AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಶಿರೂರು ಮಠಕ್ಕೆ ನೂತನ ಪೀಠಾಧಿಪತಿ ಘೋಷಣೆ; ಧರ್ಮಸ್ಥಳ ನಿಡ್ಲೆ ಮೂಲದ ಅನಿರುದ್ಧ್ ಸರಳತ್ತಾಯ ಮುಂದಿನ ಶ್ರೀ

ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಕುಟುಂಬದ 16 ವರ್ಷದ ವಟುವಾಗಿರುವ ನೂತನ ಪೀಠಾಧಿಕಾರಿಯಾಗಿ ನಿಯುಕ್ತಿಗೊಂಡಿರುವ ಅನಿರುದ್ಧ್ ಸರಳತ್ತಾಯ, ಉಡುಪಿಯ ವಿದ್ಯೋದಯ ಪ್ರೌಢಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಪೂರೈಸಿದ್ದಾರೆ.

ಉಡುಪಿ ಶಿರೂರು ಮಠಕ್ಕೆ ನೂತನ ಪೀಠಾಧಿಪತಿ ಘೋಷಣೆ; ಧರ್ಮಸ್ಥಳ ನಿಡ್ಲೆ ಮೂಲದ ಅನಿರುದ್ಧ್ ಸರಳತ್ತಾಯ ಮುಂದಿನ ಶ್ರೀ
ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅವರೊಂದಿಗೆ ಶಿರೂರು ಮಠದ ನೂತನ ಯತಿ (ಧೀಕ್ಷೆಗೂ ಮುನ್ನ)
guruganesh bhat
| Edited By: |

Updated on: Apr 21, 2021 | 5:45 PM

Share

ಉಡುಪಿ: ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠಕ್ಕೆ ನೂತನ ಪೀಠಾಧಿಪತಿಯನ್ನು ಘೋಷಿಸಲಾಗಿದೆ. ಸೋದೆ (ವಾದಿರಾಜ) ಮಠದ ವಿಶ್ವವಲ್ಲಭ ತೀರ್ಥರು ನೂತನ ಪೀಠಾಧಿಪತಿಯ ಹೆಸರು ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದ ನಿಡ್ಲೆ ಮೂಲದ ಅನಿರುದ್ಧ್ ಸರಳತ್ತಾಯ ಮುಂದಿನ ಶ್ರೀಗಳಾಗಿ ನಿಯುಕ್ತಿಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸೋದೆ ಮಠದಲ್ಲಿ ಮೇ 11ರಿಂದ 14ರವರೆಗೆ ಶಿಷ್ಯ ಸ್ವೀಕಾರ ವಿಧಿ ವಿಧಾನಗಳು ಜರುಗಲಿವೆ.

ಶಿರೂರು ಮಠಕ್ಕೆ ನೂತನ ಪೀಠಾಧಿಕಾರಿಯಾಗಿ ನಿಯುಕ್ತಿಗೊಂಡಿರುವ ಅನಿರುದ್ಧ್ ಸರಳತ್ತಾಯ ಮಠದ ಉತ್ತರಾಧಿಕಾರಿಯಾಗಲಿದ್ದಾರೆ. ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಕುಟುಂಬದ 16 ವರ್ಷದ ವಟುವಾಗಿರುವ ಅವರು, ಉಡುಪಿಯ ವಿದ್ಯೋದಯ ಪ್ರೌಢಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಪೂರೈಸಿದ್ದಾರೆ.

ಅಷ್ಟಮಠಗಳಲ್ಲಿ ಬಾಲಸನ್ಯಾಸ ಸ್ವೀಕಾರ ಸಂಪ್ರದಾಯ ಇದೆ. ಸಂಪ್ರದಾಯದ ಪ್ರಕಾರವೇ ವಟುವಿನ ಆಯ್ಕೆ ನಡೆದಿದೆ. ಅಷ್ಟಮಠಗಳ ಯತಿಗಳಿಂದ ಸನ್ಯಾಸ ವಿಚಾರದಲ್ಲಿ ಯಾವುದೇ ಸಂವಿಧಾನ ರಚನೆಯಾಗಿಲ್ಲ. ಎಲ್ಲಾ ಯತಿಗಳ ಗಮನಕ್ಕೆ ತಂದು ಶಿಷ್ಯನ ಆಯ್ಕೆ ಮಾಡಿದ್ದೇವೆ ಎಂದು ಉಡುಪಿಯ ಶಿರೂರಿನಲ್ಲಿ ಸೋದೆ ವಿಶ್ವವಲ್ಲಭತೀರ್ಥ ಸ್ವಾಮೀಜಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

Saralattaya-Family

ತಂದೆ, ತಾಯಿ, ತಂಗಿಯೊಂದಿಗೆ ಶೀರೂರು ಮಠದ ಪೀಠ ಏರಲಿರುವ ಅನಿರುದ್ಧ ಸರಳತ್ತಾಯ

ಸೋದೆ-ಶೀರೂರು ದ್ವಂದ್ವ ಮಠಗಳು ಶೀರೂರು ಮಠದ ಲಕ್ಷ್ಮೀವರ ತೀರ್ಥರು ಸಂಶಯಾಸ್ಪದ ರೀತಿಯಲ್ಲಿ ಅಸುನೀಗಿ ಎರಡು ವರ್ಷ ಒಂಭತ್ತು ತಿಂಗಳು ಕಳೆಯಿತು. ಈವರೆಗೆ ಖಾಲಿಯಿದ್ದ ಶೀರೂರು ಮಠ ಪೀಠಕ್ಕೆ ಇದೀಗ ನೂತನ ಯತಿಯ ನೇಮಕದ ಪ್ರಕ್ರಿಯೆ ಆರಂಭವಾಗಿದೆ. ಶೀರೂರಿಗೆ ದ್ವಂದ್ವ ಮಠವಾಗಿರುವ ಸೋದೆ ಮಠದ ವಿಶ್ವವಲ್ಲಭ ತೀರ್ಥರು ಪ್ರಸ್ತುತ ಶೀರೂರು ಮಠದ ಉಸ್ತುವಾರಿಯನ್ನೂ ನೋಡಿಕೊಳ್ಳುತ್ತಿದ್ದಾರೆ.

ಶೀರೂರು ಮಠದ ಲಕ್ಷ್ಮೀವರ ತೀರ್ಥರು ನಿಧನರಾದಾಗ ಅಷ್ಟಮಠಗಳಲ್ಲಿ ಸಾಕಷ್ಟು ಗೊಂದಲ ಉಂಟಾಗಿತ್ತು.  ಕೆಲ ಹಿರಿಯ ಸ್ವಾಮಿಗಳ ಬಗ್ಗೆ ಹಲವು ಆರೋಪಗಳೂ ಕೇಳಿಬಂದಿತ್ತು. ಲಕ್ಷ್ಮೀವರ ತೀರ್ಥರ ನಿಧನಾನಂತರವೂ ಮಠದ ಆರ್ಥಿಕ ವ್ಯವಹಾರಗಳಲ್ಲಿ ಪಾರದರ್ಶಕತೆ ಇಲ್ಲ ಎಂದು ಲಕ್ಷ್ಮೀವರ ತೀರ್ಥರ ಪೂರ್ವಾಶ್ರಮದ ಬಂಧುಗಳು ಆರೋಪಿಸಿದ್ದರು. ಪೀಠಕ್ಕೆ ಯತಿ ನೇಮಕವಾಗದೇ ಇರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ದ್ವಂದ್ವ ಮಠದ ಸೋದೆ ಶ್ರೀಗಳು ಶೀರೂರು ಮಠಕ್ಕೆ ನೂತನ ಯತಿಯ ಘೋಷಣೆ ಮಾಡಿದ್ದಾರೆ. ಧರ್ಮಸ್ಥಳ ಸಮೀಪದ ನಿಡ್ಲೆ ಮೂಲದ ಅನಿರುದ್ಧ ಸನ್ಯಾಸ ಸ್ವೀಕಾರಕ್ಕೆ ಸಿದ್ದರಾಗಿದ್ದಾರೆ.

ಸೋದೆ ಮಠದ ಪ್ರಧಾನ ವೈದಿಕರಲ್ಲಿ ಒಬ್ಬರಾದ ಉದಯ ಸರಳತ್ತಾಯರ 16 ವರ್ಷದ ಮಗನಾದ ಅನಿರುದ್ಧ ಸದ್ಯ ಹತ್ತನೇ ತರಗತಿ ಪೂರೈಸಿದ್ದಾರೆ. ಇವರ ಜಾತಕದಲ್ಲಿ ಸನ್ಯಾಸ ಯೋಗ ಇರುವುದನ್ನು ಉಡುಪಿ, ಕಾಶಿ ಮತ್ತು ನಾಗಪುರದ ಜ್ಯೋತಿಷಿಗಳು ಖಚಿತಪಡಿಸಿದ್ದಾರೆ. ಬಾಲ್ಯದಿಂದಲೇ ವಿರಕ್ತನಾದ ಬಾಲಕ, ಕೃಷ್ಣಪೂಜೆಯ ಆಸೆ ವ್ಯಕ್ತಪಡಿಸುತ್ತಿದುದಾಗಿ ಉದಯ ಸರಳತ್ತಾಯ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರಾಯಣ ನಂತರ ಶಿರೂರು ಮಠಕ್ಕೆ ಉತ್ತರಾಧಿಕಾರಿ ಘೋಷಣೆ -ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ

With-Family-in-Press-meet

ಸಂವಾದದಲ್ಲಿ ಅನಿರುದ್ಧ ಸರಳತ್ತಾಯ

ಸನ್ಯಾಸ ದೀಕ್ಷೆಗೆ ಆಕ್ಷೇಪ ಈ ನಡುವೆ ಲಕ್ಷ್ಮೀವರ ತೀರ್ಥರ ಪೂರ್ವಾಶ್ರಮದ ಸಹೋದರರು ಈ ಸನ್ಯಾಸ ದೀಕ್ಷೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಬಾಲ ಸನ್ಯಾಸ ನೀಡುವುದು ಸರಿಯಲ್ಲ, ವೇದಾಂತ ಅಧ್ಯಯನ ಪೂರ್ಣವಾದ ಮತ್ತು 21 ವರ್ಷ ಮೇಲ್ಪಟ್ಟ ವಟುವನ್ನೇ ಆಯ್ಕೆ ಮಾಡಬೇಕಿತ್ತು ಎಂದು ವಾದಿಸಿದ್ದರು. ಈ ಆಕ್ಷೇಪಕ್ಕೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ, ಅಷ್ಟಮಠಗಳಲ್ಲಿ ಬಾಲಸನ್ಯಾಸದ ಪರಂಪರೆ ಇದೆ, ನನಗೂ 14 ನೇ ವಯಸ್ಸಿನಲ್ಲಿ ಸನ್ಯಾಸ ದೀಕ್ಷೆ ನೀಡಲಾಗಿದೆ. ಅಷ್ಟ ಮಠಾಧೀಶರ ಜೊತೆ ಈ ವಟುವಿನ ಆಯ್ಕೆಯ ಬಗ್ಗೆ ಚರ್ಚಿಸಿ ಸಮ್ಮತಿ ಪಡೆಯಲಾಗಿದೆ. ಹೆಚ್ಚು ಕಾಲ ಪೀಠವನ್ನು ಖಾಲಿಯಿಡುವುದು ಸರಿಯಲ್ಲ, ಹಾಗಾಗಿ ಯೋಗ್ಯವಾದ ರೀತಿಯಲ್ಲಿಯೇ ಅನಿರುದ್ಧನ ಆಯ್ಕೆ ಮಾಡಲಾಗಿದೆ. 21 ವರ್ಷ ಪೂರ್ಣಗೊಂಡವರಿಗೆ ಮಾತ್ರ ಸನ್ಯಾಸ ಎಂಬ ಬಗ್ಗೆ ಅಷ್ಟಮಠಗಳಲ್ಲಿ ಯಾವುದೇ ನಿಯಮಗಳು ರೂಪುಗೊಂಡಿಲ್ಲ. ಮುಂದಿನ ಶೀರೂರು ಪರ್ಯಾಯಕ್ಕೆ ಮುಂಚಿತವಾಗಿ ಸೂಕ್ತ ರೀತಿಯ ವೇದ-ವೇದಾಂತ ಪಾಠಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

(New Seer Appointed for Shiroor Mutt Announces Vishwavallabha Teertha Swamiji)

ಇದನ್ನೂ ಓದಿ: ಕೃಷಿಕ್ರಾಂತಿಗೆ ಮುಂದಾದ ಉಡುಪಿ ಜಿಲ್ಲೆ; ಶಾಸಕರ ಮುಂದಾಳತ್ವದಲ್ಲಿ ನಡೆಯಲಿದೆ ಹಡಿಲು ಭೂಮಿ ಬಿತ್ತನೆ ಕಾರ್ಯ

ಇದನ್ನೂ ಓದಿ: ಪೇಜಾವರು ಶ್ರೀಗಳು ನಡೆದು ಬಂದ ಹಾದಿ

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ