AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lumpy Skin Disease: ರಾಸುಗಳನ್ನು ಚರ್ಮಗಂಟು ಕಾಯಿಲೆಯಿಂದ ಈ ಲಸಿಕೆ ಕಾಪಾಡಬಲ್ಲದು

ದೇಶೀಯ ಲಸಿಕೆಗಳ ಬಳಕೆಯಿಂದ ಚರ್ಮಗಂಟು ರೋಗವನ್ನು ನೂರಕ್ಕೆ ನೂರರಷ್ಟು ತಡೆಗಟ್ಟಲು ಸಾಧ್ಯವಿದೆ ಎಂದು ತಜ್ಞರು ಹೇಳಿದ್ದಾರೆ.

Lumpy Skin Disease: ರಾಸುಗಳನ್ನು ಚರ್ಮಗಂಟು ಕಾಯಿಲೆಯಿಂದ ಈ ಲಸಿಕೆ ಕಾಪಾಡಬಲ್ಲದು
ಚರ್ಮಗಂಟು ರೋಗ ಬಾಧಿತ ಹಸು (ಸಂಗ್ರಹ ಚಿತ್ರ)Image Credit source: PTI
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 17, 2023 | 3:00 PM

Share

ಬೆಂಗಳೂರು: ಚರ್ಮಗಂಟು ಕಾಯಿಲೆಯು ಕರ್ನಾಟಕದಲ್ಲಿಯೂ ರಾಸುಗಳನ್ನು ತೀವ್ರವಾಗಿ ಕಾಡುತ್ತಿದೆ. 2020ರಿಂದೀಚೆಗೆ ಸುಮಾರು 2 ಲಕ್ಷ ರಾಸುಗಳು ಈ ಕಾಯಿಲೆಯಿಂದ ಸಾವನ್ನಪ್ಪಿವೆ. ಈ ಕಾಯಿಲೆಯನ್ನು ಭಾರತೀಯ ಕೃಷಿ ಸಂಶೋಧನಾ ಪ್ರತಿಷ್ಠಾನ (Indian Council for Agricultural Research – ICAR), ಪಶುಆರೋಗ್ಯ ಸಂಶೋಧನಾ ಸಂಸ್ಥೆ (Indian Veterinary Research Institute – IVRI), ಗೊರಸು ಪ್ರಾಣಿಗಳ ಸಂಶೋಧನಾ ಸಂಸ್ಥೆ (National Research Centre on Equines – NRCE) ಅಭಿವೃದ್ಧಿಪಡಿಸಿರುವ ಲಸಿಕೆಯಿಂದ ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಪಶುಸಾಂಕ್ರಾಮಿಕ ರೋಗ ನಿಯಂತ್ರಣ ಕೇಂದ್ರದ ನಿರ್ದೇಶಕ ಡಾ ಬಿ.ಆರ್.ಗುಲಾಟಿ, ದೇಶೀಯ ಲಸಿಕೆಗಳ ಬಳಕೆಯಿಂದ ಚರ್ಮಗಂಟು ರೋಗವನ್ನು ನೂರಕ್ಕೆ ನೂರರಷ್ಟು ತಡೆಗಟ್ಟಲು ಸಾಧ್ಯವಿದೆ. ಕರ್ನಾಟಕದ ಮಾಲೂರು ಮತ್ತು ಗುಜರಾತ್​ನ ಅಹಮದಾಬಾದ್​ನಲ್ಲಿರುವ ಔಷಧ ತಯಾರಿಕಾ ಕಂಪನಿಗಳು ಈ ಲಸಿಕೆಗಳ ಉತ್ಪಾದನೆಗಾಗಿ ಒಪ್ಪಂದ ಮಾಡಿಕೊಂಡಿವೆ. ಮಾಲೂರಿನ ಬಯೊವೆಟ್ ಕಂಪನಿಯು ಪ್ರಾಯೋಗಿಕ ಲಸಿಕೆಗಳನ್ನೂ ಒದಗಿಸಿದೆ. ಪಶು ಆರೋಗ್ಯ ಕೇಂದ್ರದ ಅನುಮೋದನೆಯ ನಂತರ ಈ ಲಸಿಕೆಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.

ಕುರಿ ಮತ್ತು ಮೇಕೆಗಳನ್ನು ಬಾಧಿಸುವ ವರ್ಗಕ್ಕೆ ಚರ್ಮಗಂಟು ಹರಡುವ ಎಲ್​ಎಸ್​ಡಿ ವೈರಸ್ ಸಹ ಸೇರುತ್ತದೆ. ಮೇಕೆಗೆ ಕೊಡುವ ಲಸಿಕೆಯನ್ನು ಹಸುಗಳಿಗೂ ಕೊಡುವ ಮೂಲಕ ಚರ್ಮಗಂಟು ರೋಗ ತಡೆಗೆ ಪ್ರಯತ್ನಿಸಲಾಗುತ್ತಿದೆ. ಆದರೆ ಈ ಲಸಿಕೆಯು ರೋಗದ ಸಾಧ್ಯತೆಯನ್ನು ಶೇ 70ರಿಂದ 80ರಷ್ಟು ಮಾತ್ರವೇ ಕಡಿಮೆ ಮಾಡುತ್ತಿತ್ತು. ಇದೀಗ ಹಸುಗಳಿಗೆ ಪ್ರತ್ಯೇಕ ಲಸಿಕೆ ತಯಾರಾಗಿರುವುದು ರೋಗ ನಿಯಂತ್ರಣದ ಅವಕಾಶವನ್ನು ಹೆಚ್ಚಿಸಿದೆ.

ಕರ್ನಾಟಕದಲ್ಲಿ ಈವರೆಗೆ 3 ಲಕ್ಷಕ್ಕೂ ಹೆಚ್ಚು ಚರ್ಮಗಂಟು ಕಾಯಿಲೆ ಪ್ರಕರಣಗಳು ವರದಿಯಾಗಿವೆ. 27,000 ರಾಸುಗಳು ಸಾವನ್ನಪ್ಪಿವೆ. ಈ ಕಾಯಿಲೆ ಮನುಷ್ಯರಿಗೆ ಬರುವುದಿಲ್ಲ. ಆದರೆ ಇಂಥ ಹಸುಗಳಿಂದ ಕರೆದ ಹಾಲನ್ನು ಸೇವಿಸುವ ಮೊದಲು ಚೆನ್ನಾಗಿ ಕುದಿಸಬೇಕು ಎಂದು ಪಶುವೈದ್ಯರು ಸಲಹೆ ಮಾಡುತ್ತಾರೆ.

ಇದನ್ನೂ ಓದಿ: ಚರ್ಮಗಂಟು ರೋಗ: ಹಾಸನದ ಐತಿಹಾಸಿಕ ಬೂಕನಬೆಟ್ಟದ ರಂಗನಾಥ ಸ್ವಾಮಿ ರಾಸುಗಳ ಜಾತ್ರಾ ಮಹೋತ್ಸವ ರದ್ದು

ಚರ್ಮಗಂಟು ಕಾಯಿಲೆಯ ಬಗ್ಗೆ ಮತ್ತಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Tue, 17 January 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!