AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಮಕ್ಕಳ ತಾಯಿ ಸಲ್ಮಾ ಕೊಲೆ ಪ್ರಕರಣಕ್ಕೆ ಹೊಸ ತಿರುವು; ದುಷ್ಕರ್ಮಿಗಳ ಕೊಲೆ ಸಂಚು ಹೇಗಿತ್ತು ಗೊತ್ತಾ?

ಬೆಂಗಳೂರು ತಿಲಕನಗರದಲ್ಲಿ ಮಹಿಳೆ ಸಲ್ಮಾ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಲ್ಮಾ ಪ್ರಿಯಕರ ಸುಬ್ರಹ್ಮಣಿ ಆಕೆಯ ತಲೆಗೆ ಹೊಡೆದು ಹತ್ಯೆ ಮಾಡಿದ್ದಾನೆಂದು ಹೇಳಲಾಗಿತ್ತು. ಆದರೆ ಈ ಪ್ರಕರಣದಲ್ಲೀಗ ಹೊಸ ಹೆಸರು ಕೇಳಿ ಬರುತ್ತಿದೆ. ಹತ್ಯೆಯಲ್ಲಿ ಸುಬ್ರಹ್ಮಣಿಯೊಂದಿಗೆ ಇನ್ನೋರ್ವನೂ ಸೇರಿದ್ದಾನೆಂದು ತಿಳಿದ ಪೊಲೀಸರು, ಇಬ್ಬರು ಆರೋಪಿಗಳನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

4 ಮಕ್ಕಳ ತಾಯಿ ಸಲ್ಮಾ ಕೊಲೆ ಪ್ರಕರಣಕ್ಕೆ ಹೊಸ ತಿರುವು; ದುಷ್ಕರ್ಮಿಗಳ ಕೊಲೆ ಸಂಚು ಹೇಗಿತ್ತು ಗೊತ್ತಾ?
4 ಮಕ್ಕಳ ತಾಯಿ ಸಲ್ಮಾ ಕೊಲೆ ಪ್ರಕರಣಕ್ಕೆ ಹೊಸ ತಿರುವು; ಪ್ರಕರಣದಲ್ಲಿ ಇನ್ನೋರ್ವ ಆರೋಪಿಯ ಹೆಸರು ಸೇರ್ಪಡೆ
ಭಾವನಾ ಹೆಗಡೆ
|

Updated on: Oct 26, 2025 | 11:21 AM

Share

ಬೆಂಗಳೂರು,ಅಕ್ಟೋಬರ್ 26:  ಬೆಂಗಳೂರಿನ ತಿಲಕ್​ನಗರದಲ್ಲಿ ನಡೆದ 4 ಮಕ್ಕಳ ತಾಯಿಯ ಕೊಲೆ ಕೇಸ್ (Salma Murder Case)  ಈಗ ಮಹತ್ತರ ತಿರುವು ಪಡೆದಿದೆ. ಮೃತ ಸಲ್ಮಾ ಪತಿಯ ಸಾವಿನ ನಂತರ ಸುಬ್ರಹ್ಮಣಿ ಎನ್ನುವವರ ಜೊತೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದು, ಆತನೇ ಸಲ್ಮಾಳನ್ನು ಕೊಂದಿದ್ದಾನೆಂಬ ಶಂಕೆ ವ್ಯಕ್ತವಾಗಿತ್ತು.  ಈ ಶಂಕೆಯೀಗ ದೃಢಪಟ್ಟಿದ್ದು,  ಕೊಲೆ ಕೇಸ್ನಲ್ಲಿ ಸೆಂಥಿಲ್ ಎಂಬೋರ್ವನ ಹೆಸರು ಸೇರ್ಪಡೆಯಾಗಿದೆ. ತಿಲಕ್​ನಗರ ಪೊಲೀಸರು ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದು, ತನಿಖೆ ಮುಂದುವರೆದಿದೆ.

ಸುಬ್ರಹ್ಮಣಿ ಬಿಟ್ಟು ಇನ್ನೂ ಇಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಸಲ್ಮಾ

ಪತಿಯನ್ನು ಕಳೆದುಕೊಂಡು 4 ಮಕ್ಕಳೊಡನೆ ಜೀವನ ನಡೆಸುತ್ತಿದ್ದ ಸಲ್ಮಾ, ಸುಬ್ರಹ್ಮಣಿ ಜೊತೆ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿತ್ತು.  ಒಮ್ಮೆಲೇ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಸುಬ್ರಹ್ಮಣಿ, ಸಲ್ಮಾ ತಲೆಗೆ ಹೊಡೆದು ಹತ್ಯೆ ಮಾಡಿದ್ದು, ಮೃತದೇಹಕ್ಕೆ ಬಟ್ಟೆ ಸುತ್ತಿ ಕೆಟ್ಟುನಿಂತಿದ್ದ ಆಟೋದಲ್ಲಿಟ್ಟು ಪರಾರಿ ಆಗಿದ್ದಾನೆ ಎಂದು ಶಂಕೆ ವ್ಯಕ್ತವಾಗಿತ್ತು. ಆದರೀಗ ಈ ಪ್ರಕರಣದಲ್ಲಿ ಇನ್ನೋರ್ವನ ಹೆಸರು ಕೇಳಿ ಬಂದಿದೆ.

ಸುಬ್ರಹ್ಮಣಿ ಮಾತ್ರವಲ್ಲದೇ ಆತನ ಸ್ನೇಹಿತ ಸೆಂಥಿಲ್ ಜೊತೆಗೂ ಸಲ್ಮಾ ಸಲುಗೆಯಿಂದಿದ್ದಳು ಎಂದು ತಿಳಿದು ಬಂದಿದೆ. ಈಕೆ ಇವರಿಬ್ಬರನ್ನಷ್ಟೇ ಅಲ್ಲದೇ ಮೂರನೇ ವ್ಯಕ್ತಿಯ ಜೊತೆಗೂ ಅಕ್ರಮ ಸಂಬಂಧ ಹೊಂದಿದ್ದ ವಿಷಯ ತಿಳಿದ ಆರೋಪಿಗಳು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ ಬೆಂಗಳೂರು: 4 ಮಕ್ಕಳ ತಾಯಿ ಕೊಂದು ಆಟೋದಲ್ಲಿ ಶವವಿಟ್ಟು ದುಷ್ಕರ್ಮಿ ಪರಾರಿ

ತಡರಾತ್ರಿ ಶವ ಸಾಗಿಸಿದ್ದ ಇಬ್ಬರು ಆರೋಪಿಗಳು

ಸುಬ್ರಹ್ಮಣಿ ಮತ್ತು ಸೆಂಥಿಲ್ ಇಬ್ಬರೂ ಸೇರಿ ತಿಲಕನಗರದಲ್ಲಿರುವ ಸುಬ್ರಹ್ಮಣಿ ಮನೆಯಲ್ಲಿ ಆಕೆಯನ್ನು ಕೊಲೆ ಮಾಡಿ, ಮೃತ ದೇಹವನ್ನು ಮಧ್ಯರಾತ್ರಿ 1.30ರ ಹೊತ್ತಿಗೆ ಮನೆಯಿಂದ 100 ಮೀ ದೂರದಲ್ಲಿರುವ ಜಾಗಕ್ಕೆ ಕೊಂಡೊಯ್ದಿದ್ದರು. ಶವವನ್ನು ಹೆಗಲ ಮೇಲೆ ಹೊತ್ತು ಹೋಗಿ ಕಳೆದ 2 ವರ್ಷಗಳಿಂದ ಅದೇ ಜಾಗದಲ್ಲಿ ನಿಂತಿದ್ದಆಟೋವೊಂದರಲ್ಲಿ ಇಟ್ಟಿದ್ದಾಗಿ ಪೊಲೀಸರು ಹೇಳಿದ್ದಾರೆ.

ಆರೋಪಿಗಳಾದ ಸುಬ್ರಹ್ಮಣಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದರೆ, ಸೆಂಥಿಲ್ ಕೂಲಿ ಕೆಲಸ ಮಾಡುತ್ತಿದ್ದನು. ಘಟನೆಯ ನಂತರ ತಿಲಕನಗರ ಪೊಲೀಸರು ಶೋಧ ಕಾರ್ಯ ಆರಂಭಿಸಿ, ಇಬ್ಬರನ್ನೂ ಬಂಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ