಲಿಕೆ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳಿಂದ ಆಸ್ತಿ ತೆರಿಗೆ ಒಟ್ಟು 1,860.17 ಕೋಟಿ ರೂ. ಬಾಕಿ ಇದೆ. ಇದನ್ನ ವಸೂಲಿ ಮಾಡಲು ಮುಂದಾಗಿರುವ ಸರ್ಕಾರ, ಬಾಕಿ ವಸೂಲಿ ಜವಬ್ದಾರಿಯನ್ನು ಸ್ವಸಹಾಯ ಸಂಘಗಳು ಹಾಗೂ ಎನ್​​ಜಿಒಗಳಿಗೆ ವಹಿಸಲು ಸಜ್ಜಾಗಿದೆ. ಇದಕ್ಕೆ ಪ್ರತಿಯಾಗಿ ಸ್ವಸಹಾಯ ಸಂಘಗಳಿಗೆ ವಸೂಲಿಯಾದ ಹಣದ ಶೇಕಡ 5 ರಷ್ಟು ಪಾಲನ್ನ ಕಮಿಷನ್ ಆಗಿ ಕೊಡುವುದಕ್ಕೂ ಸಂಪುಟ ಒಪ್ಪಿಗೆ ಸೂಚಿಸಿದೆ. ಈ ಬಗ್ಗೆ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್​​ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

315 ನಗರ ಸ್ಥಳೀಯ ಸಂಸ್ಥೆಗಳು, 10 ಮಹಾನಗರ ಪಾಲಿಕೆಗಳು, 61 ನಗರ ಸಭೆಗಳು, 114 ಪಟ್ಟಣ ಪಂಚಾಯಿತಿಗಳು ಹಾಗೂ 4 ಅಧಿಸೂಚಿತ ಪ್ರದೇಶಗಳಲ್ಲಿ ಆಸ್ತಿ ತೆರಿಗೆ ವಸೂಲಿಯ ಹೊಣೆಯನ್ನ ಸ್ವಸಹಾಯ ಸಂಘಗಳಿಗೆ ವಹಿಸೋಕೆ ತಯಾರಿ ನಡೆದಿದ್ದು, ಆ ಮೂಲಕ ಸರ್ಕಾರದ ಬೊಕ್ಕಸ ತುಂಬಿಸಿಕೊಳ್ಳಲು ಸಿದ್ಧತೆ ನಡೆದಿದೆ.

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ಜೋರಾಗುತ್ತಿದೆ ಡಿಸಿಎಂ ಫೈಟ್: ಶೀಘ್ರದಲ್ಲೇ ದೆಹಲಿಗೆ ಕಾಂಗ್ರೆಸ್ ನಾಯಕರು

ಒಟ್ಟಿನಲ್ಲಿ ಈಗಾಗಲೇ ಪಂಚ ಗ್ಯಾರಂಟಿಗಳನ್ನ ನೀಡಿ ಸುಸ್ತಾಗಿರೋ ಸರ್ಕಾರ, ಇದೀಗ ಒಂದೊಂದಾಗಿ ಆದಾಯದ ಮೂಲ ಹುಡುಕಲು ಮುಂದಾಗಿದೆ ಎಂಬ ಚರ್ಚೆ ಕೇಳಿಬರುತ್ತಿದೆ. ಈ ಮಧ್ಯೆ ಸ್ವಸಹಾಯ ತೆರಿಗೆ ಬಾಕಿ ವಸೂಲಿಗೆ ಸಂಘಗಳ ಮೊರೆ ಹೋಗಿದ್ದು, ಸರ್ಕಾರದ ಈ ಯೋಜನೆಗೆ ತೆರಿಗೆ ಬಾಕಿದಾರರು ಯಾವ ರೀತಿ ಸ್ಪಂದಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!