AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬೈಕ್​ ಸವಾರರೇ ಎಚ್ಚರ; ದಂಡ ವಸೂಲಿಗಾಗಿ ಪೊಲೀಸರಿಗೆ ಸಿಕ್ಕಿದೆ ಹೊಸ ಅಸ್ತ್ರ

New Traffic Rules: ನಿಯಮಗಳು ಹೀಗಿವೆ ಎಂಬುದು ಗೊತ್ತಿಲ್ಲದೆ ಕೆಲವೊಮ್ಮೆ ಟ್ರಾಫಿಕ್​ ಪೊಲೀಸರ ಎದುರು ಬೈಕ್​ ಸವಾರರು ವಾದಕ್ಕೆ ಇಳಿಯುತ್ತಾರೆ. ನಿಯಮ ತಿಳಿದ ನಂತರದಲ್ಲಿ ಸುಮ್ಮನಾಗುತ್ತಾರೆ. ಹೀಗಾಗಿ, ಈಗ ಬದಲಾವಣೆ ತಂದ ನಿಯಮವನ್ನೂ ನೀವು ಗಮನಿಸಲೇಬೇಕು.

ಬೆಂಗಳೂರು ಬೈಕ್​ ಸವಾರರೇ ಎಚ್ಚರ; ದಂಡ ವಸೂಲಿಗಾಗಿ ಪೊಲೀಸರಿಗೆ ಸಿಕ್ಕಿದೆ ಹೊಸ ಅಸ್ತ್ರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Apr 11, 2021 | 8:04 PM

Share

ಬೆಂಗಳೂರು: ಬೈಕ್​ನಲ್ಲಿ ಸಂಚರಿಸುವಾಗ ಹೆಲ್ಮೆಟ್​ ಧರಿಸದಿದ್ದರೆ, ಇನ್ಸುರೆನ್ಸ್​, ಬೈಕ್​ ಆರ್​ಸಿ ಕಾರ್ಡ್​, ಡ್ರೈವಿಂಗ್​ ಲೈಸೆನ್ಸ್​ ಇಲ್ಲದಿದ್ದರೆ ದಂಡ ಹಾಕಲಾಗುತ್ತದೆ. ಏನೂ ಸಿಕ್ಕಿಲ್ಲ ಎಂದರೆ ಪೊಲೀಸರು ಯಾವುದಾದರೂ ಚಿಕ್ಕ ವಿಚಾರಗಳನ್ನು ಇಟ್ಟುಕೊಂಡು ದಂಡ ವಸೂಲಿ ಮಾಡುತ್ತಾರೆ ಎಂಬುದು ಜನಸಾಮಾನ್ಯರ ಆರೋಪ. ಆದರೆ, ಕೆಲ ವಿಚಾರಗಳು ಟ್ರಾಫಿಕ್​ ರೂಲ್ಸ್​ನಲ್ಲೇ ಇರುತ್ತದೆ.  ಈಗ ತರಲಾದ ಹೊಸ ನಿಯಮದಲ್ಲಿ ಎರಡು ಮಹತ್ವದ ಬದಲಾವಣೆ ಮಾಡಲಾಗಿದೆ. ಅಷ್ಟೇ ಅಲ್ಲ, ಆ ತಪ್ಪುಗಳನ್ನು ಮಾಡಿದರೆ ದೊಡ್ಡ ಮೊತ್ತದ ದಂಡ ತೆತ್ತಬೇಕಾಗುತ್ತದೆ.

ನಿಯಮಗಳು ಹೀಗಿವೆ ಎಂಬುದು ಗೊತ್ತಿಲ್ಲದೆ ಕೆಲವೊಮ್ಮೆ ಟ್ರಾಫಿಕ್​ ಪೊಲೀಸರ ಎದುರು ಬೈಕ್​ ಸವಾರರು ವಾದಕ್ಕೆ ಇಳಿಯುತ್ತಾರೆ. ನಿಯಮ ತಿಳಿದ ನಂತರದಲ್ಲಿ ಸುಮ್ಮನಾಗುತ್ತಾರೆ. ಹೀಗಾಗಿ, ಈಗ ಬದಲಾವಣೆ ತಂದ ನಿಯಮವನ್ನೂ ನೀವು ಗಮನಿಸಲೇಬೇಕು.

ಬೆಂಗಳೂರು ನಗರ ಸಂಚಾರ ಪೊಲೀಸ್ ವಿಭಾಗ ಹೊಸ ಟ್ರಾಫಿಕ್​ ನಿಯಮ ಜಾರಿಗೆ ತಂದಿದೆ. ಇದರ ಪ್ರಕಾರ ನಿಮ್ಮ ಬೈಕ್​ ರಸ್ತೆಗೆ ಇಳಿಸುವ ಮೊದಲು ಸೈಡ್ ಮಿರರ್ ಹಾಗೂ ಇಂಡಿಕೇಟರ್ ಇರಲೇಬೇಕು. ಬೈಕ್​ನಲ್ಲಿ ಸಂಚಾರ ಮಾಡುವಾಗ ಸೈಡ್​ ಮಿರರ್​ ಇದ್ದರೆ ಹಿಂಬದಿಯಿಂದ ಬರುವ ವಾಹನವನ್ನು ಗಮನಿಸಬಹುದು. ಈ ಮೂಲಕ ಆಗಬಹುದಾದ ಅಪಘಾತವನ್ನು ತಪ್ಪಿಸಬಹುದು. ಎಡಕ್ಕೆ ಅಥವಾ ಬಲಕ್ಕೆ ತಿರುಗುವಾಗ ಇಂಡಿಕೇಟರ್​ ಹಾಕಿದರೆ ಹಿಂಬದಿಯಿಂದ ಬರುತ್ತಿರುವವರಿಗೆ ನಾವು ಎತ್ತ ತಿರುಗುತ್ತೇವೆ ಎನ್ನುವ ಸೂಚನೆ ಸಿಗುತ್ತದೆ. ಇದು ಕೂಡ ಅಪಘಾತ ತಡೆಯಲು ಸಹಕಾರಿ.

ಹೊಸ ಸುತ್ತೋಲೆಯ ಪ್ರಕಾರ ಸೈಡ್ ಮಿರರ್ ಅಳವಡಿಸದೆ ಮತ್ತು ಇಂಡಿಕೇಟರ್​ ಇಲ್ಲದೆ ನಗರದಲ್ಲಿ ವಾಹನಗಳನ್ನು ಓಡಿಸಿದರೆ ಅದು ನಿಯಮಗಳ ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ. ಎರಡನ್ನೂ ಪ್ರತ್ಯೇಕ ತಪ್ಪು ಎಂದು ಪರಿಗಣಿಸಲಾಗುವುದು ಮತ್ತು ಪ್ರತಿ ಉಲ್ಲಂಘನೆಗೆ ರೂ 500 ದಂಡ ವಿಧಿಸಲಾಗುವುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.

(New Traffic Rules in Bangalore 2021 rule traffic rules change in Bengaluru)

ಇದನ್ನೂ ಓದಿ: ಮುಂಬೈನಲ್ಲಿ ಕೊವಿಡ್ ನಿರ್ಬಂಧ: ರೈಲು ಸಂಚಾರ ಸ್ಥಗಿತಗೊಳ್ಳುವ ಭಯದಿಂದ ಊರಿನತ್ತ ಹೆಜ್ಜೆ ಹಾಕಿದ ವಲಸೆ ಕಾರ್ಮಿಕರು

ಇದನ್ನೂ ಓದಿ: ಟ್ರಾಫಿಕ್​ನಿಂದ ಬೇಸತ್ತ ರಾಹುಲ್​ ದ್ರಾವಿಡ್​; ಬ್ಯಾಟ್​ನಿಂದ ಎದುರು ಬದಿ ಕಾರಿನ ಗಾಜು ಪುಡಿಪುಡಿ; ವಿಡಿಯೋ ವೈರಲ್​

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ